<p><strong>ದಾವಣಗೆರೆ:</strong> ಗಂಟಲು ನೋವು ಹಾಗೂ ಉಸಿರಾಟದ ಸಮಸ್ಯೆ ಇದ್ದ ವೃದ್ಧೆಯೊಬ್ಬರು ಬೆಡ್ ಹಾಗೂ ಆಕ್ಸಿಜನ್ ಸಿಗದೇ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದಾರೆ.</p>.<p>ಹರಪನಹಳ್ಳಿ ತಾಲ್ಲೂಕಿನ ಕೋಡಿಯಾಲ ಗ್ರಾಮದ ವೃದ್ಧೆ ಅನಸೂಯಮ್ಮ ಅವರಿಗೆ ಗಂಟಲು ನೋವು ಕಾಣಿಸಿಕೊಂಡಿದ್ದು, ಆರಂಭ<br />ದಲ್ಲಿ ಹರಪನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಗಂಟಲು ಪರೀಕ್ಷಿಸಿದಾಗ ಉಸಿರಾಟಕ್ಕೆ ಆಕ್ಸಿಜನ್ ಅಗತ್ಯ ಇರುವುದನ್ನು ಮನಗಂಡ ಅಲ್ಲಿಯ ವೈದ್ಯರು ತಾಲ್ಲೂಕು ಆಸ್ಪತ್ರೆಗೆ ಹೋಗಲು ಸೂಚಿಸಿದ್ದಾರೆ. ಅಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದಾಗ ನೆಗೆಟಿವ್ ಬಂದಿದೆ.</p>.<p>ಉಸಿರಾಟಕ್ಕೆ ತೊಂದರೆ ಇದ್ದುದರಿಂದ ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಹೋಗಲು ಇಲ್ಲಿಯ ಆಸ್ಪತ್ರೆಯವರು ಸೂಚಿಸಿದರು. ದಾವಣಗೆರೆಯ ಸಿ.ಜಿ. ಆಸ್ಪತ್ರೆಗೆ ಆಕ್ಸಿಜನ್ಗೆಂದು ಬಂದಾಗ, ಕೋವಿಡ್ ಇಲ್ಲದವರಿಗೆ ಇಲ್ಲಿ ಆಕ್ಸಿಜನ್ ಸಿಗುವುದಿಲ್ಲ. ಹೀಗಾಗಿ ಬಾಪೂಜಿ ಆಸ್ಪತ್ರೆಗೆ ಹೋಗುವಂತೆ ಸಲಹೆ ನೀಡಿದರು.</p>.<p>‘ಬಾಪೂಜಿ ಆಸ್ಪತ್ರೆಗೆ ಬಂದಾಗ ‘ಬೆಡ್ ಖಾಲಿ ಇಲ್ಲ’ ಎಂದು ಹೇಳಿದರು. ಆಮೇಲೆ ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿತು. ₹ 20 ಸಾವಿರ ಹಣ ಕಟ್ಟಿದರೆ ದಾಖಲಿಸಿಕೊಳ್ಳುತ್ತೇವೆ’ ಎಂದರು. ನಮ್ಮ ಬಳಿ ಹಣವಿರಲಿಲ್ಲ.ಹರಪನಹಳ್ಳಿಯ ಖಾಸಗಿ ಆಸ್ಪತ್ರೆಗೆ ಹೋಗಿದ್ದೇವೆ’ ಎಂದು ಅಜ್ಜಿಯ ಮೊಮ್ಮಗ ಶಿವರಾಜ್ ಅಳಲು ತೋಡಿಕೊಂಡರು.</p>.<p>‘ಕೊರೊನಾ ನೆಗೆಟಿವ್ ಬಂದಿದ್ದರೂ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲಿಲ್ಲ. ಬಾಪೂಜಿ ಆಸ್ಪತ್ರೆಯಲ್ಲಿ ₹2000 ಅಡ್ವಾನ್ಸ್ ಕಟ್ಟಿಸಿಕೊಂಡಿದ್ದು,ಪ್ರತಿದಿನ ₹5 ಸಾವಿರ ಪಾವತಿಸುವಂತೆ ಹೇಳಿದ್ದರಿಂದ ನಮಗೆ ಕಟ್ಟಲು ಆಗದೇ ಹರಪನಹಳ್ಳಿಗೆ ಹೋದೆವು’ ಎಂದು ಶಿವರಾಜ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಗಂಟಲು ನೋವು ಹಾಗೂ ಉಸಿರಾಟದ ಸಮಸ್ಯೆ ಇದ್ದ ವೃದ್ಧೆಯೊಬ್ಬರು ಬೆಡ್ ಹಾಗೂ ಆಕ್ಸಿಜನ್ ಸಿಗದೇ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದಾರೆ.</p>.<p>ಹರಪನಹಳ್ಳಿ ತಾಲ್ಲೂಕಿನ ಕೋಡಿಯಾಲ ಗ್ರಾಮದ ವೃದ್ಧೆ ಅನಸೂಯಮ್ಮ ಅವರಿಗೆ ಗಂಟಲು ನೋವು ಕಾಣಿಸಿಕೊಂಡಿದ್ದು, ಆರಂಭ<br />ದಲ್ಲಿ ಹರಪನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಗಂಟಲು ಪರೀಕ್ಷಿಸಿದಾಗ ಉಸಿರಾಟಕ್ಕೆ ಆಕ್ಸಿಜನ್ ಅಗತ್ಯ ಇರುವುದನ್ನು ಮನಗಂಡ ಅಲ್ಲಿಯ ವೈದ್ಯರು ತಾಲ್ಲೂಕು ಆಸ್ಪತ್ರೆಗೆ ಹೋಗಲು ಸೂಚಿಸಿದ್ದಾರೆ. ಅಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದಾಗ ನೆಗೆಟಿವ್ ಬಂದಿದೆ.</p>.<p>ಉಸಿರಾಟಕ್ಕೆ ತೊಂದರೆ ಇದ್ದುದರಿಂದ ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಹೋಗಲು ಇಲ್ಲಿಯ ಆಸ್ಪತ್ರೆಯವರು ಸೂಚಿಸಿದರು. ದಾವಣಗೆರೆಯ ಸಿ.ಜಿ. ಆಸ್ಪತ್ರೆಗೆ ಆಕ್ಸಿಜನ್ಗೆಂದು ಬಂದಾಗ, ಕೋವಿಡ್ ಇಲ್ಲದವರಿಗೆ ಇಲ್ಲಿ ಆಕ್ಸಿಜನ್ ಸಿಗುವುದಿಲ್ಲ. ಹೀಗಾಗಿ ಬಾಪೂಜಿ ಆಸ್ಪತ್ರೆಗೆ ಹೋಗುವಂತೆ ಸಲಹೆ ನೀಡಿದರು.</p>.<p>‘ಬಾಪೂಜಿ ಆಸ್ಪತ್ರೆಗೆ ಬಂದಾಗ ‘ಬೆಡ್ ಖಾಲಿ ಇಲ್ಲ’ ಎಂದು ಹೇಳಿದರು. ಆಮೇಲೆ ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿತು. ₹ 20 ಸಾವಿರ ಹಣ ಕಟ್ಟಿದರೆ ದಾಖಲಿಸಿಕೊಳ್ಳುತ್ತೇವೆ’ ಎಂದರು. ನಮ್ಮ ಬಳಿ ಹಣವಿರಲಿಲ್ಲ.ಹರಪನಹಳ್ಳಿಯ ಖಾಸಗಿ ಆಸ್ಪತ್ರೆಗೆ ಹೋಗಿದ್ದೇವೆ’ ಎಂದು ಅಜ್ಜಿಯ ಮೊಮ್ಮಗ ಶಿವರಾಜ್ ಅಳಲು ತೋಡಿಕೊಂಡರು.</p>.<p>‘ಕೊರೊನಾ ನೆಗೆಟಿವ್ ಬಂದಿದ್ದರೂ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲಿಲ್ಲ. ಬಾಪೂಜಿ ಆಸ್ಪತ್ರೆಯಲ್ಲಿ ₹2000 ಅಡ್ವಾನ್ಸ್ ಕಟ್ಟಿಸಿಕೊಂಡಿದ್ದು,ಪ್ರತಿದಿನ ₹5 ಸಾವಿರ ಪಾವತಿಸುವಂತೆ ಹೇಳಿದ್ದರಿಂದ ನಮಗೆ ಕಟ್ಟಲು ಆಗದೇ ಹರಪನಹಳ್ಳಿಗೆ ಹೋದೆವು’ ಎಂದು ಶಿವರಾಜ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>