1865ರಲ್ಲಿ ಪ್ರಾರಂಭವಾಗಿರುವ ಈ ಶಾಲೆ 157 ವಸಂತಗಳನ್ನು ಪೂರೈಸಿದ್ದು, ಸಾಮಾನ್ಯವಾಗಿ 500ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡಿದ ದಾಖಲೆ ಇದೆ. ಆದರೆ ಈಗ 1ರಿಂದ 7ನೇ ತರಗತಿಯವರೆಗೆ ಕೇವಲ 48 ವಿದ್ಯಾರ್ಥಿಗಳಿದ್ದಾರೆ. ಪಟ್ಟಣದ ಬಹುತೇಕರು ಈ ಶಾಲೆಯಲ್ಲಿ ಓದಿ, ಉನ್ನತ ಸ್ಥಾನ ಅಲಂಕರಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೈದ್ಯ ದಿ.ಡಾ.ಎ. ಬಸವಣ್ಣಯ್ಯ, ಬ್ರಾಹ್ಮಣ ಸಮಾಜದ ಅಧ್ಯಕ್ಷ ಕೃಷ್ಣ ಉಪಾಧ್ಯ, ಲಕ್ಷ್ಮೀನಾರಾಯಣ, ಕೃಷ್ಣಮೂರ್ತಿ, ಸಿ.ಕೆ.ಎಚ್. ಮಹೇಶ್ವರಪ್ಪ, ಹಿರಿಯ ಪತ್ರಕರ್ತರಾದ ದಿ.ಬುಳ್ಳಿ ಕರಿಯಪ್ಪ, ಬಾ.ರಾ. ಮಹೇಶ್, ಕನ್ನಡಪರ ಹೋರಾಟಗಾರ ಬುಳ್ಳಿ ನಾಗರಾಜ್ ಸೇರಿ ಸಾವಿರಾರು ಜನರಿಗೆ ವಿದ್ಯಾದಾನ ಮಾಡಿದ ಕೀರ್ತಿ ಶಾಲೆಗೆ ಇದೆ.