<p><strong>ದಾವಣಗೆರೆ</strong>: ಮದ್ಯದಂಗಡಿ ಪರವಾನಗಿಗೆ ₹ 1.95 ಕೋಟಿ ದರ ನಿಗದಿಪಡಿಸಿದ ರಾಜ್ಯ ಸರ್ಕಾರ, ಪ್ರತಿ ಇಲಾಖೆಯನ್ನು ಲೂಟಿ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. </p><p>‘ಪರಿಶಿಷ್ಟ ಜಾತಿ ಉಪಯೋಜನೆ (ಎಸ್ಸಿಎಸ್ಪಿ) ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ (ಟಿಎಸ್ಪಿ) ಸೇರಿದಂತೆ ಎಲ್ಲವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಜ್ಯದ ಖಾಜಾನೆ ಕೊಳ್ಳೆ ಹೊಡೆಯಲಾಗುತ್ತಿದೆ. ಮದ್ಯದಂಗಡಿ ಹರಾಜು ರಾಜ್ಯ ಸರ್ಕಾರದ ಹೊಸವರ್ಷದ ಕೊಡುಗೆ’ ಎಂದು ಗುರುವಾರ ಸುದ್ದಿಗಾರರ ಬಳಿ ಮಾತನಾಡಿದರು.</p><p>‘ರಾಜ್ಯ ಸರ್ಕಾರದ ಖಜಾನೆಯಿಂದ ಸಾವಿರಾರು ಕೋಟಿ ಹಣ ಬಿಡುಗಡೆಯಾಗಿರುವುದು ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೊತ್ತಿಲ್ಲ. ಹಲವು ಬಾರಿ ಬಜೆಟ್ ಮಂಡಿಸಿದ್ದಾಗಿ ಹೇಳಿಕೊಳ್ಳುವ ಇಂತಹ ಆರ್ಥಿಕ ತಜ್ಞರವನ್ನು ಪ್ರಪಂಚದಲ್ಲಿಯೇ ಕಾಣಲು ಸಾಧ್ಯವಿಲ್ಲ’ ಎಂದು ವ್ಯಂಗ್ಯವಾಡಿದರು.</p><p>‘ರಾಜ್ಯದ ಜನರು ಕಾಂಗ್ರೆಸ್ಗೆ ಅಧಿಕಾರ ನೀಡಿದ್ದಾರೆ. ಸರ್ಕಾರ ರಚನೆಯಾದ ದಿನದಿಂದ ಅಧಿಕಾರ ಹಂಚಿಕೆಯ ಕಿತ್ತಾಟ ನಡೆಯುತ್ತಿದೆ. ಇನ್ನೂ ಎಷ್ಟು ದಿನ ಹೀಗೆ ಕಾಲ ಕಳೆಯುತ್ತೀರಿ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಮದ್ಯದಂಗಡಿ ಪರವಾನಗಿಗೆ ₹ 1.95 ಕೋಟಿ ದರ ನಿಗದಿಪಡಿಸಿದ ರಾಜ್ಯ ಸರ್ಕಾರ, ಪ್ರತಿ ಇಲಾಖೆಯನ್ನು ಲೂಟಿ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. </p><p>‘ಪರಿಶಿಷ್ಟ ಜಾತಿ ಉಪಯೋಜನೆ (ಎಸ್ಸಿಎಸ್ಪಿ) ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ (ಟಿಎಸ್ಪಿ) ಸೇರಿದಂತೆ ಎಲ್ಲವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಜ್ಯದ ಖಾಜಾನೆ ಕೊಳ್ಳೆ ಹೊಡೆಯಲಾಗುತ್ತಿದೆ. ಮದ್ಯದಂಗಡಿ ಹರಾಜು ರಾಜ್ಯ ಸರ್ಕಾರದ ಹೊಸವರ್ಷದ ಕೊಡುಗೆ’ ಎಂದು ಗುರುವಾರ ಸುದ್ದಿಗಾರರ ಬಳಿ ಮಾತನಾಡಿದರು.</p><p>‘ರಾಜ್ಯ ಸರ್ಕಾರದ ಖಜಾನೆಯಿಂದ ಸಾವಿರಾರು ಕೋಟಿ ಹಣ ಬಿಡುಗಡೆಯಾಗಿರುವುದು ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೊತ್ತಿಲ್ಲ. ಹಲವು ಬಾರಿ ಬಜೆಟ್ ಮಂಡಿಸಿದ್ದಾಗಿ ಹೇಳಿಕೊಳ್ಳುವ ಇಂತಹ ಆರ್ಥಿಕ ತಜ್ಞರವನ್ನು ಪ್ರಪಂಚದಲ್ಲಿಯೇ ಕಾಣಲು ಸಾಧ್ಯವಿಲ್ಲ’ ಎಂದು ವ್ಯಂಗ್ಯವಾಡಿದರು.</p><p>‘ರಾಜ್ಯದ ಜನರು ಕಾಂಗ್ರೆಸ್ಗೆ ಅಧಿಕಾರ ನೀಡಿದ್ದಾರೆ. ಸರ್ಕಾರ ರಚನೆಯಾದ ದಿನದಿಂದ ಅಧಿಕಾರ ಹಂಚಿಕೆಯ ಕಿತ್ತಾಟ ನಡೆಯುತ್ತಿದೆ. ಇನ್ನೂ ಎಷ್ಟು ದಿನ ಹೀಗೆ ಕಾಲ ಕಳೆಯುತ್ತೀರಿ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>