<p><strong>ದಾವಣಗೆರೆ:</strong> ಕಿರುಚಿತ್ರ ನಿರ್ದೇಶಕ ಮನೋಜ್ ಅವರನ್ನು ಬೆದರಿಸಿ ಚಿನ್ನದ ಸರ, ಮೊಬೈಲ್ ಹಾಗೂ ಹಣವನ್ನು ಸುಲಿಗೆ ಮಾಡಿದ ಆರೋಪಿಗಳನ್ನು ಹರಿಹರ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ದಾವಣಗೆರೆ ಶಿವನಗರದ ಮನ್ಸೂರ್ ಅಲಿ (22) ಸೈಫುಲ್ಲಾ ಅಲಿಯಾಸ್ ರೊಡ್ಡ (21)ಬಂಧಿತರು. ಮತ್ತೊಬ್ಬ ಆರೋಪಿ ಭಾಷಾನಗರದ ಫೈರೂಜ್ ತಲೆ ಮರೆಸಿಕೊಂಡಿದ್ದಾನೆ.</p>.<p>ರಾಣೇಬೆನ್ನೂರು ತಾಲ್ಲೂಕು ಕೋಡಿಯಾಲ್ ಹೊಸಪೇಟೆ ನಿವಾಸಿಯಾದ ಮನೋಜ್ ಅವರು ಕೊಂಡಜ್ಜಿ ಕೆರೆಯ ಬಳಿ ಲೊಕೇಶನ್ ನೋಡಲು ಹೋಗಿದ್ದ ವೇಳೆ ಈ ಮೂವರು ಬೈಕ್ನಲ್ಲಿ ಬಂದು ಹೆದರಿಸಿ ಕುತ್ತಿಗೆಯಲ್ಲಿದ್ದ 25 ಗ್ರಾಂ ತೂಕದ ₹75 ಸಾವಿರ ಬೆಲೆ ಬಾಳುವ ಚಿನ್ನದ ಸರ, ₹20 ಸಾವಿರ ಬೆಲೆಬಾಳುವ ಐಫೋನ್, ₹4 ಸಾವಿರ, ಪ್ಯಾನ್ ಕಾರ್ಡ್, ಎರಡು ಎಟಿಎಂ ಕಾರ್ಡ್ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಸೋಮವಾರ ವಾಹನ ತಪಾಸಣೆ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದು, ಸುಲಿಗೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.</p>.<p>ಎಸ್ಪಿ ಹನುಮಂತರಾಯ ಅವರ ಮಾರ್ಗದರ್ಶನದಲ್ಲಿ ಎಎಸ್ಪಿ ರಾಜೀವ್, ಗ್ರಾಮಾಂತರ ಉಪವಿಭಾಗದ ಡಿವೈಎಸ್ಪಿ ನರಸಿಂಹ ತಾಮ್ರಧ್ವಜ ಅವರ ಮಾರ್ಗದರ್ಶನದಲ್ಲಿ ಹರಿಹರ ಸಿಪಿಐ ರವಿಕುಮಾರ್, ಎಂ.ಶಿವಪ್ರಸಾದ್ ನೇತೃತ್ವದಲ್ಲಿ ಹರಿಹರ ಗ್ರಾಮಾಂತರ ಠಾಣೆಯ ಪಿಎಸ್ಐ ಡಿ. ರವಿಕುಮಾರ್ ಮತ್ತು ತಂಡ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಕಿರುಚಿತ್ರ ನಿರ್ದೇಶಕ ಮನೋಜ್ ಅವರನ್ನು ಬೆದರಿಸಿ ಚಿನ್ನದ ಸರ, ಮೊಬೈಲ್ ಹಾಗೂ ಹಣವನ್ನು ಸುಲಿಗೆ ಮಾಡಿದ ಆರೋಪಿಗಳನ್ನು ಹರಿಹರ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ದಾವಣಗೆರೆ ಶಿವನಗರದ ಮನ್ಸೂರ್ ಅಲಿ (22) ಸೈಫುಲ್ಲಾ ಅಲಿಯಾಸ್ ರೊಡ್ಡ (21)ಬಂಧಿತರು. ಮತ್ತೊಬ್ಬ ಆರೋಪಿ ಭಾಷಾನಗರದ ಫೈರೂಜ್ ತಲೆ ಮರೆಸಿಕೊಂಡಿದ್ದಾನೆ.</p>.<p>ರಾಣೇಬೆನ್ನೂರು ತಾಲ್ಲೂಕು ಕೋಡಿಯಾಲ್ ಹೊಸಪೇಟೆ ನಿವಾಸಿಯಾದ ಮನೋಜ್ ಅವರು ಕೊಂಡಜ್ಜಿ ಕೆರೆಯ ಬಳಿ ಲೊಕೇಶನ್ ನೋಡಲು ಹೋಗಿದ್ದ ವೇಳೆ ಈ ಮೂವರು ಬೈಕ್ನಲ್ಲಿ ಬಂದು ಹೆದರಿಸಿ ಕುತ್ತಿಗೆಯಲ್ಲಿದ್ದ 25 ಗ್ರಾಂ ತೂಕದ ₹75 ಸಾವಿರ ಬೆಲೆ ಬಾಳುವ ಚಿನ್ನದ ಸರ, ₹20 ಸಾವಿರ ಬೆಲೆಬಾಳುವ ಐಫೋನ್, ₹4 ಸಾವಿರ, ಪ್ಯಾನ್ ಕಾರ್ಡ್, ಎರಡು ಎಟಿಎಂ ಕಾರ್ಡ್ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಸೋಮವಾರ ವಾಹನ ತಪಾಸಣೆ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದು, ಸುಲಿಗೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.</p>.<p>ಎಸ್ಪಿ ಹನುಮಂತರಾಯ ಅವರ ಮಾರ್ಗದರ್ಶನದಲ್ಲಿ ಎಎಸ್ಪಿ ರಾಜೀವ್, ಗ್ರಾಮಾಂತರ ಉಪವಿಭಾಗದ ಡಿವೈಎಸ್ಪಿ ನರಸಿಂಹ ತಾಮ್ರಧ್ವಜ ಅವರ ಮಾರ್ಗದರ್ಶನದಲ್ಲಿ ಹರಿಹರ ಸಿಪಿಐ ರವಿಕುಮಾರ್, ಎಂ.ಶಿವಪ್ರಸಾದ್ ನೇತೃತ್ವದಲ್ಲಿ ಹರಿಹರ ಗ್ರಾಮಾಂತರ ಠಾಣೆಯ ಪಿಎಸ್ಐ ಡಿ. ರವಿಕುಮಾರ್ ಮತ್ತು ತಂಡ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>