<p><strong>ದಾವಣಗೆರೆ:</strong> ಖ್ಯಾತ ವೈದ್ಯೆ, ಲೇಖಕಿ ಡಾ.ಎಚ್. ಗಿರಿಜಮ್ಮ (70) ಮಂಗಳವಾರ ಹೃದಯಾಘಾತದಿಂದ ನಿಧನರಾದರು.</p>.<p>ಹರಿಹರದಲ್ಲಿ ಜನಿಸಿದ ಗಿರಿಜಮ್ಮ ಅವರು ಪಿಯುಸಿವರೆಗೂ ಅಲ್ಲಿಯೇ ವಿದ್ಯಾಭ್ಯಾಸ ಮುಗಿಸಿದರು. ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣ ಪಡೆದ ನಂತರ ದಾವಣಗೆರೆ, ಹರಿಹರ ಹಾಗೂ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಿದ್ದರು. ತ್ರಿವೇಣಿ ಅವರ ಬರಹಗಳಿಂದ ಪ್ರೇರಣೆ ಪಡೆದು ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಂಡಿದ್ದರು.</p>.<p>ಅವರ ಮೊದಲ ಕತೆ ‘ಹೂಬಳ್ಳಿಗೆ ಈ ಆಸರೆ’ ‘ಸುಧಾ’ ವಾರಪತ್ರಿಕೆಯಲ್ಲಿ ಪ್ರಕಟವಾಗಿತ್ತು. ‘ಚಂದಮಾಮ’, ‘ತಮಸೋಮ ಜ್ಯೋತಿರ್ಗಮಯ’, ‘ಅಂಬರತಾರೆ’ ಸೇರಿ 27 ಕಾದಂಬರಿಗಳು ಪ್ರಕಟವಾಗಿವೆ. ‘ಅರ್ಧಾಂಗಿ’, ‘ಸಂಜೆಮಲ್ಲಿಗೆ’, ‘ಅನಾವರಣ’ ನೀಳ್ಗತೆಗಳು ಮಯೂರದಲ್ಲಿ ಪ್ರಕಟಗೊಂಡಿವೆ. ಒಟ್ಟು 50 ಕತೆಗಳನ್ನು ಬರೆದಿದ್ದಾರೆ. ಐದು ಕಥಾಸಂಗ್ರಹಗಳು ಪ್ರಕಟಗೊಂಡಿವೆ.</p>.<p>ವೃತ್ತಿಯಿಂದ ವೈದ್ಯರಾದರೂ ಪ್ರವೃತ್ತಿಯಿಂದ ಸಾಹಿತ್ಯ, ಚಲನಚಿತ್ರ, ಸಾಕ್ಷ್ಯಚಿತ್ರಗಳಲ್ಲಿ ತೊಡಗಿಸಿಕೊಂಡಿದ್ದರು. 26 ವೈದ್ಯ ವಿಜ್ಞಾನದ ಕೃತಿಗಳನ್ನು ಪ್ರಕಟಿಸಿರುವ ಗಿರಿಜಮ್ಮ, ‘ಅಂತರಗಂಗೆ’ ಚಲನಚಿತ್ರವನ್ನೂ ನಿರ್ದೇಶಿಸಿದ್ದಾರೆ. ಇವರು ರಚಿಸಿದ ‘ಮೇಘ ಮಂದಾರ’ ಕಾದಂಬರಿ ಸಿನಿಮಾವಾಗಿದೆ. 15 ಟೆಲಿ ಫಿಲ್ಮ್ಗಳು, 5 ಟೆಲಿ ಧಾರಾವಾಹಿಗಳು ಮತ್ತು ಹತ್ತು ಸಾಕ್ಷ್ಯಚಿತ್ರಗಳನ್ನು ನಿರ್ಮಿಸಿದ್ದಾರೆ.</p>.<p>‘ಕಾಡತಾವ ನೆನಪುಗಳು’ ಇವರ ಆತ್ಮಕಥನ. 2014ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 2006ರಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಅತ್ತಿಮಬ್ಬೆ ಪ್ರಶಸ್ತಿ, ಬಿ.ಸರೋಜಾದೇವಿ ದತ್ತಿನಿಧಿ ಪ್ರಶಸ್ತಿಗಳನ್ನು ಪಡೆದಿದ್ದಾರೆ.</p>.<p>ಅವರಿಗೆ ಪತಿ ಭಾಸ್ಕರ್ ಹೆಗಡೆ ಇದ್ದಾರೆ. ಅಂತ್ಯಕ್ರಿಯೆ ಇಲ್ಲಿನ ಮುಕ್ತಿಧಾಮದಲ್ಲಿ ನೆರವೇರಿತು.</p>.<p><a href="https://www.prajavani.net/world-news/which-countries-practice-true-islam-asks-taslima-nasreen-858557.html" itemprop="url">ನಿಜವಾದ ಇಸ್ಲಾಂ ಯಾವ ರಾಷ್ಟ್ರದಲ್ಲಿ ಆಚರಿಸಲಾಗುತ್ತಿದೆ ಹೇಳಿ: ತಸ್ಲಿಮಾ ನಸ್ರೀನ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಖ್ಯಾತ ವೈದ್ಯೆ, ಲೇಖಕಿ ಡಾ.ಎಚ್. ಗಿರಿಜಮ್ಮ (70) ಮಂಗಳವಾರ ಹೃದಯಾಘಾತದಿಂದ ನಿಧನರಾದರು.</p>.<p>ಹರಿಹರದಲ್ಲಿ ಜನಿಸಿದ ಗಿರಿಜಮ್ಮ ಅವರು ಪಿಯುಸಿವರೆಗೂ ಅಲ್ಲಿಯೇ ವಿದ್ಯಾಭ್ಯಾಸ ಮುಗಿಸಿದರು. ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣ ಪಡೆದ ನಂತರ ದಾವಣಗೆರೆ, ಹರಿಹರ ಹಾಗೂ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಿದ್ದರು. ತ್ರಿವೇಣಿ ಅವರ ಬರಹಗಳಿಂದ ಪ್ರೇರಣೆ ಪಡೆದು ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಂಡಿದ್ದರು.</p>.<p>ಅವರ ಮೊದಲ ಕತೆ ‘ಹೂಬಳ್ಳಿಗೆ ಈ ಆಸರೆ’ ‘ಸುಧಾ’ ವಾರಪತ್ರಿಕೆಯಲ್ಲಿ ಪ್ರಕಟವಾಗಿತ್ತು. ‘ಚಂದಮಾಮ’, ‘ತಮಸೋಮ ಜ್ಯೋತಿರ್ಗಮಯ’, ‘ಅಂಬರತಾರೆ’ ಸೇರಿ 27 ಕಾದಂಬರಿಗಳು ಪ್ರಕಟವಾಗಿವೆ. ‘ಅರ್ಧಾಂಗಿ’, ‘ಸಂಜೆಮಲ್ಲಿಗೆ’, ‘ಅನಾವರಣ’ ನೀಳ್ಗತೆಗಳು ಮಯೂರದಲ್ಲಿ ಪ್ರಕಟಗೊಂಡಿವೆ. ಒಟ್ಟು 50 ಕತೆಗಳನ್ನು ಬರೆದಿದ್ದಾರೆ. ಐದು ಕಥಾಸಂಗ್ರಹಗಳು ಪ್ರಕಟಗೊಂಡಿವೆ.</p>.<p>ವೃತ್ತಿಯಿಂದ ವೈದ್ಯರಾದರೂ ಪ್ರವೃತ್ತಿಯಿಂದ ಸಾಹಿತ್ಯ, ಚಲನಚಿತ್ರ, ಸಾಕ್ಷ್ಯಚಿತ್ರಗಳಲ್ಲಿ ತೊಡಗಿಸಿಕೊಂಡಿದ್ದರು. 26 ವೈದ್ಯ ವಿಜ್ಞಾನದ ಕೃತಿಗಳನ್ನು ಪ್ರಕಟಿಸಿರುವ ಗಿರಿಜಮ್ಮ, ‘ಅಂತರಗಂಗೆ’ ಚಲನಚಿತ್ರವನ್ನೂ ನಿರ್ದೇಶಿಸಿದ್ದಾರೆ. ಇವರು ರಚಿಸಿದ ‘ಮೇಘ ಮಂದಾರ’ ಕಾದಂಬರಿ ಸಿನಿಮಾವಾಗಿದೆ. 15 ಟೆಲಿ ಫಿಲ್ಮ್ಗಳು, 5 ಟೆಲಿ ಧಾರಾವಾಹಿಗಳು ಮತ್ತು ಹತ್ತು ಸಾಕ್ಷ್ಯಚಿತ್ರಗಳನ್ನು ನಿರ್ಮಿಸಿದ್ದಾರೆ.</p>.<p>‘ಕಾಡತಾವ ನೆನಪುಗಳು’ ಇವರ ಆತ್ಮಕಥನ. 2014ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 2006ರಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಅತ್ತಿಮಬ್ಬೆ ಪ್ರಶಸ್ತಿ, ಬಿ.ಸರೋಜಾದೇವಿ ದತ್ತಿನಿಧಿ ಪ್ರಶಸ್ತಿಗಳನ್ನು ಪಡೆದಿದ್ದಾರೆ.</p>.<p>ಅವರಿಗೆ ಪತಿ ಭಾಸ್ಕರ್ ಹೆಗಡೆ ಇದ್ದಾರೆ. ಅಂತ್ಯಕ್ರಿಯೆ ಇಲ್ಲಿನ ಮುಕ್ತಿಧಾಮದಲ್ಲಿ ನೆರವೇರಿತು.</p>.<p><a href="https://www.prajavani.net/world-news/which-countries-practice-true-islam-asks-taslima-nasreen-858557.html" itemprop="url">ನಿಜವಾದ ಇಸ್ಲಾಂ ಯಾವ ರಾಷ್ಟ್ರದಲ್ಲಿ ಆಚರಿಸಲಾಗುತ್ತಿದೆ ಹೇಳಿ: ತಸ್ಲಿಮಾ ನಸ್ರೀನ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>