<p><strong>ದಾವಣಗೆರೆ</strong>: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ಸಮರ್ಪಕವಾಗಿ ಆಕ್ಸಿಜನ್, ಲಸಿಕೆ ಮತ್ತು ರೆಮಿಡಿಸಿವಿರ್ ಚುಚ್ಚುಮದ್ದು ಸಿಗದೇ ಇರುವುದರಿಂದ ಕೊರೋನಾ ರೋಗಿಗಳು ಹೆಚ್ಚಾಗುವುದರ ಜೊತೆಗೆ ಸಾವಿನ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ದೂರಿದರು.</p>.<p>ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಶಾಸಕರು, ಮಾಜಿ ಸಚಿವರೊಂದಿಗೆ ಆನ್ಲೈನ್ ಆನ್ಲೈನ್ ಮೂಲಕ ಸಂವಾದ ಸಭೆ ನಡೆಸಿದ ವೇಳೆ ಮಲ್ಲಿಕಾರ್ಜುನ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ ಧೋರಣೆಯನ್ನು ಸವಿವರವಾಗಿ ವಿವರಿಸಿದರು.</p>.<p>ಕೊರೋನಾ 2ನೇ ಅಲೆ ಆರಂಭದಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದರಿಂದ ಸಮಸ್ಯೆ ಉಂಟಾಗಿದ್ದು, ಈಗಾಲಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಲಸಿಕೆ, ಆಮ್ಲಜನಕ ಮತ್ತು ರೆಮಿಡಿಸಿವಿರ್ ಚುಚ್ಚುಮದ್ದು ನೀಡಲು ಕೇಂದ್ರ ಮಟ್ಟದಲ್ಲಿ ಒತ್ತಡ ಹಾಕಬೇಕೆಂದು ಮನವಿ ಮಾಡಿದರು.</p>.<p>ದಾವಣಗೆರೆ ಜಿಲ್ಲೆಯ ಕೇಂದ್ರ ಸ್ಥಾನದಲ್ಲಿ ಸರ್ಕಾರದಿಂದ ಜಿಲ್ಲಾಸ್ಪತ್ರೆ ಮತ್ತು ಬಾಪೂಜಿ ವಿದ್ಯಾಸಂಸ್ಥೆಯಡಿ 2 ಆಸ್ಪತ್ರೆಗಳಿದ್ದು, ಸುಮಾರು 3 ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಪೂರಕವಾಗಿ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ ಎಂದು ದೂರಿದರು.</p>.<p>ಶಾಸಕ ಶಾಮನೂರು ಶಿವಶಂಕರಪ್ಪ, ‘ಜಿಲ್ಲಾಡಳಿತ ಸಮರ್ಪಕವಾಗಿ ಆಮ್ಲಜನಕ, ಲಸಿಕೆ ಮತ್ತು ರೆಮಿಡಿಸಿವಿರ್ ಒದಗಿಸಿದರೆ ರೋಗವನ್ನು ಕಡಿಮೆಗೊಳಿಸಬಹುದು. ಲಸಿಕೆ ಮತ್ತು ರೆಮಿಡಿಸಿವಿರ್ ಉತ್ಪಾ ದನೆ ಮತ್ತು ಮಾರಾಟವನ್ನು ಮುಕ್ತ ಗೊಳಿಸಿದರೆ ಅವಶ್ಯವಿರುವವರಿಗೆ ಅನು ಕೂಲವಾಗಲಿದೆ’ ಎಂದು ಹೇಳಿದರು.</p>.<p>ಕೆಪಿಸಿಸಿ ವಕ್ತಾರ ಡಿ.ಬಸವರಾಜ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಪಾಲಿಕೆ ವಿರೋಧ ಪಕ್ಷದ ನಾಯಕ ಎ. ನಾಗರಾಜ್, ಸದಸ್ಯರಾದ ಕೆ. ಚಮನ್ ಸಾಬ್, ಜಿ.ಎಸ್. ಮಂಜುನಾಥ್ ಗಡಿಗುಡಾಳ್ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ಸಮರ್ಪಕವಾಗಿ ಆಕ್ಸಿಜನ್, ಲಸಿಕೆ ಮತ್ತು ರೆಮಿಡಿಸಿವಿರ್ ಚುಚ್ಚುಮದ್ದು ಸಿಗದೇ ಇರುವುದರಿಂದ ಕೊರೋನಾ ರೋಗಿಗಳು ಹೆಚ್ಚಾಗುವುದರ ಜೊತೆಗೆ ಸಾವಿನ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ದೂರಿದರು.</p>.<p>ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಶಾಸಕರು, ಮಾಜಿ ಸಚಿವರೊಂದಿಗೆ ಆನ್ಲೈನ್ ಆನ್ಲೈನ್ ಮೂಲಕ ಸಂವಾದ ಸಭೆ ನಡೆಸಿದ ವೇಳೆ ಮಲ್ಲಿಕಾರ್ಜುನ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ ಧೋರಣೆಯನ್ನು ಸವಿವರವಾಗಿ ವಿವರಿಸಿದರು.</p>.<p>ಕೊರೋನಾ 2ನೇ ಅಲೆ ಆರಂಭದಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದರಿಂದ ಸಮಸ್ಯೆ ಉಂಟಾಗಿದ್ದು, ಈಗಾಲಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಲಸಿಕೆ, ಆಮ್ಲಜನಕ ಮತ್ತು ರೆಮಿಡಿಸಿವಿರ್ ಚುಚ್ಚುಮದ್ದು ನೀಡಲು ಕೇಂದ್ರ ಮಟ್ಟದಲ್ಲಿ ಒತ್ತಡ ಹಾಕಬೇಕೆಂದು ಮನವಿ ಮಾಡಿದರು.</p>.<p>ದಾವಣಗೆರೆ ಜಿಲ್ಲೆಯ ಕೇಂದ್ರ ಸ್ಥಾನದಲ್ಲಿ ಸರ್ಕಾರದಿಂದ ಜಿಲ್ಲಾಸ್ಪತ್ರೆ ಮತ್ತು ಬಾಪೂಜಿ ವಿದ್ಯಾಸಂಸ್ಥೆಯಡಿ 2 ಆಸ್ಪತ್ರೆಗಳಿದ್ದು, ಸುಮಾರು 3 ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಪೂರಕವಾಗಿ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ ಎಂದು ದೂರಿದರು.</p>.<p>ಶಾಸಕ ಶಾಮನೂರು ಶಿವಶಂಕರಪ್ಪ, ‘ಜಿಲ್ಲಾಡಳಿತ ಸಮರ್ಪಕವಾಗಿ ಆಮ್ಲಜನಕ, ಲಸಿಕೆ ಮತ್ತು ರೆಮಿಡಿಸಿವಿರ್ ಒದಗಿಸಿದರೆ ರೋಗವನ್ನು ಕಡಿಮೆಗೊಳಿಸಬಹುದು. ಲಸಿಕೆ ಮತ್ತು ರೆಮಿಡಿಸಿವಿರ್ ಉತ್ಪಾ ದನೆ ಮತ್ತು ಮಾರಾಟವನ್ನು ಮುಕ್ತ ಗೊಳಿಸಿದರೆ ಅವಶ್ಯವಿರುವವರಿಗೆ ಅನು ಕೂಲವಾಗಲಿದೆ’ ಎಂದು ಹೇಳಿದರು.</p>.<p>ಕೆಪಿಸಿಸಿ ವಕ್ತಾರ ಡಿ.ಬಸವರಾಜ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಪಾಲಿಕೆ ವಿರೋಧ ಪಕ್ಷದ ನಾಯಕ ಎ. ನಾಗರಾಜ್, ಸದಸ್ಯರಾದ ಕೆ. ಚಮನ್ ಸಾಬ್, ಜಿ.ಎಸ್. ಮಂಜುನಾಥ್ ಗಡಿಗುಡಾಳ್ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>