<p>ದಾವಣಗೆರೆ: ‘ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ ಅವರ ಜನ್ಮದಿನದ ಪ್ರಯುಕ್ತ ನಗರದಲ್ಲಿ ಈಚೆಗೆ ನಡೆದ ಕಾರ್ಯಕ್ರಮವು ಅತೃಪ್ತ ಆತ್ಮಗಳ ಕಾರ್ಯಕ್ರಮವಾಗಿತ್ತೇ’ ಎಂದು ‘ಧೂಡಾ’ ಅಧ್ಯಕ್ಷ ದಿನೇಶ್ ಶೆಟ್ಟಿ ಪ್ರಶ್ನಿಸಿದರು.</p>.<p>‘ಜಿ.ಎಂ.ಸಿದ್ದೇಶ್ವರ ಅವರು ಯಾವ ಪುರುಷಾರ್ಥಕ್ಕೆ ಜನ್ಮದಿನ ಆಚರಿಸಿಕೊಂಡರೋ ಗೊತ್ತಿಲ್ಲ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಜೆಪಿಯ ಕೆಲವು ಅತೃಪ್ತರು ಅವರ ಪಕ್ಷದಲ್ಲಿನ ಸಮಸ್ಯೆಗಳನ್ನು ಹೇಳಿಕೊಳ್ಳದೇ, ಶಾಸಕ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದ ಬಗ್ಗೆ ಮಾತನಾಡಿರುವುದು ಖಂಡನೀಯ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಜಿ.ಎಂ.ಸಿದ್ದೇಶ್ವರ ಅವರು ಸಂಸದರಾಗಿದ್ದಾಗ ಜಿಲ್ಲೆಗೆ ಯಾವ ಕೊಡುಗೆ ಕೊಟ್ಟಿದ್ದಾರೆ ಎಂಬುದನ್ನು ತಿಳಿಸಲಿ. 20 ವರ್ಷ ಸಂಸದರಾಗಿ, ಕೆಲವು ವರ್ಷ ಸಚಿವರಾಗಿದ್ದಾಗಲೂ, ದಾವಣಗೆರೆಗೆ ವಿಮಾನ ನಿಲ್ದಾಣ ತರಲು ಅವರಿಗೆ ಸಾಧ್ಯವಾಗಲಿಲ್ಲ. ಜಿಲ್ಲೆಯಲ್ಲಿ ಕಾರ್ಖಾನೆಗಳನ್ನೂ ಪ್ರಾರಂಭಿಸಲಿಲ್ಲ. ನಗರದಲ್ಲಿ ಜಿಲೇಬಿ ರೀತಿಯ 3 ಅಂಡರ್ ಪಾಸ್ಗಳನ್ನು ನಿರ್ಮಿಸಿದ್ದೇ ಅವರ ಸಾಧನೆಯಾಗಿದೆ’ ಎಂದು ಟೀಕಿಸಿದರು.</p>.<p>‘ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಈ ಕ್ಷೇತ್ರದ ಮೊದಲ ಮಹಿಳಾ ಸಂಸದರ ಮಾತನಾಡಿರುವುದು ಸರಿಯಲ್ಲ. ಇಂತಹ ಹೇಳಿಕೆಗಳನ್ನು ಜಿಲ್ಲಾ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಸಿಂಹ ಎಂದು ಹೆಸರಿಟ್ಟುಕೊಂಡು ನರಿ ಬುದ್ಧಿ ತೋರಿದ್ದರಿಂದಲೇ ಅವರಿಗೆ ಬಿಜೆಪಿ ಈ ಬಾರಿ ಸ್ಪರ್ಧಿಸಲು ಅವಕಾಶ ನೀಡಲಿಲ್ಲ’ ಎಂದು ವ್ಯಂಗ್ಯವಾಡಿದರು.</p>.<p>‘ಹರಿಹರದ ಮಾಜಿ ಶಾಸಕ ಎಚ್.ಎಸ್.ಶಿವಶಂಕರ್ ಅವರು ಈ ಜಿಲ್ಲೆಯಲ್ಲಿ ಉತ್ತಮ ರಾಜಕೀಯ ಪಟು ಆಗಬೇಕಾದರೆ ಅಭಿವೃದ್ಧಿಗೆ ಪಣ ತೊಟ್ಟಿರುವ ಶಾಮನೂರು ಕುಟುಂಬದ ಸಹವಾಸ ಮಾಡಬೇಕು. ಜನಸಾಮಾನ್ಯರಿಗೆ ಏನನ್ನೂ ಒಳಿತು ಮಾಡದ ಜಿ.ಎಂ.ಸಿದ್ದೇಶ್ವರ್ ಅವರ ಸಹವಾಸ ಮಾಡಿದರೆ ಅವರ ರಾಜಕೀಯ ಭವಿಷ್ಯವೇ ಹಾಳಾಗುತ್ತದೆ’ ಎಂದರು.</p>.<p>ಮಾಜಿ ಮೇಯರ್ ಚಮನ್ಸಾಬ್, ಕಾಂಗ್ರೆಸ್ ಮುಖಂಡರಾದ ಎ.ನಾಗರಾಜ್, ಕೆ.ಬಿ.ಶಿವಕುಮಾರ್, ಅಯೂಬ್ ಪೈಲ್ವಾನ್, ವರುಣ್, ಮಂಜುಳಮ್ಮ, ಮಂಗಳಮ್ಮ, ಶ್ರೀಕಾಂತ್, ಯುವರಾಜ್ ಸೇರಿದಂತೆ ಇನ್ನಿತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ‘ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ ಅವರ ಜನ್ಮದಿನದ ಪ್ರಯುಕ್ತ ನಗರದಲ್ಲಿ ಈಚೆಗೆ ನಡೆದ ಕಾರ್ಯಕ್ರಮವು ಅತೃಪ್ತ ಆತ್ಮಗಳ ಕಾರ್ಯಕ್ರಮವಾಗಿತ್ತೇ’ ಎಂದು ‘ಧೂಡಾ’ ಅಧ್ಯಕ್ಷ ದಿನೇಶ್ ಶೆಟ್ಟಿ ಪ್ರಶ್ನಿಸಿದರು.</p>.<p>‘ಜಿ.ಎಂ.ಸಿದ್ದೇಶ್ವರ ಅವರು ಯಾವ ಪುರುಷಾರ್ಥಕ್ಕೆ ಜನ್ಮದಿನ ಆಚರಿಸಿಕೊಂಡರೋ ಗೊತ್ತಿಲ್ಲ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಜೆಪಿಯ ಕೆಲವು ಅತೃಪ್ತರು ಅವರ ಪಕ್ಷದಲ್ಲಿನ ಸಮಸ್ಯೆಗಳನ್ನು ಹೇಳಿಕೊಳ್ಳದೇ, ಶಾಸಕ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದ ಬಗ್ಗೆ ಮಾತನಾಡಿರುವುದು ಖಂಡನೀಯ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಜಿ.ಎಂ.ಸಿದ್ದೇಶ್ವರ ಅವರು ಸಂಸದರಾಗಿದ್ದಾಗ ಜಿಲ್ಲೆಗೆ ಯಾವ ಕೊಡುಗೆ ಕೊಟ್ಟಿದ್ದಾರೆ ಎಂಬುದನ್ನು ತಿಳಿಸಲಿ. 20 ವರ್ಷ ಸಂಸದರಾಗಿ, ಕೆಲವು ವರ್ಷ ಸಚಿವರಾಗಿದ್ದಾಗಲೂ, ದಾವಣಗೆರೆಗೆ ವಿಮಾನ ನಿಲ್ದಾಣ ತರಲು ಅವರಿಗೆ ಸಾಧ್ಯವಾಗಲಿಲ್ಲ. ಜಿಲ್ಲೆಯಲ್ಲಿ ಕಾರ್ಖಾನೆಗಳನ್ನೂ ಪ್ರಾರಂಭಿಸಲಿಲ್ಲ. ನಗರದಲ್ಲಿ ಜಿಲೇಬಿ ರೀತಿಯ 3 ಅಂಡರ್ ಪಾಸ್ಗಳನ್ನು ನಿರ್ಮಿಸಿದ್ದೇ ಅವರ ಸಾಧನೆಯಾಗಿದೆ’ ಎಂದು ಟೀಕಿಸಿದರು.</p>.<p>‘ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಈ ಕ್ಷೇತ್ರದ ಮೊದಲ ಮಹಿಳಾ ಸಂಸದರ ಮಾತನಾಡಿರುವುದು ಸರಿಯಲ್ಲ. ಇಂತಹ ಹೇಳಿಕೆಗಳನ್ನು ಜಿಲ್ಲಾ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಸಿಂಹ ಎಂದು ಹೆಸರಿಟ್ಟುಕೊಂಡು ನರಿ ಬುದ್ಧಿ ತೋರಿದ್ದರಿಂದಲೇ ಅವರಿಗೆ ಬಿಜೆಪಿ ಈ ಬಾರಿ ಸ್ಪರ್ಧಿಸಲು ಅವಕಾಶ ನೀಡಲಿಲ್ಲ’ ಎಂದು ವ್ಯಂಗ್ಯವಾಡಿದರು.</p>.<p>‘ಹರಿಹರದ ಮಾಜಿ ಶಾಸಕ ಎಚ್.ಎಸ್.ಶಿವಶಂಕರ್ ಅವರು ಈ ಜಿಲ್ಲೆಯಲ್ಲಿ ಉತ್ತಮ ರಾಜಕೀಯ ಪಟು ಆಗಬೇಕಾದರೆ ಅಭಿವೃದ್ಧಿಗೆ ಪಣ ತೊಟ್ಟಿರುವ ಶಾಮನೂರು ಕುಟುಂಬದ ಸಹವಾಸ ಮಾಡಬೇಕು. ಜನಸಾಮಾನ್ಯರಿಗೆ ಏನನ್ನೂ ಒಳಿತು ಮಾಡದ ಜಿ.ಎಂ.ಸಿದ್ದೇಶ್ವರ್ ಅವರ ಸಹವಾಸ ಮಾಡಿದರೆ ಅವರ ರಾಜಕೀಯ ಭವಿಷ್ಯವೇ ಹಾಳಾಗುತ್ತದೆ’ ಎಂದರು.</p>.<p>ಮಾಜಿ ಮೇಯರ್ ಚಮನ್ಸಾಬ್, ಕಾಂಗ್ರೆಸ್ ಮುಖಂಡರಾದ ಎ.ನಾಗರಾಜ್, ಕೆ.ಬಿ.ಶಿವಕುಮಾರ್, ಅಯೂಬ್ ಪೈಲ್ವಾನ್, ವರುಣ್, ಮಂಜುಳಮ್ಮ, ಮಂಗಳಮ್ಮ, ಶ್ರೀಕಾಂತ್, ಯುವರಾಜ್ ಸೇರಿದಂತೆ ಇನ್ನಿತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>