<p><strong>ಹರಿಹರ:</strong> ಇಲ್ಲಿನ ಪ್ರತಿಷ್ಠಿತ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಕ್ಕೆ (ಜಿಟಿಟಿಸಿ) ಆದ್ಯತೆ ಮೇರೆಗೆ ಹಾಸ್ಟೆಲ್ ಸೌಲಭ್ಯ ಒದಗಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣ ಪ್ರಕಾಶ್ ಪಾಟೀಲ್ ಭರವಸೆ ನೀಡಿದರು. </p>.<p>ನಗರದ ಜಿಟಿಟಿಸಿ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿದ ವೇಳೆ ಕೇಂದ್ರದ ಪಾಚಾರ್ಯ ಲಕ್ಷ್ಮಣ ನಾಯ್ಕ ಅವರ ಮನವಿಯಂತೆ ಈ ಭರವಸೆ ನೀಡಿದರು. </p>.<p>ಕೇಂದ್ರದಲ್ಲೀಗ ಟೂಲ್ ಆ್ಯಂಡ್ ಡೈ ಮೇಕಿಂಗ್, ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್, ಆಟೋಮೇಷನ್ ಆ್ಯಂಡ್ ರೊಬೋಟಿಕ್ಸ್, ಪ್ರಿಸಿಷನ್ ಆ್ಯಂಡ್ ಮ್ಯಾನುಫ್ಯಾಕ್ಚರಿಂಗ್ ಎಂಬ 4 ವಿಭಾಗಗಳಿವೆ. ವಿವಿಧ ತಾಲ್ಲೂಕುಗಳ 503 ವಿದ್ಯಾರ್ಥಿಗಳು ಓದುತ್ತಿದ್ದಾರೆ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಅಗತ್ಯ ಇದೆ ಎಂದು ಪ್ರಾಚಾರ್ಯರು ಸಚಿವರ ಗಮನ ಸೆಳೆದರು. </p>.<p>ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಶಿವಕುಮಾರ್ ಮಲ್ಲಾಡದ, ಸಿಡಾಕ್ ಜಂಟಿ ನಿರ್ದೇಶಕ ಆರ್.ಪಿ.ಪಾಟೀಲ್, ಅಧ್ಯಾಪಕರಾದ ಶಿವಕುಮಾರ್, ಗಣೇಶ್ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ:</strong> ಇಲ್ಲಿನ ಪ್ರತಿಷ್ಠಿತ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಕ್ಕೆ (ಜಿಟಿಟಿಸಿ) ಆದ್ಯತೆ ಮೇರೆಗೆ ಹಾಸ್ಟೆಲ್ ಸೌಲಭ್ಯ ಒದಗಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣ ಪ್ರಕಾಶ್ ಪಾಟೀಲ್ ಭರವಸೆ ನೀಡಿದರು. </p>.<p>ನಗರದ ಜಿಟಿಟಿಸಿ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿದ ವೇಳೆ ಕೇಂದ್ರದ ಪಾಚಾರ್ಯ ಲಕ್ಷ್ಮಣ ನಾಯ್ಕ ಅವರ ಮನವಿಯಂತೆ ಈ ಭರವಸೆ ನೀಡಿದರು. </p>.<p>ಕೇಂದ್ರದಲ್ಲೀಗ ಟೂಲ್ ಆ್ಯಂಡ್ ಡೈ ಮೇಕಿಂಗ್, ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್, ಆಟೋಮೇಷನ್ ಆ್ಯಂಡ್ ರೊಬೋಟಿಕ್ಸ್, ಪ್ರಿಸಿಷನ್ ಆ್ಯಂಡ್ ಮ್ಯಾನುಫ್ಯಾಕ್ಚರಿಂಗ್ ಎಂಬ 4 ವಿಭಾಗಗಳಿವೆ. ವಿವಿಧ ತಾಲ್ಲೂಕುಗಳ 503 ವಿದ್ಯಾರ್ಥಿಗಳು ಓದುತ್ತಿದ್ದಾರೆ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಅಗತ್ಯ ಇದೆ ಎಂದು ಪ್ರಾಚಾರ್ಯರು ಸಚಿವರ ಗಮನ ಸೆಳೆದರು. </p>.<p>ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಶಿವಕುಮಾರ್ ಮಲ್ಲಾಡದ, ಸಿಡಾಕ್ ಜಂಟಿ ನಿರ್ದೇಶಕ ಆರ್.ಪಿ.ಪಾಟೀಲ್, ಅಧ್ಯಾಪಕರಾದ ಶಿವಕುಮಾರ್, ಗಣೇಶ್ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>