ಹಸಿವು ಸೂಚ್ಯಂಕದಲ್ಲಿ ಬೇರೆ ದೇಶಗಳಿಗಿಂತ ಭಾರತದ ಸ್ಥಾನ ಕಳಪೆಯಾಗಿದೆ. ರಾಜ್ಯದಲ್ಲಿಯೂ ಹೆಚ್ಚು ಮಕ್ಕಳು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದರೆ, ದಾವಣಗೆರೆ ಇದಕ್ಕೆ ಅಪವಾದ. ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪುನರ್ ವಸತಿ ಕೇಂದ್ರ, ಅಪೌಷ್ಟಿಕ ಮಕ್ಕಳ ಪಾಲನೆಯ ವಿಷಯದಲ್ಲಿ ಇತರೆ ಕೇಂದ್ರಗಳಿಗೆ ಮಾದರಿಯಾಗಿದೆ.