ಶಾಲಾ ಆರಂಭದ ಪೂರ್ವದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಶಾಲೆಯ ಶತಮಾನೋತ್ಸವ ಆಚರಣೆ ಸಮಿತಿ ಮತ್ತು ಮುಖ್ಯೋಪಾಧ್ಯಾಯರು, ಶಿಕ್ಷಕರ ನೇತೃತ್ವದ ತಂಡ ಸುತ್ತಮುತ್ತಲ ಪ್ರದೇಶಗಳಲ್ಲಿ ಸಮೀಕ್ಷೆ ಕಾರ್ಯ ಕೈಗೊಂಡು, ಪೋಷಕರಲ್ಲಿ ಸರ್ಕಾರಿ ಶಾಲೆಗಳ ಸೌಲಭ್ಯ, ಗುಣಮಟ್ಟದ ಶಿಕ್ಷಣದ ಭರವಸೆ ಬಗ್ಗೆ ಜಾಗೃತಿ ಮೂಡಿಸಿದ್ದರು. ಇದರ ಪರಿಣಾಮ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸರ್ಕಾರಿ ಶಾಲೆ ಸೇರುತ್ತಿದ್ದಾರೆ ಎಂದು ಎಸ್ಡಿಎಂಸಿ ಮಾಜಿ ಅಧ್ಯಕ್ಷ ಅಂಜಿನಪ್ಪ ತಿಳಿಸಿದರು.