<p><strong>ಹರಿಹರ:</strong> ಮೊಬೈಲನ್ನು ಹಿತ, ಮಿತವಾಗಿ ಬಳಕೆ ಮಾಡುವುದರಿಂದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಾಧನೆ ಮಾಡಲು ಸಾಧ್ಯವಿದೆ ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಭಾಷಾ ಸಹಾಯಕ ಪ್ರಾಧ್ಯಾಪಕಿ ಗೌರಮ್ಮ ಎಸ್.ಎಂ. ಹೇಳಿದರು.</p>.<p>ನಗರದ ಗಿರಿಯಮ್ಮ ಕಾಂತಪ್ಪ ಶ್ರೇಷ್ಠಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗ್ರಂಥಾಲಯ ಸಪ್ತಾಹದ ಅಂಗವಾಗಿ ಶನಿವಾರ ನಡೆದ ‘ಮೊಬೈಲ್ ಬಿಡಿ, ಪುಸ್ತಕ ಹಿಡಿ’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.</p>.<p>‘ಬದುಕು ಸುಲಭಗೊಳಿಸುವ ಶಕ್ತಿ ಮೊಬೈಲ್ಗಿದೆ. ಅನಿಯಮಿತ ಬಳಕೆ ಗೀಳಿನಿಂದ ಸುವರ್ಣವಾದ ಸಮಯ ವ್ಯರ್ಥವಾಗಲಿದೆ. ಮಾನಸಿಕ ಕ್ಷೋಭೆ, ಆರೋಗ್ಯ ಸಮಸ್ಯೆ ಉಂಟುಮಾಡುವ ಅಪಾಯವೂ ಇದೆ. ಮೊಬೈಲ್ ನಮ್ಮನ್ನು ನಿಯಂತ್ರಿಸುವ ಬದಲು ನಾವು ಅದನ್ನು ನಿಯಂತ್ರಿಸುವಂತ ಆಗಬೇಕು’ ಎಂದು ಆಶಿಸಿದರು.</p>.<p>ಪ್ರಾಚಾರ್ಯ ಶ್ರೀನಿವಾಸ್ ಅಜೂರ್ ಅಧ್ಯಕ್ಷತೆ ವಹಿಸಿದ್ದರು. ಸಪ್ತಾಹದ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿನಿಯರಿಗೆ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಪವಿತ್ರಾ ಎಸ್.ಟಿ. ಪ್ರಮಾಣಪತ್ರ ವಿತರಿಸಿದರು. ಗ್ರಂಥಪಾಲಕಿ ವೀಣಾ ಎಚ್.ಎಂ., ಸಹಾಯಕ ಗ್ರಂಥಪಾಲಕ ಪಿ.ಆರ್.ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ:</strong> ಮೊಬೈಲನ್ನು ಹಿತ, ಮಿತವಾಗಿ ಬಳಕೆ ಮಾಡುವುದರಿಂದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಾಧನೆ ಮಾಡಲು ಸಾಧ್ಯವಿದೆ ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಭಾಷಾ ಸಹಾಯಕ ಪ್ರಾಧ್ಯಾಪಕಿ ಗೌರಮ್ಮ ಎಸ್.ಎಂ. ಹೇಳಿದರು.</p>.<p>ನಗರದ ಗಿರಿಯಮ್ಮ ಕಾಂತಪ್ಪ ಶ್ರೇಷ್ಠಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗ್ರಂಥಾಲಯ ಸಪ್ತಾಹದ ಅಂಗವಾಗಿ ಶನಿವಾರ ನಡೆದ ‘ಮೊಬೈಲ್ ಬಿಡಿ, ಪುಸ್ತಕ ಹಿಡಿ’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.</p>.<p>‘ಬದುಕು ಸುಲಭಗೊಳಿಸುವ ಶಕ್ತಿ ಮೊಬೈಲ್ಗಿದೆ. ಅನಿಯಮಿತ ಬಳಕೆ ಗೀಳಿನಿಂದ ಸುವರ್ಣವಾದ ಸಮಯ ವ್ಯರ್ಥವಾಗಲಿದೆ. ಮಾನಸಿಕ ಕ್ಷೋಭೆ, ಆರೋಗ್ಯ ಸಮಸ್ಯೆ ಉಂಟುಮಾಡುವ ಅಪಾಯವೂ ಇದೆ. ಮೊಬೈಲ್ ನಮ್ಮನ್ನು ನಿಯಂತ್ರಿಸುವ ಬದಲು ನಾವು ಅದನ್ನು ನಿಯಂತ್ರಿಸುವಂತ ಆಗಬೇಕು’ ಎಂದು ಆಶಿಸಿದರು.</p>.<p>ಪ್ರಾಚಾರ್ಯ ಶ್ರೀನಿವಾಸ್ ಅಜೂರ್ ಅಧ್ಯಕ್ಷತೆ ವಹಿಸಿದ್ದರು. ಸಪ್ತಾಹದ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿನಿಯರಿಗೆ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಪವಿತ್ರಾ ಎಸ್.ಟಿ. ಪ್ರಮಾಣಪತ್ರ ವಿತರಿಸಿದರು. ಗ್ರಂಥಪಾಲಕಿ ವೀಣಾ ಎಚ್.ಎಂ., ಸಹಾಯಕ ಗ್ರಂಥಪಾಲಕ ಪಿ.ಆರ್.ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>