<p><strong>ದಾವಣಗೆರೆ: </strong>‘ಎಚ್. ರಾಂಪುರಕ್ಕೆ ರಸ್ತೆನೂ ಮಾಡ್ತೀವಿ, ಆ ಯುವತಿಗೆ ಲಗ್ನನೂ ಮಾಡ್ತೀವಿ’ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭರವಸೆ ನೀಡಿದ್ದಾರೆ.</p>.<p>ತಮ್ಮ ಊರಿಗೆ ರಸ್ತೆ ಮಾಡಿಕೊಡುವವರೆಗೂ ಮದುವೆಯಾಗಲ್ಲ ಎಂದು ಮುಖ್ಯಮಂತ್ರಿಗೆ ಮಾಯಕೊಂಡ ಹೋಬಳಿಯ ಹೆದ್ನೆ ರಾಂಪುರದ ಬಿಂದು ಆರ್.ಡಿ. ಇಮೇಲ್ ಕಳುಹಿಸಿದ್ದರು. ಮಾಧ್ಯಮಗಳಲ್ಲಿ ಇದು ಪ್ರಕಟ ಮತ್ತು ಪ್ರಸಾರ ಆಗಿದ್ದರಿಂದ ಎಚ್. ರಾಂಪುರಕ್ಕೆ ಜಿಲ್ಲಾಧಿಕಾರಿ ಗುರುವಾರ ಭೇಟಿ ನೀಡಿದ ಬಳಿಕ ಈ ಭರವಸೆ ನೀಡಿದರು.</p>.<p><strong>ಓದಿ:</strong><a href="https://www.prajavani.net/district/davanagere/h-rampura-mayakonda-young-woman-decided-not-get-married-still-road-facility-available-in-her-village-866918.html" target="_blank">ದಾವಣಗೆರೆ: ಊರಿಗೆ ರಸ್ತೆ ಆಗುವವರೆಗೂ ಮದುವೆ ಬೇಡ ಎಂದ ಯುವತಿ</a></p>.<p>ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಯುವತಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಅವರು. ರಾಂಪುರದಿಂದ ಹೆದ್ನೆವರೆಗೆ 2 ಕಿ.ಮೀ. ರಸ್ತೆ ಆಗಿದೆ, ಬಾಕಿ ಉಳಿದಿರುವ ರಸ್ತೆ ಕಾಮಗಾರಿಯನ್ನು ಶೀಘ್ರದಲ್ಲಿಯೇ ಕೈಗೊಳ್ಳಲಾಗುವುದು. ವಾಹನಗಳು ಓಡಾಡುವಂತಾಗಲು ತಾತ್ಕಾಲಿಕವಾಗಿ ರಸ್ತೆ ನಿರ್ಮಿಸುವ ಕಾರ್ಯ ಪ್ರಾರಂಭಿಸಲಾಗುವುದು. ಈಗಾಗಲೇ ರಸ್ತೆ ನಿರ್ಮಾಣಕ್ಕಾಗಿ ₹ 60 ಲಕ್ಷ ವೆಚ್ಚದ ಯೋಜನೆ ತಯಾರಿಸಿ, ಮಂಜೂರಾತಿಗಾಗಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಮಂಜೂರಾತಿ ದೊರೆತ ಕೂಡಲೇ ಪೂರ್ಣ ಪ್ರಮಾಣದ ರಸ್ತೆ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.</p>.<p>‘ನಾಳೆಯಿಂದಲೇ ವಾಹನಗಳು ಓಡಾಡುವಂತೆ ಮಾಡಲಾಗುವುದು. ಸರ್ಕಾರದ ಮಂಜೂರಾತಿ ದೊರೆತ ಕೂಡಲೇ ಉತ್ತಮ ರಸ್ತೆಯನ್ನೂ ನಿರ್ಮಿಸಲಾಗುವುದು. ನಿಮ್ಮ ಮದುವೆಯೂ ಆಗುವಂತೆ ಮಾಡುತ್ತೇವೆ’ ಎಂದು ಬಿಂದುಗೆ ಭರವಸೆ ನೀಡಿದರು.</p>.<p>ಪಂಚಾಯತ್ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಪರಮೇಶ್ವರಪ್ಪ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಹದೇವಪ್ಪ, ವಿವಿಧ ಅಧಿಕಾರಿಗಳು, ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>‘ಎಚ್. ರಾಂಪುರಕ್ಕೆ ರಸ್ತೆನೂ ಮಾಡ್ತೀವಿ, ಆ ಯುವತಿಗೆ ಲಗ್ನನೂ ಮಾಡ್ತೀವಿ’ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭರವಸೆ ನೀಡಿದ್ದಾರೆ.</p>.<p>ತಮ್ಮ ಊರಿಗೆ ರಸ್ತೆ ಮಾಡಿಕೊಡುವವರೆಗೂ ಮದುವೆಯಾಗಲ್ಲ ಎಂದು ಮುಖ್ಯಮಂತ್ರಿಗೆ ಮಾಯಕೊಂಡ ಹೋಬಳಿಯ ಹೆದ್ನೆ ರಾಂಪುರದ ಬಿಂದು ಆರ್.ಡಿ. ಇಮೇಲ್ ಕಳುಹಿಸಿದ್ದರು. ಮಾಧ್ಯಮಗಳಲ್ಲಿ ಇದು ಪ್ರಕಟ ಮತ್ತು ಪ್ರಸಾರ ಆಗಿದ್ದರಿಂದ ಎಚ್. ರಾಂಪುರಕ್ಕೆ ಜಿಲ್ಲಾಧಿಕಾರಿ ಗುರುವಾರ ಭೇಟಿ ನೀಡಿದ ಬಳಿಕ ಈ ಭರವಸೆ ನೀಡಿದರು.</p>.<p><strong>ಓದಿ:</strong><a href="https://www.prajavani.net/district/davanagere/h-rampura-mayakonda-young-woman-decided-not-get-married-still-road-facility-available-in-her-village-866918.html" target="_blank">ದಾವಣಗೆರೆ: ಊರಿಗೆ ರಸ್ತೆ ಆಗುವವರೆಗೂ ಮದುವೆ ಬೇಡ ಎಂದ ಯುವತಿ</a></p>.<p>ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಯುವತಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಅವರು. ರಾಂಪುರದಿಂದ ಹೆದ್ನೆವರೆಗೆ 2 ಕಿ.ಮೀ. ರಸ್ತೆ ಆಗಿದೆ, ಬಾಕಿ ಉಳಿದಿರುವ ರಸ್ತೆ ಕಾಮಗಾರಿಯನ್ನು ಶೀಘ್ರದಲ್ಲಿಯೇ ಕೈಗೊಳ್ಳಲಾಗುವುದು. ವಾಹನಗಳು ಓಡಾಡುವಂತಾಗಲು ತಾತ್ಕಾಲಿಕವಾಗಿ ರಸ್ತೆ ನಿರ್ಮಿಸುವ ಕಾರ್ಯ ಪ್ರಾರಂಭಿಸಲಾಗುವುದು. ಈಗಾಗಲೇ ರಸ್ತೆ ನಿರ್ಮಾಣಕ್ಕಾಗಿ ₹ 60 ಲಕ್ಷ ವೆಚ್ಚದ ಯೋಜನೆ ತಯಾರಿಸಿ, ಮಂಜೂರಾತಿಗಾಗಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಮಂಜೂರಾತಿ ದೊರೆತ ಕೂಡಲೇ ಪೂರ್ಣ ಪ್ರಮಾಣದ ರಸ್ತೆ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.</p>.<p>‘ನಾಳೆಯಿಂದಲೇ ವಾಹನಗಳು ಓಡಾಡುವಂತೆ ಮಾಡಲಾಗುವುದು. ಸರ್ಕಾರದ ಮಂಜೂರಾತಿ ದೊರೆತ ಕೂಡಲೇ ಉತ್ತಮ ರಸ್ತೆಯನ್ನೂ ನಿರ್ಮಿಸಲಾಗುವುದು. ನಿಮ್ಮ ಮದುವೆಯೂ ಆಗುವಂತೆ ಮಾಡುತ್ತೇವೆ’ ಎಂದು ಬಿಂದುಗೆ ಭರವಸೆ ನೀಡಿದರು.</p>.<p>ಪಂಚಾಯತ್ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಪರಮೇಶ್ವರಪ್ಪ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಹದೇವಪ್ಪ, ವಿವಿಧ ಅಧಿಕಾರಿಗಳು, ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>