<p><strong>ಹರಿಹರ:</strong> ನಿಗದಿತ ಸಮಯದಲ್ಲಿ ನಗರಸಭೆಯ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸದ ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಶಾಸಕ ಬಿ.ಪಿ.ಹರೀಶ್ ಅವರು ನಗರಸಭೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p>ನಗರಸಭೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಕಟ್ಟಡ ಕಾಮಗಾರಿ ಸ್ಥಗಿತಗೊಂಡಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ, ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಅವರು ಮಾತನಾಡಿದರು.</p>.<p>ಅಧಿಕಾರಿಗಳಿಂದ ಕಾಮಗಾರಿಯ ಮಾಹಿತಿ ಪಡೆದ ಅವರು, ‘ಗುತ್ತಿಗೆದಾರನಿಗೆ ಕೆಲಸ ಮಾಡಲು ಆಗದಿದ್ದರೆ ತಕ್ಷಣವೇ ನೋಟಿಸ್ ನೀಡಿ, ಬೇರೆಯವರಿಗೆ ಗುತ್ತಿಗೆ ವಹಿಸಿ ಆದಷ್ಟು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಿ’ ಎಂದು ತಾಕೀತು ಮಾಡಿದರು.</p>.<p>ಈ ವೇಳೆ ಸ್ಥಳದಲ್ಲಿದ್ದ ಎಇಇ ವಿನಯ್ ಕುಮಾರ್ ಅವರು, ‘ಗುತ್ತಿಗೆದಾರನಿಗೆ ಈಗಾಗಲೇ ಹಲವು ಬಾರಿ ನೋಟಿಸ್ ನೀಡಿ ಕಾಮಗಾರಿ ಮುಂದುವರಿಸಲು ಸೂಚನೆ ನೀಡಿದ್ದರೂ, ಅವರಿಂದ ಯಾವುದೇ ಉತ್ತರ ಬಂದಿಲ್ಲ’ ಎಂದು ಶಾಸಕರ ಗಮನಕ್ಕೆ ತಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ‘ನೋಟಿಸ್ಗೆ ಉತ್ತರಿಸದ ಇಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಮೇಲಧಿಕಾರಿಗಳಿಗೆ ದೂರು ನೀಡಿ. ಈ ಬಗ್ಗೆ ನಾನೂ ಅವರೊಂದಿಗೆ ಮಾತನಾಡುತ್ತೇನೆ’ ಎಂದರು.</p>.<p>ರೈಲ್ವೆ ಕೆಳಸೇತುವೆ ರಸ್ತೆ ಪರಿಶೀಲನೆ: ಇದಕ್ಕೂ ಮುನ್ನ ನಗರದ ಹರಪನಹಳ್ಳಿ ರಸ್ತೆಯ ರೈಲ್ವೆ ಕೆಳಸೇತುವೆ (ಅಂಡರ್ ಪಾಸ್) ರಸ್ತೆಗೆ ಅಧಿಕಾರಿಗಳೊಂದಿಗೆ ಶಾಸಕರು ಭೇಟಿ ನೀಡಿ ಪರಿಶೀಲಿಸಿದರು.</p>.<p>ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳಿಂದ ವಾಹನ ಸವಾರರು ತೀವ್ರ ಸಂಕಷ್ಟ ಪಡುತ್ತಿದ್ದಾರೆ. ಮಳೆ ನೀರು ಸರಾಗವಾಗಿ ಹರಿದು ಹೋಗಲು ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ರಸ್ತೆಯನ್ನು ಸಂಪೂರ್ಣ ಗುಂಡಿಮುಕ್ತಗೊಳಿಸಬೇಕು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಪೌರಾಯುಕ್ತೆ ಈರಮ್ಮ, ಬಿಜೆಪಿ ನಗರ ಘಟಕದ ಅಧ್ಯಕ್ಷ ಅಜಿತ್ ಸಾವಂತ್, ಪ್ರಧಾನ ಕಾರ್ಯದರ್ಶಿಗಳಾದ ಮಂಜಾನಾಯ್ಕ್, ತುಳಜಪ್ಪ ಭೂತೆ, ಧೂಡಾ ಮಾಜಿ ಸದಸ್ಯ ರಾಜು ರೋಖಡೆ, ಮುಖಂಡರಾದ ಚಂದ್ರಶೇಖರ್ ಸರಪದ, ವೈ.ಬಿ. ಪ್ರಭಾಕರ್ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-43-990013004</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ:</strong> ನಿಗದಿತ ಸಮಯದಲ್ಲಿ ನಗರಸಭೆಯ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸದ ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಶಾಸಕ ಬಿ.ಪಿ.ಹರೀಶ್ ಅವರು ನಗರಸಭೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.</p>.<p>ನಗರಸಭೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಕಟ್ಟಡ ಕಾಮಗಾರಿ ಸ್ಥಗಿತಗೊಂಡಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ, ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಅವರು ಮಾತನಾಡಿದರು.</p>.<p>ಅಧಿಕಾರಿಗಳಿಂದ ಕಾಮಗಾರಿಯ ಮಾಹಿತಿ ಪಡೆದ ಅವರು, ‘ಗುತ್ತಿಗೆದಾರನಿಗೆ ಕೆಲಸ ಮಾಡಲು ಆಗದಿದ್ದರೆ ತಕ್ಷಣವೇ ನೋಟಿಸ್ ನೀಡಿ, ಬೇರೆಯವರಿಗೆ ಗುತ್ತಿಗೆ ವಹಿಸಿ ಆದಷ್ಟು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಿ’ ಎಂದು ತಾಕೀತು ಮಾಡಿದರು.</p>.<p>ಈ ವೇಳೆ ಸ್ಥಳದಲ್ಲಿದ್ದ ಎಇಇ ವಿನಯ್ ಕುಮಾರ್ ಅವರು, ‘ಗುತ್ತಿಗೆದಾರನಿಗೆ ಈಗಾಗಲೇ ಹಲವು ಬಾರಿ ನೋಟಿಸ್ ನೀಡಿ ಕಾಮಗಾರಿ ಮುಂದುವರಿಸಲು ಸೂಚನೆ ನೀಡಿದ್ದರೂ, ಅವರಿಂದ ಯಾವುದೇ ಉತ್ತರ ಬಂದಿಲ್ಲ’ ಎಂದು ಶಾಸಕರ ಗಮನಕ್ಕೆ ತಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ‘ನೋಟಿಸ್ಗೆ ಉತ್ತರಿಸದ ಇಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಮೇಲಧಿಕಾರಿಗಳಿಗೆ ದೂರು ನೀಡಿ. ಈ ಬಗ್ಗೆ ನಾನೂ ಅವರೊಂದಿಗೆ ಮಾತನಾಡುತ್ತೇನೆ’ ಎಂದರು.</p>.<p>ರೈಲ್ವೆ ಕೆಳಸೇತುವೆ ರಸ್ತೆ ಪರಿಶೀಲನೆ: ಇದಕ್ಕೂ ಮುನ್ನ ನಗರದ ಹರಪನಹಳ್ಳಿ ರಸ್ತೆಯ ರೈಲ್ವೆ ಕೆಳಸೇತುವೆ (ಅಂಡರ್ ಪಾಸ್) ರಸ್ತೆಗೆ ಅಧಿಕಾರಿಗಳೊಂದಿಗೆ ಶಾಸಕರು ಭೇಟಿ ನೀಡಿ ಪರಿಶೀಲಿಸಿದರು.</p>.<p>ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳಿಂದ ವಾಹನ ಸವಾರರು ತೀವ್ರ ಸಂಕಷ್ಟ ಪಡುತ್ತಿದ್ದಾರೆ. ಮಳೆ ನೀರು ಸರಾಗವಾಗಿ ಹರಿದು ಹೋಗಲು ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ರಸ್ತೆಯನ್ನು ಸಂಪೂರ್ಣ ಗುಂಡಿಮುಕ್ತಗೊಳಿಸಬೇಕು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಪೌರಾಯುಕ್ತೆ ಈರಮ್ಮ, ಬಿಜೆಪಿ ನಗರ ಘಟಕದ ಅಧ್ಯಕ್ಷ ಅಜಿತ್ ಸಾವಂತ್, ಪ್ರಧಾನ ಕಾರ್ಯದರ್ಶಿಗಳಾದ ಮಂಜಾನಾಯ್ಕ್, ತುಳಜಪ್ಪ ಭೂತೆ, ಧೂಡಾ ಮಾಜಿ ಸದಸ್ಯ ರಾಜು ರೋಖಡೆ, ಮುಖಂಡರಾದ ಚಂದ್ರಶೇಖರ್ ಸರಪದ, ವೈ.ಬಿ. ಪ್ರಭಾಕರ್ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-43-990013004</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>