<p><strong>ದಾವಣಗೆರೆ:</strong> ಇಲ್ಲಿನ ಜಿ.ಎಂ. ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವವನ್ನು ಜ.11ರಂದು ಬೆಳಿಗ್ಗೆ 10.30ಕ್ಕೆ ಜಿ.ಎಂ. ಹಾಲಮ್ಮ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸ್ನಾತಕೋತ್ತರ ವಿಭಾಗದ ಮೊದಲ ಬ್ಯಾಚಿನ 318 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ.</p>.<p>‘2023 ಸೆಪ್ಟೆಂಬರ್ನಲ್ಲಿ ಕಾರ್ಯಾರಂಭಗೊಂಡ ವಿಶ್ವವಿದ್ಯಾಲಯಕ್ಕೆ ಇದೊಂದು ಐತಿಹಾಸಿಕ ಮೈಲಿಗಲ್ಲು. 2025ರಲ್ಲಿ ಕೋರ್ಸ್ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ. ಬಾಹ್ಯಾಕಾಶ ವಿಜ್ಞಾನಿ ಎಂ. ಅಣ್ಣಾದೊರೈ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ್ ಚಿನ್ನದ ಪದಕ ಪ್ರದಾನ ಮಾಡಲಿದ್ದಾರೆ, ಕುಲಾಧಿಪತಿ ಜಿ.ಎಂ. ಲಿಂಗರಾಜು ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ಕುಲಪತಿ ಎಸ್.ಆರ್. ಶಂಕಪಾಲ್ ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಎಂಬಿಎ ವಿಭಾಗದ 263, ಎಂಸಿಎ ವಿಭಾಗದ 44 ಹಾಗೂ ಎಂಕಾಂ ವಿಭಾಗದ 11 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ. ಎಂಬಿಎ ವಿಭಾಗದ 192, ಎಂಸಿಎ ವಿಭಾಗದ 35 ಹಾಗೂ ಎಂಕಾಂ ವಿಭಾಗದ 5 ವಿದ್ಯಾರ್ಥಿಗಳಿಗೆ ಉದ್ಯೋಗ ಲಭ್ಯವಾಗಿದ್ದು, ಹಲವೆಡೆ ಕೆಲಸ ಮಾಡುತ್ತಿದ್ದಾರೆ. ಇನ್ನೂ ಅನೇಕ ವಿದ್ಯಾರ್ಥಿಗಳು ಸ್ಟಾರ್ಟ್ಅಪ್ ಸೇರಿ ಸ್ವಂತ ಉದ್ದಿಮೆ ಕಟ್ಟಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>‘ಜಿಎಂ ವಿಶ್ವವಿದ್ಯಾಲಯದಲ್ಲಿ 26 ಸ್ನಾತಕೋತ್ತರ ಹಾಗೂ 68 ಸ್ನಾತಕ ಪದವಿ ಸೇರಿದಂತೆ 94 ಕೋರ್ಸ್ಗಳಿವೆ. 112 ಸಂಶೋಧನಾ ವಿದ್ಯಾರ್ಥಿಗಳಿದ್ದು, ವಿಶ್ವವಿದ್ಯಾಲಯದಲ್ಲಿ 8,000ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಪ್ರಥಮ ಘಟಿಕೋತ್ಸವದ ಪದವಿ ಪ್ರದಾನಕ್ಕೆ ಸ್ನಾತಕೋತ್ತರ ವಿದ್ಯಾರ್ಥಿಗಳು ಮಾತ್ರ ಭಾಜನರಾಗುತ್ತಿದ್ದಾರೆ. ಮುಂದಿನ ವರ್ಷದಿಂದ ಪದವಿ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೂ ಪದವಿ ಪ್ರದಾನ ಮಾಡಲಾಗುತ್ತದೆ’ ಎಂದು ವಿವರಿಸಿದರು.</p>.<p>‘ಪಠ್ಯೇತರ ಚಟುವಟಿಕೆಗೂ ವಿಶ್ವವಿದ್ಯಾಲಯ ಒತ್ತು ನೀಡುತ್ತಿದೆ. ಕ್ರೀಡೆ, ನೃತ್ಯ, ಸಂಗೀತ ಸೇರಿದಂತೆ ಸಾಂಸ್ಕೃತಿಕ ಚಟುವಟಿಕೆಗೂ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತಿದೆ. ಸಂಶೋಧನೆಗೆ ಒತ್ತು ನೀಡಲಾಗುತ್ತಿದ್ದು, ಪ್ರೋತ್ಸಾಹ ಧನ ಮೀಸಲಿಡಲಾಗಿದೆ. 45 ಪೇಟೆಂಟ್ಗಳಿಗೆ ಅರ್ಜಿ ಸಲ್ಲಿಸಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>ಸಹ ಕುಲಪತಿ ಎಚ್.ಡಿ. ಮಹೇಶಪ್ಪ, ಕುಲಸಚಿವ ಸುನೀಲ್ ಕುಮಾರ್ ಬಿ.ಎಸ್, ಮೌಲ್ಯಮಾಪನ ವಿಭಾಗದ ಉಪಕುಲಸಚಿವ ವೀರಭದ್ರಸ್ವಾಮಿ ಬಿ.ಎನ್, ಮಾರುಕಟ್ಟೆ ವಿಭಾಗದ ವೀರಗಂಗಾಧರಸ್ವಾಮಿ ಟಿ.ಎಂ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಇಲ್ಲಿನ ಜಿ.ಎಂ. ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವವನ್ನು ಜ.11ರಂದು ಬೆಳಿಗ್ಗೆ 10.30ಕ್ಕೆ ಜಿ.ಎಂ. ಹಾಲಮ್ಮ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸ್ನಾತಕೋತ್ತರ ವಿಭಾಗದ ಮೊದಲ ಬ್ಯಾಚಿನ 318 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ.</p>.<p>‘2023 ಸೆಪ್ಟೆಂಬರ್ನಲ್ಲಿ ಕಾರ್ಯಾರಂಭಗೊಂಡ ವಿಶ್ವವಿದ್ಯಾಲಯಕ್ಕೆ ಇದೊಂದು ಐತಿಹಾಸಿಕ ಮೈಲಿಗಲ್ಲು. 2025ರಲ್ಲಿ ಕೋರ್ಸ್ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ. ಬಾಹ್ಯಾಕಾಶ ವಿಜ್ಞಾನಿ ಎಂ. ಅಣ್ಣಾದೊರೈ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ್ ಚಿನ್ನದ ಪದಕ ಪ್ರದಾನ ಮಾಡಲಿದ್ದಾರೆ, ಕುಲಾಧಿಪತಿ ಜಿ.ಎಂ. ಲಿಂಗರಾಜು ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ಕುಲಪತಿ ಎಸ್.ಆರ್. ಶಂಕಪಾಲ್ ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಎಂಬಿಎ ವಿಭಾಗದ 263, ಎಂಸಿಎ ವಿಭಾಗದ 44 ಹಾಗೂ ಎಂಕಾಂ ವಿಭಾಗದ 11 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ. ಎಂಬಿಎ ವಿಭಾಗದ 192, ಎಂಸಿಎ ವಿಭಾಗದ 35 ಹಾಗೂ ಎಂಕಾಂ ವಿಭಾಗದ 5 ವಿದ್ಯಾರ್ಥಿಗಳಿಗೆ ಉದ್ಯೋಗ ಲಭ್ಯವಾಗಿದ್ದು, ಹಲವೆಡೆ ಕೆಲಸ ಮಾಡುತ್ತಿದ್ದಾರೆ. ಇನ್ನೂ ಅನೇಕ ವಿದ್ಯಾರ್ಥಿಗಳು ಸ್ಟಾರ್ಟ್ಅಪ್ ಸೇರಿ ಸ್ವಂತ ಉದ್ದಿಮೆ ಕಟ್ಟಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>‘ಜಿಎಂ ವಿಶ್ವವಿದ್ಯಾಲಯದಲ್ಲಿ 26 ಸ್ನಾತಕೋತ್ತರ ಹಾಗೂ 68 ಸ್ನಾತಕ ಪದವಿ ಸೇರಿದಂತೆ 94 ಕೋರ್ಸ್ಗಳಿವೆ. 112 ಸಂಶೋಧನಾ ವಿದ್ಯಾರ್ಥಿಗಳಿದ್ದು, ವಿಶ್ವವಿದ್ಯಾಲಯದಲ್ಲಿ 8,000ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಪ್ರಥಮ ಘಟಿಕೋತ್ಸವದ ಪದವಿ ಪ್ರದಾನಕ್ಕೆ ಸ್ನಾತಕೋತ್ತರ ವಿದ್ಯಾರ್ಥಿಗಳು ಮಾತ್ರ ಭಾಜನರಾಗುತ್ತಿದ್ದಾರೆ. ಮುಂದಿನ ವರ್ಷದಿಂದ ಪದವಿ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೂ ಪದವಿ ಪ್ರದಾನ ಮಾಡಲಾಗುತ್ತದೆ’ ಎಂದು ವಿವರಿಸಿದರು.</p>.<p>‘ಪಠ್ಯೇತರ ಚಟುವಟಿಕೆಗೂ ವಿಶ್ವವಿದ್ಯಾಲಯ ಒತ್ತು ನೀಡುತ್ತಿದೆ. ಕ್ರೀಡೆ, ನೃತ್ಯ, ಸಂಗೀತ ಸೇರಿದಂತೆ ಸಾಂಸ್ಕೃತಿಕ ಚಟುವಟಿಕೆಗೂ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತಿದೆ. ಸಂಶೋಧನೆಗೆ ಒತ್ತು ನೀಡಲಾಗುತ್ತಿದ್ದು, ಪ್ರೋತ್ಸಾಹ ಧನ ಮೀಸಲಿಡಲಾಗಿದೆ. 45 ಪೇಟೆಂಟ್ಗಳಿಗೆ ಅರ್ಜಿ ಸಲ್ಲಿಸಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>ಸಹ ಕುಲಪತಿ ಎಚ್.ಡಿ. ಮಹೇಶಪ್ಪ, ಕುಲಸಚಿವ ಸುನೀಲ್ ಕುಮಾರ್ ಬಿ.ಎಸ್, ಮೌಲ್ಯಮಾಪನ ವಿಭಾಗದ ಉಪಕುಲಸಚಿವ ವೀರಭದ್ರಸ್ವಾಮಿ ಬಿ.ಎನ್, ಮಾರುಕಟ್ಟೆ ವಿಭಾಗದ ವೀರಗಂಗಾಧರಸ್ವಾಮಿ ಟಿ.ಎಂ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>