<p><strong>ದಾವಣಗೆರೆ: </strong>ವ್ಯಕ್ತಿಯೊಬ್ಬರಿಗೆ ನಕಲಿ ಬಂಗಾರದ ಬಿಲ್ಲೆಗಳನ್ನು ನೀಡಿ ₹3.50 ಲಕ್ಷವನ್ನು ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.</p>.<p>ಬೆಂಗಳೂರಿನ ಮೂಡ್ಲಪಾಳ್ಯದ ನಿವಾಸಿ ಶ್ರೀನಿವಾಸ ಮೋಸ ಹೋದವರು. ಶಿವಮೊಗ್ಗದ ಹರೀಶ್ ಹಾಗೂ ಆತನ ಸಹಚರ ಮೋಸ ಮಾಡಿದವರು.</p>.<p>ಹೋಟೆಲ್ನಲ್ಲಿ ಕೆಲಸ ಮಾಡುವ ಶ್ರೀನಿವಾಸ್ಗೆ ಕರೆ ಮಾಡಿದ ಹರೀಶ್ ‘ನಾನು ನಿಮ್ಮ ಹೋಟೆಲ್ಗೆ ಪ್ರತಿ ದಿವಸ ಬರುತ್ತೇನೆ. ನೀವು ನನ್ನನ್ನು ನೋಡಿದ್ದೀರಿ’ ಎಂದು ಪರಿಚಯ ಮಾಡಿಕೊಂಡ.</p>.<p>ಮತ್ತೊಂದು ದಿವಸ ಕರೆ ಮಾಡಿ ‘ಕಲಬುರ್ಗಿಯಲ್ಲಿರುವ ನನ್ನ ಅಜ್ಜನವರು ಒಂದು ತಿಂಗಳ ಹಿಂದೆ ಮನೆ ಫೌಂಡೇಶನ್ ತೆಗೆಯುತ್ತಿರುವಾಗ ಅವರಿಗೆ ಐದು ಗಡಿಗೆ ನಿಧಿ ಸಿಕ್ಕಿದೆ. ನಿಮಗೆ ಬೇಕಾದರೆ ಒಂದು ಕೆ.ಜಿಯಷ್ಟು ಕೊಡುತ್ತೇನೆ. ಈ ವಿಷಯವನ್ನು ಯಾರಿಗೂ ಹೇಳಬೇಡ. ಬೇಕಾದರೆ ಸ್ಯಾಂಪಲ್ ಕೊಡುತ್ತೇನೆ ಶಿವಮೊಗ್ಗಕ್ಕೆ ಬನ್ನಿ’ ಎಂದು ತಿಳಿಸಿದ್ದಾನೆ.</p>.<p>ಅದರಂತೆ ಶ್ರೀನಿವಾಸ ಶಿವಮೊಗ್ಗಕ್ಕೆ ಬಂದಿದ್ದು, ನಂತರ ಚೀಲೂರಿಗೆ ಕರೆಸಿಕೊಂಡ ಹರೀಶ್ ಕರೆಸಿಕೊಂಡಿದ್ದಾನೆ. ಒಂದು ಬಿಲ್ಲೆಯನ್ನು ನೀಡಿದ್ದಾನೆ. ಇದನ್ನು ಪರೀಕ್ಷಿಸಿದಾಗ ಅದು ಅಸಲಿ ಬಂಗಾರವಾಗಿತ್ತು. ಆನಂತರ ಇಬ್ಬರ ನಡುವೆ ಮಾತುಕತೆ ನಡೆದಿದ್ದು, ಒಂದು ಕೆಜಿ ಬಂಗಾರ ನೀಡುತ್ತೇನೆ. ₹5 ಲಕ್ಷ ಕೊಟ್ಟರೆ ಸಾಕು’ ಎಂದು ಹೇಳಿ ನಂಬಿಸಿದ್ದಾನೆ.</p>.<p>ಇದನ್ನು ನಂಬಿದ ಶ್ರೀನಿವಾಸ್ ₹ 3.50 ಲಕ್ಷ ತೆಗೆದುಕೊಂಡು ಚೀಲೂರಿಗೆ ಬಂದಾಗ ಆರೋಪಿಗಳು ಹಣ ತೆಗೆದುಕೊಂಡು ಬೈಕ್ ಹತ್ತಿ ಪರಾರಿಯಾಗಿದ್ದಾರೆ.</p>.<p>ನ್ಯಾಮತಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ವ್ಯಕ್ತಿಯೊಬ್ಬರಿಗೆ ನಕಲಿ ಬಂಗಾರದ ಬಿಲ್ಲೆಗಳನ್ನು ನೀಡಿ ₹3.50 ಲಕ್ಷವನ್ನು ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.</p>.<p>ಬೆಂಗಳೂರಿನ ಮೂಡ್ಲಪಾಳ್ಯದ ನಿವಾಸಿ ಶ್ರೀನಿವಾಸ ಮೋಸ ಹೋದವರು. ಶಿವಮೊಗ್ಗದ ಹರೀಶ್ ಹಾಗೂ ಆತನ ಸಹಚರ ಮೋಸ ಮಾಡಿದವರು.</p>.<p>ಹೋಟೆಲ್ನಲ್ಲಿ ಕೆಲಸ ಮಾಡುವ ಶ್ರೀನಿವಾಸ್ಗೆ ಕರೆ ಮಾಡಿದ ಹರೀಶ್ ‘ನಾನು ನಿಮ್ಮ ಹೋಟೆಲ್ಗೆ ಪ್ರತಿ ದಿವಸ ಬರುತ್ತೇನೆ. ನೀವು ನನ್ನನ್ನು ನೋಡಿದ್ದೀರಿ’ ಎಂದು ಪರಿಚಯ ಮಾಡಿಕೊಂಡ.</p>.<p>ಮತ್ತೊಂದು ದಿವಸ ಕರೆ ಮಾಡಿ ‘ಕಲಬುರ್ಗಿಯಲ್ಲಿರುವ ನನ್ನ ಅಜ್ಜನವರು ಒಂದು ತಿಂಗಳ ಹಿಂದೆ ಮನೆ ಫೌಂಡೇಶನ್ ತೆಗೆಯುತ್ತಿರುವಾಗ ಅವರಿಗೆ ಐದು ಗಡಿಗೆ ನಿಧಿ ಸಿಕ್ಕಿದೆ. ನಿಮಗೆ ಬೇಕಾದರೆ ಒಂದು ಕೆ.ಜಿಯಷ್ಟು ಕೊಡುತ್ತೇನೆ. ಈ ವಿಷಯವನ್ನು ಯಾರಿಗೂ ಹೇಳಬೇಡ. ಬೇಕಾದರೆ ಸ್ಯಾಂಪಲ್ ಕೊಡುತ್ತೇನೆ ಶಿವಮೊಗ್ಗಕ್ಕೆ ಬನ್ನಿ’ ಎಂದು ತಿಳಿಸಿದ್ದಾನೆ.</p>.<p>ಅದರಂತೆ ಶ್ರೀನಿವಾಸ ಶಿವಮೊಗ್ಗಕ್ಕೆ ಬಂದಿದ್ದು, ನಂತರ ಚೀಲೂರಿಗೆ ಕರೆಸಿಕೊಂಡ ಹರೀಶ್ ಕರೆಸಿಕೊಂಡಿದ್ದಾನೆ. ಒಂದು ಬಿಲ್ಲೆಯನ್ನು ನೀಡಿದ್ದಾನೆ. ಇದನ್ನು ಪರೀಕ್ಷಿಸಿದಾಗ ಅದು ಅಸಲಿ ಬಂಗಾರವಾಗಿತ್ತು. ಆನಂತರ ಇಬ್ಬರ ನಡುವೆ ಮಾತುಕತೆ ನಡೆದಿದ್ದು, ಒಂದು ಕೆಜಿ ಬಂಗಾರ ನೀಡುತ್ತೇನೆ. ₹5 ಲಕ್ಷ ಕೊಟ್ಟರೆ ಸಾಕು’ ಎಂದು ಹೇಳಿ ನಂಬಿಸಿದ್ದಾನೆ.</p>.<p>ಇದನ್ನು ನಂಬಿದ ಶ್ರೀನಿವಾಸ್ ₹ 3.50 ಲಕ್ಷ ತೆಗೆದುಕೊಂಡು ಚೀಲೂರಿಗೆ ಬಂದಾಗ ಆರೋಪಿಗಳು ಹಣ ತೆಗೆದುಕೊಂಡು ಬೈಕ್ ಹತ್ತಿ ಪರಾರಿಯಾಗಿದ್ದಾರೆ.</p>.<p>ನ್ಯಾಮತಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>