ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಡುಗು ಸಹಿತ ಆಲಿಕಲ್ಲು ಮಳೆ

Last Updated 11 ಮೇ 2021, 5:45 IST
ಅಕ್ಷರ ಗಾತ್ರ

ಉಚ್ಚಂಗಿದುರ್ಗ: ಅರಸೀಕೆರೆ ಹೋಬಳಿ ವ್ಯಾಪ್ತಿಯಲ್ಲಿ ಸೋಮವಾರ ಗುಡುಗು, ಸಿಡಿಲ ಆರ್ಭಟದೊಂದಿಗೆ ಆಲಿಕಲ್ಲು ಸಹಿತ ಉತ್ತಮ ಮಳೆಯಾಗಿದೆ.

ಪುಣಭಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಗ್ಗಿನ ಬಸಾಪುರ ಗ್ರಾಮದ ಹೊನ್ನಕ್ಕ ಅವರಿಗೆ ಸೇರಿದ ಹಸು ಸಿಡಿಲಿಗೆ ಬಲಿಯಾಗಿದೆ.

ಪಕ್ಕದಲ್ಲಿದ್ದ ಕರು ಗಾಯಾಗೊಂಡಿದೆ. ಗ್ರಾಮದ ಗೌಡ್ರ ಬಸವರಾಜಪ್ಪ ಅವರ ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಪುಣಭಘಟ್ಟದಲ್ಲಿ ಪ್ರಭು ಅವರಿಗೆ ಸೇರಿದ ಎಮ್ಮೆ ಸಿಡಿಲು ಬಡಿದು ಮೃತಪಟ್ಟಿದೆ.

ಅರಸೀಕೆರೆ, ಅಣಜಿಗೆರೆ, ಉಚ್ಚಂಗಿದುರ್ಗ ವ್ಯಾಪ್ತಿಯಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ರಭಸದ ಮಳೆ ಸುರಿಯಿತು. ಹಿರೇಮೆಗಳಗೆರೆ, ಲಕ್ಷ್ಮೀಪುರ, ಚಟ್ನಿಹಳ್ಳಿ, ಕಂಚಿಕೆರೆ ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT