ಇಲ್ಲಿ ಸಂಗ್ರಹಿಸಿದ ಸ್ಫೋಟಕ ಸಾಮಗ್ರಿಗಳನ್ನು ಅಕ್ಕಪಕ್ಕದ ಕ್ವಾರಿಗಳಿಗೆ ಪೂರೈಕೆ ಮಾಡಲಾಗುತ್ತಿತ್ತು. ಅವುಗಳು ಅಪಾರ ಪ್ರಮಾಣದಲ್ಲಿವೆ. ಆದರೆ ಅಗ್ನಿಶಮನ ಉಪಕರಣಗಳನ್ನು ಇಡುವುದು ಸೇರಿದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಲಿಲ್ಲ. ಜಗಳೂರು ತಾಲ್ಲೂಕಿನಲ್ಲಿ ದಾಸ್ತಾನು ಮಾಡಿದವರು ಆಂಧ್ರ ಮೂಲದವರು ಎಂದು ತಿಳಿದುಬಂದಿದೆ. ಗ್ರಾಮಾಂತರ ಡಿವೈಎಸ್ ನರಸಿಂಹ ತಾಮ್ರಧ್ವಜ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ವಿ. ಕೋದಂಡರಾಮ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಸವಪ್ರಭು ಶರ್ಮ, ಇನ್ನಿತರ ಅಧಿಕಾರಿಗಳು ಕಾರ್ಯಾಚರಣೆ ವೇಳೆ ಇದ್ದರು.