<p><strong>ಹರಿಹರ</strong>: ನಗರದ ಉದ್ಯಾನವನಗಳಲ್ಲಿರುವ ಅಕ್ರಮ ಕಟ್ಟಡಗಳ ತೆರವು, ರಸ್ತೆ ದುರಸ್ತಿ, ಪಾದಚಾರಿಗಳಿಗೆ ಫುಟ್ ಪಾತ್ ವ್ಯವಸ್ಥೆ ಸೇರಿದಂತೆ ನಾನಾ ಸಮಸ್ಯೆಗಳ ಪರಿಹಾರ ಕೋರಿ ನಗರಸಭೆಯಲ್ಲಿ ಶನಿವಾರ ನಡೆದ 2026–27ನೇ ಸಾಲಿನ ಆಯ–ವ್ಯಯದ 2ನೇ ಪೂರ್ವಭಾವಿ ಸಭೆಯಲ್ಲಿ ಸಾರ್ವಜನಿಕರು ಅಧಿಕಾರಿಗಳ ಗಮನ ಸೆಳೆದರು.</p>.<p>ಉದ್ಯಾನವನಗಳಲ್ಲಿ ಅನಧಿಕೃತ ಕಟ್ಟಡಗಳಿದ್ದು, ಇದು ಸುಪ್ರೀಂಕೋರ್ಟ್ ಆದೇಶಕ್ಕೆ ವಿರುದ್ಧವಾಗಿದೆ. ಆದ್ದರಿಂದ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಪರಿಸರ ಸಂರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಸಂಚಾಲಕ ಬಿ.ಮಗ್ದುಮ್ ಆಗ್ರಹಿಸಿದರು.</p>.<p>ತುಂಗಭದ್ರ ಹೊಸ ಸೇತುವೆ ಸೇರಿದಂತೆ ನಗರದ ವಿವಿಧ ಬಡಾವಣೆಗಳಲ್ಲಿ ಬೀದಿ ದೀಪಗಳ ಅಳವಡಿಕೆ ಬಗ್ಗೆ ಆನಂದ್ ಮಾತನಾಡಿದರೆ, ಆಂಜನೇಯ ಬಡಾವಣೆ ರಸ್ತೆಗಳ ಅಭಿವೃದ್ಧಿ, ಶಾಲೆಗಳಿಗೆ ಕಾಂಪೌಂಡ್ ನಿರ್ಮಿಸಲು ರೈತ ಸಂಘದ ರತ್ನಮ್ಮ ಆಗ್ರಹಿಸಿದರು.</p>.<p>ಕೆ.ಎಚ್.ಬಿ. ಕಾಲೊನಿಯಲ್ಲಿ ರಸ್ತೆ, ಉದ್ಯಾನವನ, ಕುಡಿಯುವ ನೀರಿನ ವ್ಯವಸ್ಥೆ, ಬೀದಿ ದೀಪ ಅಳವಡಿಕೆ ಬಗ್ಗೆ ನಗರಸಭೆ ಮಾಜಿ ಸದಸ್ಯ ಎಂ.ಬಿ. ಅಣ್ಣಪ್ಪ ಗಮನ ಸೆಳೆದರು. ಕುಡಿಯುವ ನೀರಿನ ದರ ಇಳಿಕೆಗೆ ಕಾರ್ಮಿಕ ಮುಖಂಡ ಎಚ್.ಕೆ. ಕೊಟ್ರಪ್ಪ ಆಗ್ರಹಿಸಿದರು.</p>.<p>ರಸ್ತೆ ಕಾಮಗಾರಿ, ಶೌಚಾಲಯ ವ್ಯವಸ್ಥೆ, ಬಿಡಾಡಿ ದನಗಳ ಕಾಟ, ಪೌರ ಕಾರ್ಮಿಕರ ನೇಮಕ, ನಾಮಫಲಕ ಅಳವಡಿಕೆ, ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಕೆ, ಕನ್ನಡ ಭವನ ನಿರ್ಮಾಣ ಹಾಗೂ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಹೆಚ್ಚಿನ ಅನುದಾನ ಸೇರಿ ವಿವಿಧ ಅಹವಾಲುಗಳನ್ನು ಸಾರ್ವಜನಿಕರು ಸಭೆಯ ಮುಂದಿಟ್ಟರು.</p>.<p>ಧೂಡಾ ಹರಿಹರಕ್ಕೆ ಅನುದಾನ ಬಿಡುಗಡೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಜಿಲ್ಲೆಯಲ್ಲಿ ದಾವಣಗೆರೆ ನಂತರ ದೊಡ್ಡ ನಗರವಾಗಿರುವ ಹರಿಹರದ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದು ಜಯ ಕರ್ನಾಟಕ ಸಂಘಟನೆಯ ಎಸ್.ಗೋವಿಂದ ಹೇಳಿದರು.</p>.<p>ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹಾಂತೇಶ್ ಎನ್. ಅಧ್ಯಕ್ಷತೆ ವಹಿಸಿದ್ದರು. ಪ್ರಭಾರಿ ಪೌರಾಯುಕ್ತ ವಿನಯ್ ಕುಮಾರ್, ಕಚೇರಿ ವ್ಯವಸ್ಥಾಪಕ ಏಕನಾಥ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರಿದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ</strong>: ನಗರದ ಉದ್ಯಾನವನಗಳಲ್ಲಿರುವ ಅಕ್ರಮ ಕಟ್ಟಡಗಳ ತೆರವು, ರಸ್ತೆ ದುರಸ್ತಿ, ಪಾದಚಾರಿಗಳಿಗೆ ಫುಟ್ ಪಾತ್ ವ್ಯವಸ್ಥೆ ಸೇರಿದಂತೆ ನಾನಾ ಸಮಸ್ಯೆಗಳ ಪರಿಹಾರ ಕೋರಿ ನಗರಸಭೆಯಲ್ಲಿ ಶನಿವಾರ ನಡೆದ 2026–27ನೇ ಸಾಲಿನ ಆಯ–ವ್ಯಯದ 2ನೇ ಪೂರ್ವಭಾವಿ ಸಭೆಯಲ್ಲಿ ಸಾರ್ವಜನಿಕರು ಅಧಿಕಾರಿಗಳ ಗಮನ ಸೆಳೆದರು.</p>.<p>ಉದ್ಯಾನವನಗಳಲ್ಲಿ ಅನಧಿಕೃತ ಕಟ್ಟಡಗಳಿದ್ದು, ಇದು ಸುಪ್ರೀಂಕೋರ್ಟ್ ಆದೇಶಕ್ಕೆ ವಿರುದ್ಧವಾಗಿದೆ. ಆದ್ದರಿಂದ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಪರಿಸರ ಸಂರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಸಂಚಾಲಕ ಬಿ.ಮಗ್ದುಮ್ ಆಗ್ರಹಿಸಿದರು.</p>.<p>ತುಂಗಭದ್ರ ಹೊಸ ಸೇತುವೆ ಸೇರಿದಂತೆ ನಗರದ ವಿವಿಧ ಬಡಾವಣೆಗಳಲ್ಲಿ ಬೀದಿ ದೀಪಗಳ ಅಳವಡಿಕೆ ಬಗ್ಗೆ ಆನಂದ್ ಮಾತನಾಡಿದರೆ, ಆಂಜನೇಯ ಬಡಾವಣೆ ರಸ್ತೆಗಳ ಅಭಿವೃದ್ಧಿ, ಶಾಲೆಗಳಿಗೆ ಕಾಂಪೌಂಡ್ ನಿರ್ಮಿಸಲು ರೈತ ಸಂಘದ ರತ್ನಮ್ಮ ಆಗ್ರಹಿಸಿದರು.</p>.<p>ಕೆ.ಎಚ್.ಬಿ. ಕಾಲೊನಿಯಲ್ಲಿ ರಸ್ತೆ, ಉದ್ಯಾನವನ, ಕುಡಿಯುವ ನೀರಿನ ವ್ಯವಸ್ಥೆ, ಬೀದಿ ದೀಪ ಅಳವಡಿಕೆ ಬಗ್ಗೆ ನಗರಸಭೆ ಮಾಜಿ ಸದಸ್ಯ ಎಂ.ಬಿ. ಅಣ್ಣಪ್ಪ ಗಮನ ಸೆಳೆದರು. ಕುಡಿಯುವ ನೀರಿನ ದರ ಇಳಿಕೆಗೆ ಕಾರ್ಮಿಕ ಮುಖಂಡ ಎಚ್.ಕೆ. ಕೊಟ್ರಪ್ಪ ಆಗ್ರಹಿಸಿದರು.</p>.<p>ರಸ್ತೆ ಕಾಮಗಾರಿ, ಶೌಚಾಲಯ ವ್ಯವಸ್ಥೆ, ಬಿಡಾಡಿ ದನಗಳ ಕಾಟ, ಪೌರ ಕಾರ್ಮಿಕರ ನೇಮಕ, ನಾಮಫಲಕ ಅಳವಡಿಕೆ, ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಕೆ, ಕನ್ನಡ ಭವನ ನಿರ್ಮಾಣ ಹಾಗೂ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಹೆಚ್ಚಿನ ಅನುದಾನ ಸೇರಿ ವಿವಿಧ ಅಹವಾಲುಗಳನ್ನು ಸಾರ್ವಜನಿಕರು ಸಭೆಯ ಮುಂದಿಟ್ಟರು.</p>.<p>ಧೂಡಾ ಹರಿಹರಕ್ಕೆ ಅನುದಾನ ಬಿಡುಗಡೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಜಿಲ್ಲೆಯಲ್ಲಿ ದಾವಣಗೆರೆ ನಂತರ ದೊಡ್ಡ ನಗರವಾಗಿರುವ ಹರಿಹರದ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದು ಜಯ ಕರ್ನಾಟಕ ಸಂಘಟನೆಯ ಎಸ್.ಗೋವಿಂದ ಹೇಳಿದರು.</p>.<p>ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹಾಂತೇಶ್ ಎನ್. ಅಧ್ಯಕ್ಷತೆ ವಹಿಸಿದ್ದರು. ಪ್ರಭಾರಿ ಪೌರಾಯುಕ್ತ ವಿನಯ್ ಕುಮಾರ್, ಕಚೇರಿ ವ್ಯವಸ್ಥಾಪಕ ಏಕನಾಥ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರಿದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>