<p><strong>ಮುಸ್ಸೆನಾಳ್ (ನ್ಯಾಮತಿ):</strong> ಪೊಲೀಸ್ ಇಲಾಖೆಯ ಮಹತ್ತರ ಯೋಜನೆ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ ಎಂದು ನ್ಯಾಮತಿ ಪೊಲೀಸ್ ಸಬ್ಇನ್ಸ್ಪೆಕ್ಟರ್ ಚನ್ನಬಸಪ್ಪ ಹೊಳಿ ತಿಳಿಸಿದರು. </p><p><br> ತಾಲ್ಲೂಕಿನ ಮುಸ್ಸೆನಾಳ್ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಸಾಮಾಜಿಕ ಪರಿಶೋಧನಾ ಮತ್ತು ಪೋಷಕರ ಸಭೆ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p><p><br> ಪೊಲೀಸ್ ಇಲಾಖೆಯೊಂದಿಗೆ ಗ್ರಾಮಸ್ಥರು ಸಹಕರಿಸುವ ಮೂಲಕ ಕಾನೂನು ಬಾಹಿರ ಚಟುವಟಿಕೆ, ಕಳವು ಪ್ರಕರಣಗಳನ್ನು ಪತ್ತೆ ಹಚ್ಚಲು ಅನುಕೂಲವಾಗುತ್ತದೆ. ಬಾಲ್ಯವಿವಾಹ, ಬಾಲ ಕಾರ್ಮಿಕg ನೇಮಕ ಮಾಡಿಕೊಳ್ಳುವುದು ಅಪರಾಧವಾಗುತ್ತದೆ. ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ ಎಂದರು. </p><p><br> ತಾಲ್ಲೂಕು ಪಂಚಾಯಿತಿ ಸಾಮಾಜಿಕ ಪರಿಶೋಧನೆ ವ್ಯವಸ್ಥಾಪಕ ಸಿ.ಸಿದ್ದೇಶ, ದೇವರಾಜ, ಮಂಜುನಾಥ ಶಾಲೆಯ ೨೦೨೩-೨೪ನೇ ಸಾಲಿನ ಸಾಮಾಜಿಕ ಪರಿಶೋಧನಾ ನಡೆಸಿ ವರದಿ ನೀಡಿದರು. </p><p><br> ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಶಿವರಾಮನಾಯ್ಕ, ಶಾಲೆಯ ಮುಖ್ಯಶಿಕ್ಷಕಿ ವೈ.ಕೆ.ವನಿತಾ, ಶಿಕ್ಷಕ ಡಿ.ಯಲ್ಲಪ್ಪ, ಎಸ್ಡಿಎಂಸಿ ಅಧ್ಯಕ್ಷ ಗೋವಿಂದಪ್ಪ, ಉಪಾಧ್ಯಕ್ಷೆ ಇಂದ್ರಬಾಯಿ, ಹೆಡ್ ಕಾನ್ಸ್ಟೇಬಲ್ ಉಮೇಶ, ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಕಾಶನಾಯ್ಕ, ಶಶಿಕಲಾಬಾಯಿ, ಪಿಡಿಒ ಸೋಮಶೇಖರ, ಶಂಕ್ರನಾಯ್ಕ, ಮಂಜನಾಯ್ಕ, ಪ್ರೇಮ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಸ್ಸೆನಾಳ್ (ನ್ಯಾಮತಿ):</strong> ಪೊಲೀಸ್ ಇಲಾಖೆಯ ಮಹತ್ತರ ಯೋಜನೆ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ ಎಂದು ನ್ಯಾಮತಿ ಪೊಲೀಸ್ ಸಬ್ಇನ್ಸ್ಪೆಕ್ಟರ್ ಚನ್ನಬಸಪ್ಪ ಹೊಳಿ ತಿಳಿಸಿದರು. </p><p><br> ತಾಲ್ಲೂಕಿನ ಮುಸ್ಸೆನಾಳ್ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಸಾಮಾಜಿಕ ಪರಿಶೋಧನಾ ಮತ್ತು ಪೋಷಕರ ಸಭೆ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p><p><br> ಪೊಲೀಸ್ ಇಲಾಖೆಯೊಂದಿಗೆ ಗ್ರಾಮಸ್ಥರು ಸಹಕರಿಸುವ ಮೂಲಕ ಕಾನೂನು ಬಾಹಿರ ಚಟುವಟಿಕೆ, ಕಳವು ಪ್ರಕರಣಗಳನ್ನು ಪತ್ತೆ ಹಚ್ಚಲು ಅನುಕೂಲವಾಗುತ್ತದೆ. ಬಾಲ್ಯವಿವಾಹ, ಬಾಲ ಕಾರ್ಮಿಕg ನೇಮಕ ಮಾಡಿಕೊಳ್ಳುವುದು ಅಪರಾಧವಾಗುತ್ತದೆ. ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ ಎಂದರು. </p><p><br> ತಾಲ್ಲೂಕು ಪಂಚಾಯಿತಿ ಸಾಮಾಜಿಕ ಪರಿಶೋಧನೆ ವ್ಯವಸ್ಥಾಪಕ ಸಿ.ಸಿದ್ದೇಶ, ದೇವರಾಜ, ಮಂಜುನಾಥ ಶಾಲೆಯ ೨೦೨೩-೨೪ನೇ ಸಾಲಿನ ಸಾಮಾಜಿಕ ಪರಿಶೋಧನಾ ನಡೆಸಿ ವರದಿ ನೀಡಿದರು. </p><p><br> ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಶಿವರಾಮನಾಯ್ಕ, ಶಾಲೆಯ ಮುಖ್ಯಶಿಕ್ಷಕಿ ವೈ.ಕೆ.ವನಿತಾ, ಶಿಕ್ಷಕ ಡಿ.ಯಲ್ಲಪ್ಪ, ಎಸ್ಡಿಎಂಸಿ ಅಧ್ಯಕ್ಷ ಗೋವಿಂದಪ್ಪ, ಉಪಾಧ್ಯಕ್ಷೆ ಇಂದ್ರಬಾಯಿ, ಹೆಡ್ ಕಾನ್ಸ್ಟೇಬಲ್ ಉಮೇಶ, ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಕಾಶನಾಯ್ಕ, ಶಶಿಕಲಾಬಾಯಿ, ಪಿಡಿಒ ಸೋಮಶೇಖರ, ಶಂಕ್ರನಾಯ್ಕ, ಮಂಜನಾಯ್ಕ, ಪ್ರೇಮ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>