<p>ಹರಿಹರ: ಬಿ–ಖಾತಾ ನೀಡುವಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಇಲ್ಲಿನ ನಗರಸಭೆ ಬಿಲ್ ಕಲೆಕ್ಟರ್ (ಕರವಸೂಲಿಗಾರ) ಅಣ್ಣಪ್ಪ ಟಿ. ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.</p>.<p>ಫೆ.17ರಿಂದ ಆರಂಭವಾಗಿದ್ದ ಅಭಿಯಾನದಡಿ, ಈವರೆಗೆ ಅಣ್ಣಪ್ಪ 764 ಅರ್ಜಿಗಳನ್ನು ಸಾರ್ವಜನಿಕರಿಂದ ಸ್ವೀಕರಿಸಿದ್ದಾರೆ. ಈ ಪೈಕಿ 120 ಅರ್ಜಿಗಳನ್ನು ವಿಲೇವಾರಿ ಮಾಡಿದ್ದು, 644 ಅರ್ಜಿಗಳನ್ನು ಬಾಕಿ ಉಳಿಸಿಕೊಂಡಿರುವುದು ತನಿಖೆಯಿಂದ ಪತ್ತೆಯಾಗಿದೆ.</p>.<p>ಈ ಹಿಂದೆ ಅಣ್ಣಪ್ಪ ಅವರಿಗೆ ಗೂಗಲ್ ಮೀಟ್ನಲ್ಲಿ ಹಲವು ಬಾರಿ ಹಾಗೂ ಎರಡು ಬಾರಿ ಕಾರಣ ಕೇಳಿ ನೋಟಿಸ್ ನೀಡಿ ಎಚ್ಚರಿಸಲಾಗಿದೆ. ಸಾರ್ವಜನಿಕರನ್ನು ಅಲೆದಾಡಿಸಬೇಡಿ ಎಂದು ತಾಕೀತು ಮಾಡಲಾಗಿತ್ತು. ಅನುಮತಿ ಇಲ್ಲದೆ ರಜೆಯ ಮೇಲೆ ತೆರಳಿದ್ದರು. </p>.<p>ನಗರಸಭೆಯ ಕಂದಾಯ ಶಾಖೆಯ ಅಧಿಕಾರಿಗಳ ವರದಿ ಹಾಗೂ ಪರಿಶೀಲನೆ ವೇಳೆ ಕಂಡುಬಂದ ಅಂಶಗಳನ್ನು ಪರಿಗಣಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಿಹರ: ಬಿ–ಖಾತಾ ನೀಡುವಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಇಲ್ಲಿನ ನಗರಸಭೆ ಬಿಲ್ ಕಲೆಕ್ಟರ್ (ಕರವಸೂಲಿಗಾರ) ಅಣ್ಣಪ್ಪ ಟಿ. ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.</p>.<p>ಫೆ.17ರಿಂದ ಆರಂಭವಾಗಿದ್ದ ಅಭಿಯಾನದಡಿ, ಈವರೆಗೆ ಅಣ್ಣಪ್ಪ 764 ಅರ್ಜಿಗಳನ್ನು ಸಾರ್ವಜನಿಕರಿಂದ ಸ್ವೀಕರಿಸಿದ್ದಾರೆ. ಈ ಪೈಕಿ 120 ಅರ್ಜಿಗಳನ್ನು ವಿಲೇವಾರಿ ಮಾಡಿದ್ದು, 644 ಅರ್ಜಿಗಳನ್ನು ಬಾಕಿ ಉಳಿಸಿಕೊಂಡಿರುವುದು ತನಿಖೆಯಿಂದ ಪತ್ತೆಯಾಗಿದೆ.</p>.<p>ಈ ಹಿಂದೆ ಅಣ್ಣಪ್ಪ ಅವರಿಗೆ ಗೂಗಲ್ ಮೀಟ್ನಲ್ಲಿ ಹಲವು ಬಾರಿ ಹಾಗೂ ಎರಡು ಬಾರಿ ಕಾರಣ ಕೇಳಿ ನೋಟಿಸ್ ನೀಡಿ ಎಚ್ಚರಿಸಲಾಗಿದೆ. ಸಾರ್ವಜನಿಕರನ್ನು ಅಲೆದಾಡಿಸಬೇಡಿ ಎಂದು ತಾಕೀತು ಮಾಡಲಾಗಿತ್ತು. ಅನುಮತಿ ಇಲ್ಲದೆ ರಜೆಯ ಮೇಲೆ ತೆರಳಿದ್ದರು. </p>.<p>ನಗರಸಭೆಯ ಕಂದಾಯ ಶಾಖೆಯ ಅಧಿಕಾರಿಗಳ ವರದಿ ಹಾಗೂ ಪರಿಶೀಲನೆ ವೇಳೆ ಕಂಡುಬಂದ ಅಂಶಗಳನ್ನು ಪರಿಗಣಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>