ಲೋಕಸಭೆ, ವಿಧಾನಸಭೆ ಉಪ ಚುನಾವಣೆ ಘೋಷಣೆ ಆಗಲಿದೆ. ನಾವು ಎಲ್ಲ ರೀತಿಯ ತಯಾರಿ ಮಾಡಿಕೊಂಡಿದ್ದೇವೆ. ಸರ್ಕಾರದ ರೈತ ವಿರೋಧಿ ನೀತಿ, ಜನ ವಿರೋಧಿ ನೀತಿ, ಯುವಕರ ವಿರೋಧಿ ನೀತಿ, ಪ್ರಜಾಪ್ರಭುತ್ವ ವಿರೋಧಿ ನೀತಿಗೆ ಜನರು ಪಾಠ ಕಲಿಸಲಿದ್ದಾರೆ. ದಿಶಾ ಎಂಬ ವಿದ್ಯಾರ್ಥಿನಿಯನ್ನು ಟೂಲ್ಕಿಟ್ ಮೂಲಕ ಷಡ್ಯಂತ್ರ ಮಾಡಿದ್ದಾರೆ ಎಂದು ಆರೋಪಿಸಿ ಬಂಧಿಸಿದ್ದರು. ಇದು ಯುವಕರಲ್ಲಿ ಭಯ ಹುಟ್ಟಿಸಿ, ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುವ ಕೆಲಸ ಎಂದು ಟೀಕಿಸಿದರು.