<p><strong>ಚನ್ನಗಿರಿ:</strong> ‘ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ಅನುಷ್ಠಾನ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಫಲಾನುಭವಿಗಳಿಗೆ ಯೋಜನೆಯ ಲಾಭವನ್ನು ಸಮರ್ಪಕವಾಗಿ ತಲುಪಿಸುವ ಕಾರ್ಯ ಮಾಡುತ್ತಿದೆ’ ಎಂದು ಪಂಚ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್ ತಿಳಿಸಿದರು.</p>.<p>ಪಟ್ಟಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಗೃಹಲಕ್ಷ್ಮೀ ಯೋಜನೆ ಅಡಿ ಜೂನ್ ತಿಂಗಳವರೆಗೆ 77,172 ಫಲಾನುಭವಿಗಳಿಗೆ ₹ 313.03 ಕೋಟಿ, ಅನ್ನಭಾಗ್ಯ ಯೋಜನೆ ಅಡಿ ಜ. 2024ರಿಂದ 2025ರವರೆಗೆ ₹ 75.96 ಕೋಟಿ ಅಕ್ಕಿ, ರಾಗಿ ವಿತರಣೆ, ಗೃಹಜ್ಯೋತಿ ಯೋಜನೆ ಅಡಿ ಚನ್ನಗಿರಿ ಉಪ ವಿಭಾಗದಿಂದ ₹ 37.18 ಕೋಟಿ, ಸಂತೇಬೆನ್ನೂರು ಉಪ ವಿಭಾಗದಿಂದ ರೂ 40.75 ಕೋಟಿ ಮೌಲ್ಯದ ಉಚಿತ ವಿದ್ಯುತ್ ಸರಬರಾಜು ಆಗಿದೆ ಎಂದು ಮಾಹಿತಿ ನೀಡಿದರು.</p>.<p>‘ತಾಲ್ಲೂಕಿನಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರದ ಬಗ್ಗೆ ಸಾಕಷ್ಟು ದೂರುಗಳು ಇದ್ದು, ₹ 8 ಕೋಟಿ ವೆಚ್ಚದಲ್ಲಿ ಚನ್ನಗಿರಿ ಪಟ್ಟಣದಲ್ಲಿ ಡಿಪೋ ನಿರ್ಮಾಣವಾಗಿದೆ. ಶೀಘ್ರ ಲೋಕಾರ್ಪಣೆಯಾಗಲಿದೆ. ಆಗ ಕೆಎಸ್ಆರ್ಟಿಸಿ ಬಸ್ಗಳು ಸಾಕಷ್ಟು ಸಂಖ್ಯೆಯಲ್ಲಿ ಸಂಚರಿಸಲಿದ್ದು, ಸಮಸ್ಯೆ ಬಗೆಹರಿಯಲಿದೆ’ ಎಂದು ಹೇಳಿದರು.</p>.<p>ಅನುಷ್ಠಾನ ಸಮಿತಿ ಸದಸ್ಯ ಕಾರ್ಯದರ್ಶಿ ಎಂ.ಆರ್. ಪ್ರಕಾಶ್, ಉಪಾಧ್ಯಕ್ಷರಾದ ಸತೀಶ್ ಪಾಟೀಲ್, ಜಿ.ಎಸ್. ಶಿವರಾಜ್, ಚಂದ್ರಪ್ಪ ಗೌಡ, ಸಿ. ಮಧು, ಸತೀಶ್ ಕಾಕನೂರು, ಆಂಜನಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ:</strong> ‘ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ಅನುಷ್ಠಾನ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಫಲಾನುಭವಿಗಳಿಗೆ ಯೋಜನೆಯ ಲಾಭವನ್ನು ಸಮರ್ಪಕವಾಗಿ ತಲುಪಿಸುವ ಕಾರ್ಯ ಮಾಡುತ್ತಿದೆ’ ಎಂದು ಪಂಚ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್ ತಿಳಿಸಿದರು.</p>.<p>ಪಟ್ಟಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಗೃಹಲಕ್ಷ್ಮೀ ಯೋಜನೆ ಅಡಿ ಜೂನ್ ತಿಂಗಳವರೆಗೆ 77,172 ಫಲಾನುಭವಿಗಳಿಗೆ ₹ 313.03 ಕೋಟಿ, ಅನ್ನಭಾಗ್ಯ ಯೋಜನೆ ಅಡಿ ಜ. 2024ರಿಂದ 2025ರವರೆಗೆ ₹ 75.96 ಕೋಟಿ ಅಕ್ಕಿ, ರಾಗಿ ವಿತರಣೆ, ಗೃಹಜ್ಯೋತಿ ಯೋಜನೆ ಅಡಿ ಚನ್ನಗಿರಿ ಉಪ ವಿಭಾಗದಿಂದ ₹ 37.18 ಕೋಟಿ, ಸಂತೇಬೆನ್ನೂರು ಉಪ ವಿಭಾಗದಿಂದ ರೂ 40.75 ಕೋಟಿ ಮೌಲ್ಯದ ಉಚಿತ ವಿದ್ಯುತ್ ಸರಬರಾಜು ಆಗಿದೆ ಎಂದು ಮಾಹಿತಿ ನೀಡಿದರು.</p>.<p>‘ತಾಲ್ಲೂಕಿನಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರದ ಬಗ್ಗೆ ಸಾಕಷ್ಟು ದೂರುಗಳು ಇದ್ದು, ₹ 8 ಕೋಟಿ ವೆಚ್ಚದಲ್ಲಿ ಚನ್ನಗಿರಿ ಪಟ್ಟಣದಲ್ಲಿ ಡಿಪೋ ನಿರ್ಮಾಣವಾಗಿದೆ. ಶೀಘ್ರ ಲೋಕಾರ್ಪಣೆಯಾಗಲಿದೆ. ಆಗ ಕೆಎಸ್ಆರ್ಟಿಸಿ ಬಸ್ಗಳು ಸಾಕಷ್ಟು ಸಂಖ್ಯೆಯಲ್ಲಿ ಸಂಚರಿಸಲಿದ್ದು, ಸಮಸ್ಯೆ ಬಗೆಹರಿಯಲಿದೆ’ ಎಂದು ಹೇಳಿದರು.</p>.<p>ಅನುಷ್ಠಾನ ಸಮಿತಿ ಸದಸ್ಯ ಕಾರ್ಯದರ್ಶಿ ಎಂ.ಆರ್. ಪ್ರಕಾಶ್, ಉಪಾಧ್ಯಕ್ಷರಾದ ಸತೀಶ್ ಪಾಟೀಲ್, ಜಿ.ಎಸ್. ಶಿವರಾಜ್, ಚಂದ್ರಪ್ಪ ಗೌಡ, ಸಿ. ಮಧು, ಸತೀಶ್ ಕಾಕನೂರು, ಆಂಜನಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>