<p><strong>ಹರಿಹರ:</strong> ‘ದುಶ್ಚಟಗಳಿಂದ ದೂರ ಉಳಿದರೆ ನಾನೂ ಮತ್ತು ನಮ್ಮ ಕುಟುಂಬ ನೆಮ್ಮದಿಯ ಜೀವನ ಸಾಗಿಸಲು ಸಾಧ್ಯ’ ಎಂದು ಜನ ಜಾಗೃತಿ ವೇದಿಕೆಯ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎಚ್.ಪಿ.ಬಾಬಣ್ಣ ಹೇಳಿದರು.</p>.<p>ನಗರದ ಕೆ.ಆರ್.ಬಡಾವಣೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಇಂದಿನ ಯುವ ಪೀಳಿಗೆ ವಿವಿಧ ದುಶ್ಚಟಗಳಿಗೆ ಒಳಗಾಗಿ ತಮ್ಮ ಉಜ್ವಲ ಭವಿಷ್ಯವನ್ನು ನಾಶ ಮಾಡಿಕೊಳ್ಳುತ್ತಿದ್ದಾರೆ. ಯುವಕರು ಇನ್ನಾದರೂ ಜಾಗೃತರಾಗಬೇಕಿದೆ. ದೇಶದಲ್ಲಿ ಅನೇಕ ಯುವಕ– ಯುವತಿಯರು ತಂಬಾಂಕು ಸೇವನೆ ಮಾಡುತ್ತಿದ್ದಾರೆ. ಅವರ ಈ ವ್ಯಸನವನ್ನು ಪೋಷಕರು ಪತ್ತೆ ಹಚ್ಚಿ ದುಶ್ಚಟಗಳ ದಾಸ್ಯದಿಂದ ದೂರ ಮಾಡಲು ಮುಂದಾಗಬೇಕು’ ಎಂದರು.</p>.<p>ಸಂಪನ್ಮೂಲ ವ್ಯಕ್ತಿ ಮಂಜುಳಾ, ಮೇಲ್ವಿಚಾರಕ ಮಲ್ಲಿಕಾರ್ಜುನ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ರೂಪಾ, ಶಿವಕುಮಾರ್, ಸೇವಾ ಪ್ರತಿನಿಧಿ ಪ್ರೇಮಲೀಲಾ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-43-810093996</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ:</strong> ‘ದುಶ್ಚಟಗಳಿಂದ ದೂರ ಉಳಿದರೆ ನಾನೂ ಮತ್ತು ನಮ್ಮ ಕುಟುಂಬ ನೆಮ್ಮದಿಯ ಜೀವನ ಸಾಗಿಸಲು ಸಾಧ್ಯ’ ಎಂದು ಜನ ಜಾಗೃತಿ ವೇದಿಕೆಯ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎಚ್.ಪಿ.ಬಾಬಣ್ಣ ಹೇಳಿದರು.</p>.<p>ನಗರದ ಕೆ.ಆರ್.ಬಡಾವಣೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಇಂದಿನ ಯುವ ಪೀಳಿಗೆ ವಿವಿಧ ದುಶ್ಚಟಗಳಿಗೆ ಒಳಗಾಗಿ ತಮ್ಮ ಉಜ್ವಲ ಭವಿಷ್ಯವನ್ನು ನಾಶ ಮಾಡಿಕೊಳ್ಳುತ್ತಿದ್ದಾರೆ. ಯುವಕರು ಇನ್ನಾದರೂ ಜಾಗೃತರಾಗಬೇಕಿದೆ. ದೇಶದಲ್ಲಿ ಅನೇಕ ಯುವಕ– ಯುವತಿಯರು ತಂಬಾಂಕು ಸೇವನೆ ಮಾಡುತ್ತಿದ್ದಾರೆ. ಅವರ ಈ ವ್ಯಸನವನ್ನು ಪೋಷಕರು ಪತ್ತೆ ಹಚ್ಚಿ ದುಶ್ಚಟಗಳ ದಾಸ್ಯದಿಂದ ದೂರ ಮಾಡಲು ಮುಂದಾಗಬೇಕು’ ಎಂದರು.</p>.<p>ಸಂಪನ್ಮೂಲ ವ್ಯಕ್ತಿ ಮಂಜುಳಾ, ಮೇಲ್ವಿಚಾರಕ ಮಲ್ಲಿಕಾರ್ಜುನ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ರೂಪಾ, ಶಿವಕುಮಾರ್, ಸೇವಾ ಪ್ರತಿನಿಧಿ ಪ್ರೇಮಲೀಲಾ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-43-810093996</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>