<p>ಹರಿಹರ: ‘ಅಡುಗೆ ಅನಿಲದ ಸಿಲಿಂಡರ್ಗಳನ್ನು ಗ್ರಾಹಕರ ಮನೆಗೆ ತಲುಪಿಸದಿದ್ದರೆ ಏಜೆನ್ಸಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ಶಾಸಕ ಬಿ.ಪಿ. ಹರೀಶ್ ಎಚ್ಚರಿಸಿದರು.</p>.<p>ತಾಲ್ಲೂಕು ಕಚೇರಿಯಲ್ಲಿ ಶನಿವಾರ ನಡೆದ ಆಹಾರ, ನಾಗರಿಕ ಸರಬರಾಜು ಇಲಾಖೆ ಹಾಗೂ ಅಡುಗೆ ಅನಿಲ ವಿತರಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಗ್ರಾಹಕರು ಬುಕ್ ಮಾಡಿದ ಸಿಲಿಂಡರ್ಗಳನ್ನು ಕಡ್ಡಾಯವಾಗಿ ಮನೆ–ಮನೆಗೆ ತಲುಪಿಸುವ ವ್ಯವಸ್ಥೆಯಾಗಬೇಕು. ನಿಯಮಗಳನ್ನು ಉಲ್ಲಂಘಿಸಿದರೆ ಏಜೆನ್ಸಿಗಳ ಪರವಾನಗಿ ರದ್ದುಪಡಿಸಲಾಗುವುದು’ ಎಂದರು.</p>.<p>‘ಗೃಹಬಳಕೆಯ ಸಿಲಿಂಡರ್ಗಳನ್ನು ಹೋಟೆಲ್ ಸೇರಿದಂತೆ ವಾಣಿಜ್ಯ ಉದ್ದೇಶಗಳಿಗೆ ಬಳಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಸರಿಯಾದ ಸಮಯಕ್ಕೆ ಬುಕ್ಕಿಂಗ್ ಮಾಡದಿರುವುದು, ಕೆವೈಸಿ ಹಾಗೂ ಆಧಾರ್ ನೋಂದಣಿ ಮಾಡಿಸದಿರುವುದು ಮತ್ತು ನೋಂದಾಯಿತ ಸಂಖ್ಯೆಯ ಬದಲು ಬೇರೆ ಮೊಬೈಲ್ ಸಂಖ್ಯೆಯಿಂದ ಬುಕ್ ಮಾಡುವುದರಿಂದ ವಿತರಣೆಯಲ್ಲಿ ಸಮಸ್ಯೆಗಳು ಹೆಚ್ಚಾಗುತ್ತಿವೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಶಿರಸ್ತೇದಾರ್ ಮಂಜುನಾಥ್, ನಗರ ಶಿರಸ್ತೇದಾರ್ ನಜರುಲ್ಲಾ, ಗ್ರಾಮಾಂತರ ಶಿರಸ್ತೇದಾರ್ ಶಿವಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಗ್ರಾಹಕರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-43-1671704004</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಿಹರ: ‘ಅಡುಗೆ ಅನಿಲದ ಸಿಲಿಂಡರ್ಗಳನ್ನು ಗ್ರಾಹಕರ ಮನೆಗೆ ತಲುಪಿಸದಿದ್ದರೆ ಏಜೆನ್ಸಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ಶಾಸಕ ಬಿ.ಪಿ. ಹರೀಶ್ ಎಚ್ಚರಿಸಿದರು.</p>.<p>ತಾಲ್ಲೂಕು ಕಚೇರಿಯಲ್ಲಿ ಶನಿವಾರ ನಡೆದ ಆಹಾರ, ನಾಗರಿಕ ಸರಬರಾಜು ಇಲಾಖೆ ಹಾಗೂ ಅಡುಗೆ ಅನಿಲ ವಿತರಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಗ್ರಾಹಕರು ಬುಕ್ ಮಾಡಿದ ಸಿಲಿಂಡರ್ಗಳನ್ನು ಕಡ್ಡಾಯವಾಗಿ ಮನೆ–ಮನೆಗೆ ತಲುಪಿಸುವ ವ್ಯವಸ್ಥೆಯಾಗಬೇಕು. ನಿಯಮಗಳನ್ನು ಉಲ್ಲಂಘಿಸಿದರೆ ಏಜೆನ್ಸಿಗಳ ಪರವಾನಗಿ ರದ್ದುಪಡಿಸಲಾಗುವುದು’ ಎಂದರು.</p>.<p>‘ಗೃಹಬಳಕೆಯ ಸಿಲಿಂಡರ್ಗಳನ್ನು ಹೋಟೆಲ್ ಸೇರಿದಂತೆ ವಾಣಿಜ್ಯ ಉದ್ದೇಶಗಳಿಗೆ ಬಳಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಸರಿಯಾದ ಸಮಯಕ್ಕೆ ಬುಕ್ಕಿಂಗ್ ಮಾಡದಿರುವುದು, ಕೆವೈಸಿ ಹಾಗೂ ಆಧಾರ್ ನೋಂದಣಿ ಮಾಡಿಸದಿರುವುದು ಮತ್ತು ನೋಂದಾಯಿತ ಸಂಖ್ಯೆಯ ಬದಲು ಬೇರೆ ಮೊಬೈಲ್ ಸಂಖ್ಯೆಯಿಂದ ಬುಕ್ ಮಾಡುವುದರಿಂದ ವಿತರಣೆಯಲ್ಲಿ ಸಮಸ್ಯೆಗಳು ಹೆಚ್ಚಾಗುತ್ತಿವೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಶಿರಸ್ತೇದಾರ್ ಮಂಜುನಾಥ್, ನಗರ ಶಿರಸ್ತೇದಾರ್ ನಜರುಲ್ಲಾ, ಗ್ರಾಮಾಂತರ ಶಿರಸ್ತೇದಾರ್ ಶಿವಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಗ್ರಾಹಕರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-43-1671704004</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>