<p>ಹರಿಹರ: ದೇಶ ಮತ್ತು ಕರ್ನಾಟಕದಲ್ಲಿ ಜಾರಿಯಲ್ಲಿರುವ ಉದಾರೀಕರಣದ ಆರ್ಥಿಕ ನೀತಿಗಳು ಸಾಮಾನ್ಯ ಜನರ ಬದುಕನ್ನು ಅಸ್ತವ್ಯಸ್ತಗೊಳಿಸುತ್ತಿದ್ದು, ಇವುಗಳ ವಿರುದ್ಧ ಶ್ರಮಿಕ ವರ್ಗ ಒಗ್ಗೂಡದಿದ್ದರೆ ಭವಿಷ್ಯದ ಬದುಕು ಮತ್ತಷ್ಟು ದುಸ್ತರವಾಗಲಿದೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಡಾ.ಎ.ಬಿ.ರಾಮಚಂದ್ರಪ್ಪ ಆತಂಕ ವ್ಯಕ್ತಪಡಿಸಿದರು.</p><p><br>ಜಾಗತೀಕರಣ ಬದುಕು ಕಬಳಿಸುವ ಶಕ್ತಿ ಹೊಂದಿದೆ ಎಂದು ಹೊರವಲಯದ ಮೈತ್ರಿವನದಲ್ಲಿ ಸೋಮವಾರ ಅಖಿಲ ಭಾರತ ಕಿಸಾನ ಸಭಾದ ರಾಜ್ಯ ಮಟ್ಟದ ಅಧ್ಯಯನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.<br> ಇದು ಕೇವಲ ಆರ್ಥಿಕ ಸುಧಾರಣೆಯಲ್ಲ, ಸಾಮಾನ್ಯ ರೈತರು ಮತ್ತು ಕಾರ್ಮಿಕರ ಬದುಕನ್ನು ನುಂಗಿ ನೀರು ಕುಡಿಯುತ್ತಿರುವ "ರಾಕ್ಷಸೀ ಶಕ್ತಿ"ಯಾಗಿ ಮಾರ್ಪಟ್ಟಿದೆ. ಕಳೆದ ಕೆಲವು ದಶಕಗಳ ಆರ್ಥಿಕ ನೀತಿಗಳಿಂದಾಗಿ ಶ್ರೀಮಂತರು ಮತ್ತು ಬಡವರ ನಡುವಿನ ಕಂದಕ ಹೆಚ್ಚಾಗುತ್ತಲೆ ಇದೆ.</p><p><br>ಇಂದಿನ ಕಾಲಘಟ್ಟದಲ್ಲಿ ದಲಿತ, ರೈತ, ಕಾರ್ಮಿಕ, ವಿದ್ಯಾರ್ಥಿ ಮತ್ತು ಮಹಿಳಾ ಚಳವಳಿಗಳು ತಮ್ಮ ಪ್ರತ್ಯೇಕತೆಯನ್ನು ಮರೆತು ಒಂದಾಗಬೇಕಿದೆ. ಕಾರ್ಪೊರೇಟ್ ಶಕ್ತಿಗಳ ಕಪಿಮುಷ್ಟಿಯಿಂದ ದೇಶವನ್ನು ರಕ್ಷಿಸಲು ಈ ಎಲ್ಲ ಹೋರಾಟಗಳು ಒಂದೇ ಸೂರಿನಡಿ ಬರುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದರು.</p><p><br>ಬಹುರಾಷ್ಟ್ರೀಯ ಕಂಪನಿಗಳು (ಎಂಎನ್ ಸಿ) ನಮ್ಮ ಭೂಮಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ಮೇಲೆ ಕಣ್ಣಿಟ್ಟಿವೆ. ನಮ್ಮ ನಾಡಿನ ಹಿತಾಸಕ್ತಿ ಹಾಗೂ ಅಸ್ಮಿತೆಯನ್ನು ಕಾಪಾಡಿಕೊಳ್ಳಲು ನಮ್ಮ "ನೆಲ, ಜಲ ಮತ್ತು ಸಂಸ್ಕೃತಿ"ಯನ್ನು ಈ ಕಂಪನಿಗಳ ಹಿಡಿತದಿಂದ ಮುಕ್ತಗೊಳಿಸಬೇಕಿದೆ.</p><p><br>ಆಳುವ ವರ್ಗವು ಜನರ ಅಸಹಾಯಕತೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಆದ್ದರಿಂದ ರೈತರು ಮತ್ತು ಕಾರ್ಮಿಕರು ಕೇವಲ ಆರ್ಥಿಕ ಬೇಡಿಕೆಗಳಿಗಾಗಿ ಪ್ರತಿಭಟಿಸದೆ, ರಾಜಕೀಯ ಅಧಿಕಾರ ಮತ್ತು ಸಾಂವಿಧಾನಿಕ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು.</p><p><br>ಕೃಷಿ ಕ್ಷೇತ್ರದ ವ್ಯಾಪಾರೀಕರಣವನ್ನು ತಡೆಯಲು ಜನಪದ ಚಳುವಳಿಗಳು ಮರುಜೀವ ಪಡೆಯಬೇಕಿದೆ. ಶ್ರಮಿಕ ವರ್ಗವು ಸಂಘಟಿತವಾಗಿ ಹೋರಾಡಿದಾಗ ಮಾತ್ರ ಸಮಾನತೆಯ ಸಮಾಜ ನಿರ್ಮಾಣ ಸಾಧ್ಯ ಎಂದು ಕರೆ ನೀಡಿದರು. </p><p><br>ಈ ಸಂದರ್ಭದಲ್ಲಿ ಅಖಿಲ ಭಾರತ ಕಿಸಾನ ಸಭಾದ ರಾಜ್ಯ ಘಟಕ ಅಧ್ಯಕ್ಷ ಡಾ.ಸಿದ್ದನಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ಪಿ.ವಿ.ಲೋಕೇಶ, ಜಿಲ್ಲಾಧ್ಯಕ್ಷ ಎಚ್.ಜಿ.ಉಮೇಶ ಹಾಗೂ ಹರಿಹರ ತಾಲೂಕು ಸಿಪಿಐ ಕಾರ್ಯದರ್ಶಿ ಎಚ್.ಕೆ. ಕೊಟ್ರಪ್ಪ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಶಿಬಿರಾರ್ಥಿಗಳು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಿಹರ: ದೇಶ ಮತ್ತು ಕರ್ನಾಟಕದಲ್ಲಿ ಜಾರಿಯಲ್ಲಿರುವ ಉದಾರೀಕರಣದ ಆರ್ಥಿಕ ನೀತಿಗಳು ಸಾಮಾನ್ಯ ಜನರ ಬದುಕನ್ನು ಅಸ್ತವ್ಯಸ್ತಗೊಳಿಸುತ್ತಿದ್ದು, ಇವುಗಳ ವಿರುದ್ಧ ಶ್ರಮಿಕ ವರ್ಗ ಒಗ್ಗೂಡದಿದ್ದರೆ ಭವಿಷ್ಯದ ಬದುಕು ಮತ್ತಷ್ಟು ದುಸ್ತರವಾಗಲಿದೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಡಾ.ಎ.ಬಿ.ರಾಮಚಂದ್ರಪ್ಪ ಆತಂಕ ವ್ಯಕ್ತಪಡಿಸಿದರು.</p><p><br>ಜಾಗತೀಕರಣ ಬದುಕು ಕಬಳಿಸುವ ಶಕ್ತಿ ಹೊಂದಿದೆ ಎಂದು ಹೊರವಲಯದ ಮೈತ್ರಿವನದಲ್ಲಿ ಸೋಮವಾರ ಅಖಿಲ ಭಾರತ ಕಿಸಾನ ಸಭಾದ ರಾಜ್ಯ ಮಟ್ಟದ ಅಧ್ಯಯನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.<br> ಇದು ಕೇವಲ ಆರ್ಥಿಕ ಸುಧಾರಣೆಯಲ್ಲ, ಸಾಮಾನ್ಯ ರೈತರು ಮತ್ತು ಕಾರ್ಮಿಕರ ಬದುಕನ್ನು ನುಂಗಿ ನೀರು ಕುಡಿಯುತ್ತಿರುವ "ರಾಕ್ಷಸೀ ಶಕ್ತಿ"ಯಾಗಿ ಮಾರ್ಪಟ್ಟಿದೆ. ಕಳೆದ ಕೆಲವು ದಶಕಗಳ ಆರ್ಥಿಕ ನೀತಿಗಳಿಂದಾಗಿ ಶ್ರೀಮಂತರು ಮತ್ತು ಬಡವರ ನಡುವಿನ ಕಂದಕ ಹೆಚ್ಚಾಗುತ್ತಲೆ ಇದೆ.</p><p><br>ಇಂದಿನ ಕಾಲಘಟ್ಟದಲ್ಲಿ ದಲಿತ, ರೈತ, ಕಾರ್ಮಿಕ, ವಿದ್ಯಾರ್ಥಿ ಮತ್ತು ಮಹಿಳಾ ಚಳವಳಿಗಳು ತಮ್ಮ ಪ್ರತ್ಯೇಕತೆಯನ್ನು ಮರೆತು ಒಂದಾಗಬೇಕಿದೆ. ಕಾರ್ಪೊರೇಟ್ ಶಕ್ತಿಗಳ ಕಪಿಮುಷ್ಟಿಯಿಂದ ದೇಶವನ್ನು ರಕ್ಷಿಸಲು ಈ ಎಲ್ಲ ಹೋರಾಟಗಳು ಒಂದೇ ಸೂರಿನಡಿ ಬರುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದರು.</p><p><br>ಬಹುರಾಷ್ಟ್ರೀಯ ಕಂಪನಿಗಳು (ಎಂಎನ್ ಸಿ) ನಮ್ಮ ಭೂಮಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ಮೇಲೆ ಕಣ್ಣಿಟ್ಟಿವೆ. ನಮ್ಮ ನಾಡಿನ ಹಿತಾಸಕ್ತಿ ಹಾಗೂ ಅಸ್ಮಿತೆಯನ್ನು ಕಾಪಾಡಿಕೊಳ್ಳಲು ನಮ್ಮ "ನೆಲ, ಜಲ ಮತ್ತು ಸಂಸ್ಕೃತಿ"ಯನ್ನು ಈ ಕಂಪನಿಗಳ ಹಿಡಿತದಿಂದ ಮುಕ್ತಗೊಳಿಸಬೇಕಿದೆ.</p><p><br>ಆಳುವ ವರ್ಗವು ಜನರ ಅಸಹಾಯಕತೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಆದ್ದರಿಂದ ರೈತರು ಮತ್ತು ಕಾರ್ಮಿಕರು ಕೇವಲ ಆರ್ಥಿಕ ಬೇಡಿಕೆಗಳಿಗಾಗಿ ಪ್ರತಿಭಟಿಸದೆ, ರಾಜಕೀಯ ಅಧಿಕಾರ ಮತ್ತು ಸಾಂವಿಧಾನಿಕ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು.</p><p><br>ಕೃಷಿ ಕ್ಷೇತ್ರದ ವ್ಯಾಪಾರೀಕರಣವನ್ನು ತಡೆಯಲು ಜನಪದ ಚಳುವಳಿಗಳು ಮರುಜೀವ ಪಡೆಯಬೇಕಿದೆ. ಶ್ರಮಿಕ ವರ್ಗವು ಸಂಘಟಿತವಾಗಿ ಹೋರಾಡಿದಾಗ ಮಾತ್ರ ಸಮಾನತೆಯ ಸಮಾಜ ನಿರ್ಮಾಣ ಸಾಧ್ಯ ಎಂದು ಕರೆ ನೀಡಿದರು. </p><p><br>ಈ ಸಂದರ್ಭದಲ್ಲಿ ಅಖಿಲ ಭಾರತ ಕಿಸಾನ ಸಭಾದ ರಾಜ್ಯ ಘಟಕ ಅಧ್ಯಕ್ಷ ಡಾ.ಸಿದ್ದನಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ಪಿ.ವಿ.ಲೋಕೇಶ, ಜಿಲ್ಲಾಧ್ಯಕ್ಷ ಎಚ್.ಜಿ.ಉಮೇಶ ಹಾಗೂ ಹರಿಹರ ತಾಲೂಕು ಸಿಪಿಐ ಕಾರ್ಯದರ್ಶಿ ಎಚ್.ಕೆ. ಕೊಟ್ರಪ್ಪ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಶಿಬಿರಾರ್ಥಿಗಳು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>