ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಣಬೇರು ಜೀವನಮೂರ್ತಿ, ‘ಈ ಭಾಗದ ರೈತರು ಮೊದಲಿನಿಂದಲೂ ಶೇಂಗಾ, ಅವರೆ, ರಾಗಿ, ಅಲಸಂದೆ, ಹತ್ತಿ ಬೆಳೆಗಳನ್ನು ಬೆಳೆಯುತ್ತಿದ್ದರು. ಅವುಗಳನ್ನೇ ಮುಖ್ಯ ಆಹಾರದ ಭಾಗವಾಗಿ ಮಾಡಿಕೊಂಡಿದ್ದರು. ರೋಗರಹಿತ, ಒತ್ತಡ ರಹಿತ ಜೀವನ ನಡೆಸುತ್ತಿದ್ದರು. ಆಧುನಿಕ ಬೇಸಾಯ ಪದ್ಧತಿಯಿಂದ ಏಕಬೆಳೆ, ಕೇವಲ ರಾಸಾಯನಿಕ ಗೊಬ್ಬರ ಬಳಕೆ, ಅತಿಯಾದ ಕೀಟನಾಶಕ ಬಳಕೆ ಮಾಡುತ್ತಿರುವುದರಿಂದ ಇಂದು ರೋಗಯುಕ್ತ, ಒತ್ತಡಯುಕ್ತ ಜೀವನ ಹಾಗೂ ಸಾಲದ ಸುಳಿಯಲ್ಲಿ ಸಿಲುಕಿಕೊಂಡಿದ್ದಾರೆ’ ಎಂದು ವಿಶ್ಲೇಷಿಸಿದರು.