‘ಗೋಪನಾಳ್ ಗ್ರಾಮದ ಗ್ರಾಮಠಾಣಾ ಜಾಗವನ್ನು ಹರೋನಹಳ್ಳಿ ಗ್ರಾಮದ ಕೆಲವರು ಒತ್ತುವರಿ ಮಾಡಿಕೊಂಡು ತಮ್ಮ ಹೆಸರಿಗೆ ಪಹಣಿ ಮಾಡಿಸಿಕೊಂಡಿದ್ದಾರೆ. ಅದನ್ನು ರದ್ದುಗೊಳಿಸಿ, ಆ ಜಾಗವನ್ನು ನಿವೇಶನ ರಹಿತ ಕುಟುಂಬಗಳಿಗೆ ನೀಡಬೇಕು ಎಂದು ಒತ್ತಾಯಿಸಿ’ ಹರೋನಹಳ್ಳಿ ಗ್ರಾಮ ಪಂಚಾಯಿತಿ ಮುಂದೆ 12 ದಿನಗಳ ಕಾಲ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲಾಗಿತ್ತು. ಅದನ್ನು ಸಹಿಸಲಾರದೆ ಹರೋನಹಳ್ಳಿ ಗ್ರಾಮದ ಕಿಡಿಗೇಡಿಗಳು ನಮ್ಮ ಸಮುದಾಯವರ ಸಮಾಧಿಗಳನ್ನು ನಾಶಪಡಿಸಿದ್ದಾರೆ’ ಎಂದು ಹಕ್ಕಿಪಿಕ್ಕಿ ಬುಡಕಟ್ಟು ಯುವ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಆರ್. ಪುನೀತ್ ಕುಮಾರ್ ಆರೋಪಿಸಿದರು.