<p><strong>ದಾವಣಗೆರೆ:</strong> ಮಧ್ಯ ಆಫ್ರಿಕಾದ ರಾಷ್ಟ್ರ ಚಾಡ್ನಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಹಕ್ಕಿಪಿಕ್ಕಿ ಸಮುದಾಯದ 8 ಜನರು ಸುರಕ್ಷಿತವಾಗಿ ಕರ್ನಾಟಕಕ್ಕೆ ಮರಳಿದ್ದಾರೆ. ತವರಿಗೆ ವಾಪಾಸ್ ಬರಲು ಸಹಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಸೋಮವಾರ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.</p>.<p>ದಾವಣಗೆರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯ 8 ಜನರು ಗಿಡಮೂಲಿಕೆ ಮಾರಾಟಕ್ಕೆ ಚಾಡ್ ದೇಶಕ್ಕೆ ತೆರಳಿದ್ದರು. ಇವರ ವೀಸಾ ಅವಧಿ ಡಿ.22ಕ್ಕೆ ಮುಕ್ತಾಯವಾಗಿತ್ತು. ಇವರ ಪಾಸ್ಪೋರ್ಟ್ಗಳನ್ನು ಫೆಬ್ರುವರಿ ಮೊದಲ ವಾರದಲ್ಲಿ ವಶಕ್ಕೆ ಪಡೆದ ಚಾಡ್ ದೇಶದ ಅಧಿಕಾರಿಗಳು ಬಂಧಿಸುವ ಎಚ್ಚರಿಕೆ ನೀಡಿದ್ದರು.</p>.<p>‘ಮಾಹಿತಿ ತಿಳಿದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಅಧಿಕಾರಿಗಳೊಂದಿಗೆ ತ್ವರಿತಗತಿಯಲ್ಲಿ ಸಮನ್ವಯ ಸಾಧಿಸಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದರು. ಇದರ ಪರಿಣಾಮವಾಗಿ ಎಲ್ಲರೂ ಸುರಕ್ಷಿತವಾಗಿ ಭಾರತಕ್ಕೆ ಮರಳಲು ಸಾಧ್ಯವಾಯಿತು’ ಎಂದು ಸಂಸದರ ಕಚೇರಿಯ ಪ್ರಕಟಣೆ ತಿಳಿಸಿದೆ.</p>
<p><strong>ದಾವಣಗೆರೆ:</strong> ಮಧ್ಯ ಆಫ್ರಿಕಾದ ರಾಷ್ಟ್ರ ಚಾಡ್ನಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಹಕ್ಕಿಪಿಕ್ಕಿ ಸಮುದಾಯದ 8 ಜನರು ಸುರಕ್ಷಿತವಾಗಿ ಕರ್ನಾಟಕಕ್ಕೆ ಮರಳಿದ್ದಾರೆ. ತವರಿಗೆ ವಾಪಾಸ್ ಬರಲು ಸಹಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಸೋಮವಾರ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.</p>.<p>ದಾವಣಗೆರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯ 8 ಜನರು ಗಿಡಮೂಲಿಕೆ ಮಾರಾಟಕ್ಕೆ ಚಾಡ್ ದೇಶಕ್ಕೆ ತೆರಳಿದ್ದರು. ಇವರ ವೀಸಾ ಅವಧಿ ಡಿ.22ಕ್ಕೆ ಮುಕ್ತಾಯವಾಗಿತ್ತು. ಇವರ ಪಾಸ್ಪೋರ್ಟ್ಗಳನ್ನು ಫೆಬ್ರುವರಿ ಮೊದಲ ವಾರದಲ್ಲಿ ವಶಕ್ಕೆ ಪಡೆದ ಚಾಡ್ ದೇಶದ ಅಧಿಕಾರಿಗಳು ಬಂಧಿಸುವ ಎಚ್ಚರಿಕೆ ನೀಡಿದ್ದರು.</p>.<p>‘ಮಾಹಿತಿ ತಿಳಿದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಅಧಿಕಾರಿಗಳೊಂದಿಗೆ ತ್ವರಿತಗತಿಯಲ್ಲಿ ಸಮನ್ವಯ ಸಾಧಿಸಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದರು. ಇದರ ಪರಿಣಾಮವಾಗಿ ಎಲ್ಲರೂ ಸುರಕ್ಷಿತವಾಗಿ ಭಾರತಕ್ಕೆ ಮರಳಲು ಸಾಧ್ಯವಾಯಿತು’ ಎಂದು ಸಂಸದರ ಕಚೇರಿಯ ಪ್ರಕಟಣೆ ತಿಳಿಸಿದೆ.</p>