<p><strong>ದಾವಣಗೆರೆ: </strong>ಜನರಿಗೆ ಸರ್ಕಾರದ ಲಸಿಕೆ ಹಾಕಿಸಿ ತಮ್ಮ ಫೋಟೊ ಹಾಕಿಸಿಕೊಳ್ಳುವುದು ಬೇಡ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಟೀಕಿಸಿದರು.</p>.<p>91ನೇ ಜನ್ಮದಿನದ ಪ್ರಯುಕ್ತ ನಗರದ ಐಎಂಎ ಹಾಲ್ನಲ್ಲಿ ಪತ್ರಕರ್ತರಿಗೆ ದಿನಸಿ ಕಿಟ್ ವಿತರಣೆ ಹಾಗೂ ಕೊರೊನಾ ಉಚಿತ ಲಸಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಬಿಜೆಪಿ ಪಕ್ಷದಿಂದ ಜನರಿಗೆ ಉಚಿತ ಲಸಿಕೆ ಹಾಕಿಸಲು ಸಲಹೆ ನೀಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ‘ಅವರಿಗೆ (ಬಿಜೆಪಿಯವರಿಗೆ) ನಾವ್ಯಾಕೆ ಸಲಹೆ ಕೊಡಬೇಕು. ಬಡವರಿಗೆ ಸಹಾಯ ಮಾಡಬೇಕು ಎನ್ನುವ ಮನಸ್ಸಿದ್ದರೆ ಲಸಿಕೆ ಹಾಕಿಸಲಿ.ಸರ್ಕಾರದ ಹೆಸರಿನಲ್ಲಿ ತಮ್ಮ ಫೋಟು ಹಾಕಿಕೊಳ್ಳುವುದು ಬೇಡ’ ಎಂದು ಹೇಳಿದರು.</p>.<p>‘ಚುನಾವಣೆಗೋಸ್ಕರ ಲಸಿಕೆ ಹಾಕಿಸುವ ಕೆಲಸ ಮಾಡಿಲ್ಲ. ಕೊರೊನಾದಿಂದ ಜನರು ಸಾಯುವುದು ಕಡಿಮೆಯಾಗಲಿ ಎನ್ನುವ ಉದ್ದೇಶದಿಂದ ಕೊಡುತ್ತಿದ್ದೇವೆ’ ಎಂದು ಹೇಳಿದರು.</p>.<p>‘ಮಿತವಾದ ಊಟ, ಎಲ್ಲಾ ಮಿತವಾಗಿ ಇದ್ದರೆ ಆರೋಗ್ಯ ಚೆನ್ನಾಗಿರುತ್ತದೆ’ ಎಂದು ತಮ್ಮ ಆರೋಗ್ಯದ ಗುಟ್ಟನ್ನು ಹೇಳಿದರು.</p>.<p>ಯಡಿಯೂರಪ್ಪ ನಾಯಕತ್ವ ಬದಲಾವಣೆ ಬಗ್ಗೇ ಕೇಳಿದ ಪ್ರಶ್ನೆ ‘ಸರ್ಕಾರ ರಾಜ್ಯ ರಾಜಕಾರಣದ ಬಗ್ಗೆ ಎಲ್ಲಾದರೂ ಕೆಡಗುವರು ಇರುತ್ತಾರೆ ಏನು ಮಾಡಲು ಆಗುತ್ತೇ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಜನರಿಗೆ ಸರ್ಕಾರದ ಲಸಿಕೆ ಹಾಕಿಸಿ ತಮ್ಮ ಫೋಟೊ ಹಾಕಿಸಿಕೊಳ್ಳುವುದು ಬೇಡ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಟೀಕಿಸಿದರು.</p>.<p>91ನೇ ಜನ್ಮದಿನದ ಪ್ರಯುಕ್ತ ನಗರದ ಐಎಂಎ ಹಾಲ್ನಲ್ಲಿ ಪತ್ರಕರ್ತರಿಗೆ ದಿನಸಿ ಕಿಟ್ ವಿತರಣೆ ಹಾಗೂ ಕೊರೊನಾ ಉಚಿತ ಲಸಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಬಿಜೆಪಿ ಪಕ್ಷದಿಂದ ಜನರಿಗೆ ಉಚಿತ ಲಸಿಕೆ ಹಾಕಿಸಲು ಸಲಹೆ ನೀಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ‘ಅವರಿಗೆ (ಬಿಜೆಪಿಯವರಿಗೆ) ನಾವ್ಯಾಕೆ ಸಲಹೆ ಕೊಡಬೇಕು. ಬಡವರಿಗೆ ಸಹಾಯ ಮಾಡಬೇಕು ಎನ್ನುವ ಮನಸ್ಸಿದ್ದರೆ ಲಸಿಕೆ ಹಾಕಿಸಲಿ.ಸರ್ಕಾರದ ಹೆಸರಿನಲ್ಲಿ ತಮ್ಮ ಫೋಟು ಹಾಕಿಕೊಳ್ಳುವುದು ಬೇಡ’ ಎಂದು ಹೇಳಿದರು.</p>.<p>‘ಚುನಾವಣೆಗೋಸ್ಕರ ಲಸಿಕೆ ಹಾಕಿಸುವ ಕೆಲಸ ಮಾಡಿಲ್ಲ. ಕೊರೊನಾದಿಂದ ಜನರು ಸಾಯುವುದು ಕಡಿಮೆಯಾಗಲಿ ಎನ್ನುವ ಉದ್ದೇಶದಿಂದ ಕೊಡುತ್ತಿದ್ದೇವೆ’ ಎಂದು ಹೇಳಿದರು.</p>.<p>‘ಮಿತವಾದ ಊಟ, ಎಲ್ಲಾ ಮಿತವಾಗಿ ಇದ್ದರೆ ಆರೋಗ್ಯ ಚೆನ್ನಾಗಿರುತ್ತದೆ’ ಎಂದು ತಮ್ಮ ಆರೋಗ್ಯದ ಗುಟ್ಟನ್ನು ಹೇಳಿದರು.</p>.<p>ಯಡಿಯೂರಪ್ಪ ನಾಯಕತ್ವ ಬದಲಾವಣೆ ಬಗ್ಗೇ ಕೇಳಿದ ಪ್ರಶ್ನೆ ‘ಸರ್ಕಾರ ರಾಜ್ಯ ರಾಜಕಾರಣದ ಬಗ್ಗೆ ಎಲ್ಲಾದರೂ ಕೆಡಗುವರು ಇರುತ್ತಾರೆ ಏನು ಮಾಡಲು ಆಗುತ್ತೇ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>