<p><strong>ದಾವಣಗೆರೆ</strong>: ಸ್ವತಂತ್ರ ಚಿಂತನೆ ಮತ್ತು ವಿಶ್ಲೇಷಣಾತ್ಮಕ ಶಕ್ತಿಯನ್ನು ಬೆಳೆಸಿಕೊಳ್ಳದ ಹೊರತು, ಎಷ್ಟೇ ಪದವಿ ಗಳಿಸಿದರೂ ಪ್ರಯೋಜನವಿಲ್ಲ ಎಂದು ಜಿ.ಎಂ. ವಿಶ್ವವಿದ್ಯಾಲಯದ ಕುಲಪತಿ ಎಸ್.ಆರ್. ಶಂಕಪಾಲ್ ಅಭಿಪ್ರಾಯಪಟ್ಟರು.</p>.<p>ವಿಶ್ವವಿದ್ಯಾಲಯದ ಜಿ.ಎಂ. ಹಾಲಮ್ಮ ಸಭಾಂಗಣದಲ್ಲಿ ‘ಕೃತಕ ಬುದ್ದಿಮತ್ತೆಯ ಏಕೀಕರಣದೊಂದಿಗೆ ಯಾಂತ್ರಿಕ ಮತ್ತು ರೊಬೊಟಿಕ್ ವ್ಯವಸ್ಥೆಗಳು’ ಕುರಿತು ಶುಕ್ರವಾರ ಏರ್ಪಡಿಸಿದ್ದ ರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>‘ಕೈಗಾರಿಕೆಗಳು ಮತ್ತು ದೈನಂದಿನ ಜಗತ್ತಿನಲ್ಲಿ ತಂತ್ರಜ್ಞಾನ ವೇಗವಾಗಿ ವಿಕಸನಗೊಳ್ಳುತ್ತಿದೆ. ತಂತ್ರಜ್ಞಾನ ಸುಧಾರಿಸಲು ಪ್ರಯತ್ನಿಸಬೇಕು. ನಿಜವಾದ ಸಮಸ್ಯೆಗಳನ್ನು ಪರಿಹರಿಸಲು ತಂತ್ರಜ್ಞಾನವನ್ನು ಹೇಗೆ ಅನ್ವಯಿಸಬೇಕು ಎಂಬುದರ ಕುರಿತು ಯೋಚಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಸ್ಕೈವರ್ಕ್ಸ್ ಸಲ್ಯೂಷನ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್’ ವ್ಯವಸ್ಥಾಪಕ ಅಜಯ್ ಬಸ್ತಿ, ‘ಮೆಕ್ಯಾನಿಕಲ್ ಎಂಜಿನಿಯರಿಂಗ್ ಹಿನ್ನೆಲೆಯಿಂದ ಬಂದು ಸೆಮಿಕಂಡಕ್ಟರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ಯಾವುದೇ ಕ್ಷೇತ್ರ ಪ್ರವೇಶಿಸಲು ಯಾರಿಗೂ ಮಿತಿಗಳಿಲ್ಲ. ಸಂಶೋಧನೆ ಮತ್ತು ಆವಿಷ್ಕಾರಗಳು ನಿರಂತರವಾಗಿರಲಿ’ ಎಂದು ಹೇಳಿದರು.</p>.<p>ಬೆಂಗಳೂರಿನ ಟ್ರೈಡೆಂಟ್ ಟೆಕ್ಲ್ಯಾಬ್ಸ್ ಲಿಮಿಟೆಡ್ನ ವ್ಯವಸ್ಥಾಪಕ ಅಜಿತ್ ಗೋಪಿನಾಥ್, ವಿಶ್ವವಿದ್ಯಾಲಯದ ಸಂಶೋಧನಾ ಸಲಹೆಗಾರ ಸಿ.ಎಸ್. ರಮೇಶ್, ಸಂಶೋಧನೆ ಮತ್ತು ನಾವೀನ್ಯತೆ ವಿಭಾಗದ ಡೀನ್ ಕೆ.ಎನ್. ಭರತ್, ಪ್ರವೀಣ್ ಜೆ, ಸಂಜಯ್ ಪಾಂಡೆ ಎಂ.ಬಿ., ಶ್ರೀನಿವಾಸ ಸಿ.ವಿ., ರಾಜಶೇಖರ್ ಸೋಮಸಾಗರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಸ್ವತಂತ್ರ ಚಿಂತನೆ ಮತ್ತು ವಿಶ್ಲೇಷಣಾತ್ಮಕ ಶಕ್ತಿಯನ್ನು ಬೆಳೆಸಿಕೊಳ್ಳದ ಹೊರತು, ಎಷ್ಟೇ ಪದವಿ ಗಳಿಸಿದರೂ ಪ್ರಯೋಜನವಿಲ್ಲ ಎಂದು ಜಿ.ಎಂ. ವಿಶ್ವವಿದ್ಯಾಲಯದ ಕುಲಪತಿ ಎಸ್.ಆರ್. ಶಂಕಪಾಲ್ ಅಭಿಪ್ರಾಯಪಟ್ಟರು.</p>.<p>ವಿಶ್ವವಿದ್ಯಾಲಯದ ಜಿ.ಎಂ. ಹಾಲಮ್ಮ ಸಭಾಂಗಣದಲ್ಲಿ ‘ಕೃತಕ ಬುದ್ದಿಮತ್ತೆಯ ಏಕೀಕರಣದೊಂದಿಗೆ ಯಾಂತ್ರಿಕ ಮತ್ತು ರೊಬೊಟಿಕ್ ವ್ಯವಸ್ಥೆಗಳು’ ಕುರಿತು ಶುಕ್ರವಾರ ಏರ್ಪಡಿಸಿದ್ದ ರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p>.<p>‘ಕೈಗಾರಿಕೆಗಳು ಮತ್ತು ದೈನಂದಿನ ಜಗತ್ತಿನಲ್ಲಿ ತಂತ್ರಜ್ಞಾನ ವೇಗವಾಗಿ ವಿಕಸನಗೊಳ್ಳುತ್ತಿದೆ. ತಂತ್ರಜ್ಞಾನ ಸುಧಾರಿಸಲು ಪ್ರಯತ್ನಿಸಬೇಕು. ನಿಜವಾದ ಸಮಸ್ಯೆಗಳನ್ನು ಪರಿಹರಿಸಲು ತಂತ್ರಜ್ಞಾನವನ್ನು ಹೇಗೆ ಅನ್ವಯಿಸಬೇಕು ಎಂಬುದರ ಕುರಿತು ಯೋಚಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಸ್ಕೈವರ್ಕ್ಸ್ ಸಲ್ಯೂಷನ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್’ ವ್ಯವಸ್ಥಾಪಕ ಅಜಯ್ ಬಸ್ತಿ, ‘ಮೆಕ್ಯಾನಿಕಲ್ ಎಂಜಿನಿಯರಿಂಗ್ ಹಿನ್ನೆಲೆಯಿಂದ ಬಂದು ಸೆಮಿಕಂಡಕ್ಟರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ಯಾವುದೇ ಕ್ಷೇತ್ರ ಪ್ರವೇಶಿಸಲು ಯಾರಿಗೂ ಮಿತಿಗಳಿಲ್ಲ. ಸಂಶೋಧನೆ ಮತ್ತು ಆವಿಷ್ಕಾರಗಳು ನಿರಂತರವಾಗಿರಲಿ’ ಎಂದು ಹೇಳಿದರು.</p>.<p>ಬೆಂಗಳೂರಿನ ಟ್ರೈಡೆಂಟ್ ಟೆಕ್ಲ್ಯಾಬ್ಸ್ ಲಿಮಿಟೆಡ್ನ ವ್ಯವಸ್ಥಾಪಕ ಅಜಿತ್ ಗೋಪಿನಾಥ್, ವಿಶ್ವವಿದ್ಯಾಲಯದ ಸಂಶೋಧನಾ ಸಲಹೆಗಾರ ಸಿ.ಎಸ್. ರಮೇಶ್, ಸಂಶೋಧನೆ ಮತ್ತು ನಾವೀನ್ಯತೆ ವಿಭಾಗದ ಡೀನ್ ಕೆ.ಎನ್. ಭರತ್, ಪ್ರವೀಣ್ ಜೆ, ಸಂಜಯ್ ಪಾಂಡೆ ಎಂ.ಬಿ., ಶ್ರೀನಿವಾಸ ಸಿ.ವಿ., ರಾಜಶೇಖರ್ ಸೋಮಸಾಗರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>