<p><strong>ಚಳ್ಳಕೆರೆ:</strong> ತಾಲ್ಲೂಕಿನ ಗ್ರಾಮವೊಂದರ ಯುವಕ ಮಂಜುನಾಥ (25) ಅದೇ ಗ್ರಾಮದ 17 ವರ್ಷದ ಬಾಲಕಿಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ವಿವಾಹವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.</p>.<p><strong>ಘಟನೆಯ ವಿವರ: </strong>ನವೆಂಬರ್ 9ರಂದು ಮಂಜುನಾಥ ಬಾಲಕಿಯನ್ನು ಪುಸಲಾಯಿಸಿ ತನ್ನ ಬೈಕ್ ನಲ್ಲಿ ಹತ್ತಿಸಿಕೊಂಡು ಪಾವಗಡ ತಾಲ್ಲೂಕಿನ ಬೆಳ್ಳಿಬಟ್ಲು ಗ್ರಾಮದ ತನ್ನ ಸ್ನೇಹಿತನ ಮನೆಗೆ ಕರೆದುಕೊಂಡು ಬಂದಿದ್ದಾನೆ. ಅಂದೇ ಶೈಲಾಪುರ ಗ್ರಾಮದ ಆಂಜನೇಯ ದೇವಾಲಯದಲ್ಲಿ ವಿವಾಹವಾಗಿದ್ದಾನೆ. ನಂತರ ಬಾಲಕಿಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.</p>.<p>ಮಗಳು ಕಾಣೆಯಾಗಿದ್ದಾಳೆ ಎಂದು ಬಾಲಕಿಯ ಪೋಷಕರು ಚಳ್ಳಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನವೆಂಬರ್ 13ರಂದು ಬಾಲಕಿಯು ಯುವಕನೊಂದಿಗೆ ಪರುಶುರಾಂಪುರದಲ್ಲಿ ಪತ್ತೆಯಾಗಿದ್ದು, ಠಾಣೆಯ ಪಿಎಸ್ಐ ಪಿ.ಆರ್.ರಾಘವೇಂದ್ರ ನೇತೃತ್ವದ ತಂಡ ಬಾಲಕಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿ ಸಿದಾಗ ನಡೆದ ಘಟನೆಯನ್ನು ವಿವರಿಸಿದ್ದಾಳೆ.<br />ಮಂಜುನಾಥನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪೊಲೀಸರು ದೂರು ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.<br />ಬಾಲಕಿಯನ್ನು ಚಿತ್ರದುರ್ಗದ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ:</strong> ತಾಲ್ಲೂಕಿನ ಗ್ರಾಮವೊಂದರ ಯುವಕ ಮಂಜುನಾಥ (25) ಅದೇ ಗ್ರಾಮದ 17 ವರ್ಷದ ಬಾಲಕಿಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ವಿವಾಹವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.</p>.<p><strong>ಘಟನೆಯ ವಿವರ: </strong>ನವೆಂಬರ್ 9ರಂದು ಮಂಜುನಾಥ ಬಾಲಕಿಯನ್ನು ಪುಸಲಾಯಿಸಿ ತನ್ನ ಬೈಕ್ ನಲ್ಲಿ ಹತ್ತಿಸಿಕೊಂಡು ಪಾವಗಡ ತಾಲ್ಲೂಕಿನ ಬೆಳ್ಳಿಬಟ್ಲು ಗ್ರಾಮದ ತನ್ನ ಸ್ನೇಹಿತನ ಮನೆಗೆ ಕರೆದುಕೊಂಡು ಬಂದಿದ್ದಾನೆ. ಅಂದೇ ಶೈಲಾಪುರ ಗ್ರಾಮದ ಆಂಜನೇಯ ದೇವಾಲಯದಲ್ಲಿ ವಿವಾಹವಾಗಿದ್ದಾನೆ. ನಂತರ ಬಾಲಕಿಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.</p>.<p>ಮಗಳು ಕಾಣೆಯಾಗಿದ್ದಾಳೆ ಎಂದು ಬಾಲಕಿಯ ಪೋಷಕರು ಚಳ್ಳಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನವೆಂಬರ್ 13ರಂದು ಬಾಲಕಿಯು ಯುವಕನೊಂದಿಗೆ ಪರುಶುರಾಂಪುರದಲ್ಲಿ ಪತ್ತೆಯಾಗಿದ್ದು, ಠಾಣೆಯ ಪಿಎಸ್ಐ ಪಿ.ಆರ್.ರಾಘವೇಂದ್ರ ನೇತೃತ್ವದ ತಂಡ ಬಾಲಕಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿ ಸಿದಾಗ ನಡೆದ ಘಟನೆಯನ್ನು ವಿವರಿಸಿದ್ದಾಳೆ.<br />ಮಂಜುನಾಥನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪೊಲೀಸರು ದೂರು ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.<br />ಬಾಲಕಿಯನ್ನು ಚಿತ್ರದುರ್ಗದ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>