<p><strong>ದಾವಣಗೆರೆ</strong>: ರಾಜ್ಯದ ಹಕ್ಕಿಪಿಕ್ಕಿ ಸಮುದಾಯದ 8 ಜನರು ವೀಸಾ ಅವಧಿ ಮುಗಿದ ಕಾರಣ ಮಧ್ಯ ಆಫ್ರಿಕಾದ ರಾಷ್ಟ್ರ ಚಾಡ್ನಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದಾರೆ.</p>.<p>ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಮೂಲದ ಎಂಟು ಜನರಲ್ಲಿ ಮೂವರು ಮಹಿಳೆಯರಿದ್ದಾರೆ. ಇವರ ವೀಸಾ ಅವಧಿ 2025ರ ಡಿಸೆಂಬರ್ 22 ರಂದು ಮುಕ್ತಾಯವಾಗಿದೆ. </p>.<p>‘ಗಿಡಮೂಲಿಕೆಗಳ ಔಷಧ ಮಾರಾಟಕ್ಕಾಗಿ ಸೆಪ್ಟೆಂಬರ್ನಲ್ಲಿ ಚಾಡ್ನ ರಾಜಧಾನಿ ಎನ್ಜಮೇನಾಗೆ ಬಂದಿದ್ದೆವೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ವೀಸಾ ನವೀಕರಣಗೊಂಡಿಲ್ಲ. ತಲಾ ₹ 1.5 ಲಕ್ಷ ದಂಡ ಪಾವತಿಸದಿದ್ದರೆ, ಜೈಲಿಗೆ ಕಳಿಸುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಭಾರತ ಸರ್ಕಾರ ನಮಗೆ ನೆರವು ನೀಡಬೇಕು’ ಎಂದು ಬಂಧನದ ಭೀತಿಯಲ್ಲಿರುವವರು ವಿಡಿಯೊ ಮೂಲಕ ಒತ್ತಾಯಿಸಿದ್ದಾರೆ. </p>.<p>‘ವೀಸಾ ನವೀಕರಣಕ್ಕೆ ಮೊದಲೇ ಅರ್ಜಿ ಸಲ್ಲಿಸಿದ್ದರೂ, ಅಲ್ಲಿನ ಅಧಿಕಾರಿಗಳು ಸಮಸ್ಯೆ ಸೃಷ್ಟಿಸಿದ್ದಾರೆ. ಕೇಂದ್ರ ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮವಹಿಸಬೇಕು’ ಎಂದು ಕರ್ನಾಟಕ ಹಕ್ಕಿ-ಪಿಕ್ಕಿ ಬುಡಕಟ್ಟು ಸಂಘಟನೆ ಅಧ್ಯಕ್ಷ ಪುನೀತ್ ಕುಮಾರ್ ಆಗ್ರಹಿಸಿದ್ದಾರೆ.</p>.<p>‘ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಕಾರಿಗಳ ಜೊತೆ ಚರ್ಚಿಸಿ ಪರಿಹಾರ ಒದಗಿಸಬೇಕು’ ಎಂದು ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮನವಿ ಮಾಡಿದ್ದೇವೆ’ ಎಂದೂ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ರಾಜ್ಯದ ಹಕ್ಕಿಪಿಕ್ಕಿ ಸಮುದಾಯದ 8 ಜನರು ವೀಸಾ ಅವಧಿ ಮುಗಿದ ಕಾರಣ ಮಧ್ಯ ಆಫ್ರಿಕಾದ ರಾಷ್ಟ್ರ ಚಾಡ್ನಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದಾರೆ.</p>.<p>ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಮೂಲದ ಎಂಟು ಜನರಲ್ಲಿ ಮೂವರು ಮಹಿಳೆಯರಿದ್ದಾರೆ. ಇವರ ವೀಸಾ ಅವಧಿ 2025ರ ಡಿಸೆಂಬರ್ 22 ರಂದು ಮುಕ್ತಾಯವಾಗಿದೆ. </p>.<p>‘ಗಿಡಮೂಲಿಕೆಗಳ ಔಷಧ ಮಾರಾಟಕ್ಕಾಗಿ ಸೆಪ್ಟೆಂಬರ್ನಲ್ಲಿ ಚಾಡ್ನ ರಾಜಧಾನಿ ಎನ್ಜಮೇನಾಗೆ ಬಂದಿದ್ದೆವೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ವೀಸಾ ನವೀಕರಣಗೊಂಡಿಲ್ಲ. ತಲಾ ₹ 1.5 ಲಕ್ಷ ದಂಡ ಪಾವತಿಸದಿದ್ದರೆ, ಜೈಲಿಗೆ ಕಳಿಸುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಭಾರತ ಸರ್ಕಾರ ನಮಗೆ ನೆರವು ನೀಡಬೇಕು’ ಎಂದು ಬಂಧನದ ಭೀತಿಯಲ್ಲಿರುವವರು ವಿಡಿಯೊ ಮೂಲಕ ಒತ್ತಾಯಿಸಿದ್ದಾರೆ. </p>.<p>‘ವೀಸಾ ನವೀಕರಣಕ್ಕೆ ಮೊದಲೇ ಅರ್ಜಿ ಸಲ್ಲಿಸಿದ್ದರೂ, ಅಲ್ಲಿನ ಅಧಿಕಾರಿಗಳು ಸಮಸ್ಯೆ ಸೃಷ್ಟಿಸಿದ್ದಾರೆ. ಕೇಂದ್ರ ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮವಹಿಸಬೇಕು’ ಎಂದು ಕರ್ನಾಟಕ ಹಕ್ಕಿ-ಪಿಕ್ಕಿ ಬುಡಕಟ್ಟು ಸಂಘಟನೆ ಅಧ್ಯಕ್ಷ ಪುನೀತ್ ಕುಮಾರ್ ಆಗ್ರಹಿಸಿದ್ದಾರೆ.</p>.<p>‘ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಕಾರಿಗಳ ಜೊತೆ ಚರ್ಚಿಸಿ ಪರಿಹಾರ ಒದಗಿಸಬೇಕು’ ಎಂದು ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮನವಿ ಮಾಡಿದ್ದೇವೆ’ ಎಂದೂ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>