<p><strong>ಹರಿಹರ</strong>: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಶ್ರಮಪಡುವ ಮನೋಭಾವ ಜನರಲ್ಲಿ ಮಾಯವಾಗುತ್ತಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಗ್ಯಾರಂಟಿ ಯೋಜನೆಗಳು ದುರ್ಬಳಕೆಯಾಗುತ್ತಿವೆ. ಕೃಷಿ ಕಾರ್ಯಕ್ಕೆ ಕೂಲಿಕಾರರು ಸಿಗದೆ ರೈತರು ತೊಂದರೆ ಎದುರಿಸುವಂತಾಗಿದೆ ಎಂದು ಇಲ್ಲಿ ಬುಧವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>ಶ್ರಮ ಇಲ್ಲದೆ ಸಂಪತ್ತು ಬರುವುದರಿಂದ ಆಲಸ್ಯ ಉಂಟಾಗುತ್ತದೆ. ಗ್ಯಾರಂಟಿ ಬದಲು ಇದೇ ಅನುದಾನವನ್ನು ನಿರ್ಗತಿಕರು, ನಿಶ್ಯಕ್ತರನ್ನು ಸಬಲರನ್ನಾಗಿ ಮಾಡಲು ಬಳಸಿಕೊಳ್ಳಬೇಕು ಎಂದು ಅವರು ಸರ್ಕಾರಕ್ಕೆ ಸಲಹೆ ನೀಡಿದರು.</p>.<p>ಸರ್ಕಾರದ ಕೆಲವು ಸವಲತ್ತುಗಳು ಮೇಲ್ಜಾತಿಯ ಬಡವರಿಗೆ ತಲುಪುತ್ತಿಲ್ಲ. ಇದನ್ನು ಸರಿಪಡಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಮೇಲ್ಜಾತಿಯಲ್ಲೂ ಬಹಳಷ್ಟು ಬಡವರು ಇದ್ದಾರೆ. ಎಲ್ಲಾ ವರ್ಗಗಳಲ್ಲಿ ಇರುವ ಬಡವರನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಪಠ್ಯ ಪರಿಷ್ಕರಣೆ ವೇಳೆ 9ನೇ ತರಗತಿ ಪಠ್ಯದ ಬಸವಣ್ಣನ ಚರಿತ್ರೆ ವಿಷಯದಲ್ಲಿ ವೀರಶೈವ ಪದ ತೆಗೆದು ಲಿಂಗಾಯತ ಪದ ಬಳಕೆ ಮಾಡಿರುವುದು ಸರಿಯಲ್ಲ. ಬಿಜೆಪಿ ಸರ್ಕಾರದಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಮತ್ತು ಬಿ.ಸಿ.ನಾಗೇಶ್ ಶಿಕ್ಷಣ ಮಂತ್ರಿಗಳಾಗಿದ್ದ ಅವಧಿಯಲ್ಲಿ ಪಠ್ಯ ಪರಿಷ್ಕರಣೆ ವೇಳೆ ಈ ಬದಲಾವಣೆ ಮಾಡಲಾಗಿದೆ. ವೀರಶೈವ ಪದ ಸೇರ್ಪಡೆಗೆ ಕಾಂಗ್ರೆಸ್ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>‘ವೀರಶೈವ ಲಿಂಗಾಯತ ಸಮಾಜವು ದಶಕಗಳಿಂದ ಬಿಜೆಪಿಯನ್ನು ಬೆಂಬಲಿಸುತ್ತಾ ಬಂದಿದೆ. ಆದರೆ, ಈ ರೀತಿ ಮಾಡಿರುವುದು ಸರಿಯಲ್ಲ. ಈ ಮೂಲಕ ಸಮಾಜಕ್ಕೆ ಅಪಚಾರ ಎಸಗಿದಂತಾಗಿದೆ. ಇದನ್ನು ನಮ್ಮ ಪೀಠ ಸೇರಿ ಪಂಚಪೀಠಗಳು ಈಗಾಗಲೇ ವಿರೋಧಿಸಿವೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದು, ಇದುವರೆಗೂ ಕ್ರಮ ಕೈಗೊಂಡಿಲ್ಲ. ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>ಸರ್ಕಾರ ಅಥವಾ ಯಾವುದೇ ವ್ಯಕ್ತಿಗಳು ಪಠ್ಯ ಪರಿಷ್ಕರಣೆಯ ಸಂದರ್ಭದಲ್ಲಿ ಇತಿಹಾಸಕ್ಕೆ ಅಪಮಾನ ಮಾಡದಂತೆ, ಶರಣರ ಚರಿತ್ರೆಗಳಿಗೆ ಚ್ಯುತಿ ಬಾರದಂತೆ ಮೂಲ ಚರಿತ್ರೆಯನ್ನು ಮರೆಮಾಚದಂತೆ ಸತ್ಯವನ್ನು ಸೇರ್ಪಡೆ ಮಾಡಬೇಕು. ರಾಜಕೀಯ ಕಾರಣಗಳಿಗೆ ಈ ರೀತಿ ಮಾಡಿದ್ದರೆ ಅಕ್ಷಮ್ಯ ಎಂದರು.</p>.<p>ವೀರಶೈವ ಪದ ತೆಗೆದ ಪ್ರಕರಣದ ಬಗ್ಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ತಮ್ಮ ನಿಲುವು ಏನೆಂಬುದನ್ನು ಬಹಿರಂಗ ಪಡಿಸಬೇಕು. ವೀರಶೈವ ಪದ ಸೇರಿಸಲು ಅವರು ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ</strong>: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಶ್ರಮಪಡುವ ಮನೋಭಾವ ಜನರಲ್ಲಿ ಮಾಯವಾಗುತ್ತಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಗ್ಯಾರಂಟಿ ಯೋಜನೆಗಳು ದುರ್ಬಳಕೆಯಾಗುತ್ತಿವೆ. ಕೃಷಿ ಕಾರ್ಯಕ್ಕೆ ಕೂಲಿಕಾರರು ಸಿಗದೆ ರೈತರು ತೊಂದರೆ ಎದುರಿಸುವಂತಾಗಿದೆ ಎಂದು ಇಲ್ಲಿ ಬುಧವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>ಶ್ರಮ ಇಲ್ಲದೆ ಸಂಪತ್ತು ಬರುವುದರಿಂದ ಆಲಸ್ಯ ಉಂಟಾಗುತ್ತದೆ. ಗ್ಯಾರಂಟಿ ಬದಲು ಇದೇ ಅನುದಾನವನ್ನು ನಿರ್ಗತಿಕರು, ನಿಶ್ಯಕ್ತರನ್ನು ಸಬಲರನ್ನಾಗಿ ಮಾಡಲು ಬಳಸಿಕೊಳ್ಳಬೇಕು ಎಂದು ಅವರು ಸರ್ಕಾರಕ್ಕೆ ಸಲಹೆ ನೀಡಿದರು.</p>.<p>ಸರ್ಕಾರದ ಕೆಲವು ಸವಲತ್ತುಗಳು ಮೇಲ್ಜಾತಿಯ ಬಡವರಿಗೆ ತಲುಪುತ್ತಿಲ್ಲ. ಇದನ್ನು ಸರಿಪಡಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಮೇಲ್ಜಾತಿಯಲ್ಲೂ ಬಹಳಷ್ಟು ಬಡವರು ಇದ್ದಾರೆ. ಎಲ್ಲಾ ವರ್ಗಗಳಲ್ಲಿ ಇರುವ ಬಡವರನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಪಠ್ಯ ಪರಿಷ್ಕರಣೆ ವೇಳೆ 9ನೇ ತರಗತಿ ಪಠ್ಯದ ಬಸವಣ್ಣನ ಚರಿತ್ರೆ ವಿಷಯದಲ್ಲಿ ವೀರಶೈವ ಪದ ತೆಗೆದು ಲಿಂಗಾಯತ ಪದ ಬಳಕೆ ಮಾಡಿರುವುದು ಸರಿಯಲ್ಲ. ಬಿಜೆಪಿ ಸರ್ಕಾರದಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಮತ್ತು ಬಿ.ಸಿ.ನಾಗೇಶ್ ಶಿಕ್ಷಣ ಮಂತ್ರಿಗಳಾಗಿದ್ದ ಅವಧಿಯಲ್ಲಿ ಪಠ್ಯ ಪರಿಷ್ಕರಣೆ ವೇಳೆ ಈ ಬದಲಾವಣೆ ಮಾಡಲಾಗಿದೆ. ವೀರಶೈವ ಪದ ಸೇರ್ಪಡೆಗೆ ಕಾಂಗ್ರೆಸ್ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>‘ವೀರಶೈವ ಲಿಂಗಾಯತ ಸಮಾಜವು ದಶಕಗಳಿಂದ ಬಿಜೆಪಿಯನ್ನು ಬೆಂಬಲಿಸುತ್ತಾ ಬಂದಿದೆ. ಆದರೆ, ಈ ರೀತಿ ಮಾಡಿರುವುದು ಸರಿಯಲ್ಲ. ಈ ಮೂಲಕ ಸಮಾಜಕ್ಕೆ ಅಪಚಾರ ಎಸಗಿದಂತಾಗಿದೆ. ಇದನ್ನು ನಮ್ಮ ಪೀಠ ಸೇರಿ ಪಂಚಪೀಠಗಳು ಈಗಾಗಲೇ ವಿರೋಧಿಸಿವೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದು, ಇದುವರೆಗೂ ಕ್ರಮ ಕೈಗೊಂಡಿಲ್ಲ. ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>ಸರ್ಕಾರ ಅಥವಾ ಯಾವುದೇ ವ್ಯಕ್ತಿಗಳು ಪಠ್ಯ ಪರಿಷ್ಕರಣೆಯ ಸಂದರ್ಭದಲ್ಲಿ ಇತಿಹಾಸಕ್ಕೆ ಅಪಮಾನ ಮಾಡದಂತೆ, ಶರಣರ ಚರಿತ್ರೆಗಳಿಗೆ ಚ್ಯುತಿ ಬಾರದಂತೆ ಮೂಲ ಚರಿತ್ರೆಯನ್ನು ಮರೆಮಾಚದಂತೆ ಸತ್ಯವನ್ನು ಸೇರ್ಪಡೆ ಮಾಡಬೇಕು. ರಾಜಕೀಯ ಕಾರಣಗಳಿಗೆ ಈ ರೀತಿ ಮಾಡಿದ್ದರೆ ಅಕ್ಷಮ್ಯ ಎಂದರು.</p>.<p>ವೀರಶೈವ ಪದ ತೆಗೆದ ಪ್ರಕರಣದ ಬಗ್ಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ತಮ್ಮ ನಿಲುವು ಏನೆಂಬುದನ್ನು ಬಹಿರಂಗ ಪಡಿಸಬೇಕು. ವೀರಶೈವ ಪದ ಸೇರಿಸಲು ಅವರು ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>