ಡಿವೈಎಸ್ಪಿ ಕೃಷ್ಣಮೂರ್ತಿ, ಸೋಮಶೇಖರ್, ವೇದಮೂರ್ತಿ, ‘ಪ್ರಜಾವಾಣಿ’ ಪ್ರಸರಣ ವಿಭಾಗದ ಎಸ್.ಸತೀಶ್ ಮತ್ತಿತರರು ಇದ್ದರು. ಪೊಲೀಸ್ ಇಲಾಖೆಯ ಸಿಬ್ಬಂದಿಯ ಮಕ್ಕಳು ಹಾಗೂ ನಗರದ ವಿವಿಧ ಕಾಲೇಜುಗಳಲ್ಲಿ ಅಭ್ಯಾಸ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೆ ಚಂದಾರಿಕೆಯ ಕೊಡುಗೆ ನೀಡಲಾಯಿತು. ಉಪನ್ಯಾಸಕ ವೆಂಕಟೇಶ್ಬಾಬು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಬಗೆ ಹಾಗೂ ‘ಪ್ರಜಾವಾಣಿ’, ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಗಳ ಮಹತ್ವ ಕುರಿತು ಮಾತನಾಡಿದರು. ಡಿವೈಎಸ್ಪಿ ಪ್ರಕಾಶ್ ಸ್ವಾಗತಿಸಿದರು. ‘ಪ್ರಜಾವಾಣಿ’, ‘ಡೆಕ್ಕನ್ ಹೆರಾಲ್ಡ್’, ‘ಮಾಸ್ಟರ್ ಮೈಂಡ್’ ಪ್ರಚಾರಕ ಮಣಿಕಂಠ ಕಾರ್ಯಕ್ರಮ ನಿರೂಪಿಸಿದರು. ಸಮಾರಂಭದಲ್ಲಿ ವಿದ್ಯಾರ್ಥಿಗಳು ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಜರಿದ್ದರು.