<p><strong>ಹರಿಹರ:</strong> ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ, ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠಲರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ತಾಲ್ಲೂಕಿನ ಕೊಂಡಜ್ಜಿ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.</p>.<p>ರಸ್ತೆ, ಚರಂಡಿ, ಕಿರು ನೀರು ಸರಬರಾಜು ಕೇಂದ್ರ ಸೇರಿದಂತೆ ಯಾವುದೇ ಕಾಮಗಾರಿಗಳಿದ್ದರೂ ಅರ್ಧಕ್ಕೆ ನಿಲ್ಲಿಸುವುದು, ವಿಳಂಬ ಮಾಡುವುದನ್ನು ಸಹಿಸುವುದಿಲ್ಲ ಎಂದರು. </p>.<p>ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿ, ಗ್ರಂಥಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ, ಪೊಲೀಸ್ ಪಬ್ಲಿಕ್ ಶಾಲೆ, ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ತರಬೇತಿ ಕೇಂದ್ರ, ಆಂಜನೇಯ ಸಮುದಾಯ ಭವನ ಹಾಗೂ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಕುಮಾರ್, ನಾರಪ್ಪ, ತಾಲ್ಲೂಕು ಪಂಚಾಯಿತಿ ಪ್ರಭಾರ ಸಹಾಯಕ ನಿರ್ದೇಶಕ ಸುನೀಲ್ ಕುಮಾರ್, ಪಿಡಿಒ ರುಬಿಯಾ ನಾಜ್ ಎಚ್.ಆರ್., ನರೇಗಾ ಎಂಜಿನಿಯರ್ ರಂಗನಾಥ್, ಶ್ರೀನಿವಾಸ್ ಬಾಬು, ಗ್ರಾಮದ ಮುಖಂಡರಾದ ಗೌಡರ ಪ್ರಸನ್ನ, ದೇವರಾಜ್ ತೋಟಿಗರ, ಮುದೇಗೌಡರ ಪರಮೇಶ್ವರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ:</strong> ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ, ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠಲರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ತಾಲ್ಲೂಕಿನ ಕೊಂಡಜ್ಜಿ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.</p>.<p>ರಸ್ತೆ, ಚರಂಡಿ, ಕಿರು ನೀರು ಸರಬರಾಜು ಕೇಂದ್ರ ಸೇರಿದಂತೆ ಯಾವುದೇ ಕಾಮಗಾರಿಗಳಿದ್ದರೂ ಅರ್ಧಕ್ಕೆ ನಿಲ್ಲಿಸುವುದು, ವಿಳಂಬ ಮಾಡುವುದನ್ನು ಸಹಿಸುವುದಿಲ್ಲ ಎಂದರು. </p>.<p>ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿ, ಗ್ರಂಥಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ, ಪೊಲೀಸ್ ಪಬ್ಲಿಕ್ ಶಾಲೆ, ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ತರಬೇತಿ ಕೇಂದ್ರ, ಆಂಜನೇಯ ಸಮುದಾಯ ಭವನ ಹಾಗೂ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಕುಮಾರ್, ನಾರಪ್ಪ, ತಾಲ್ಲೂಕು ಪಂಚಾಯಿತಿ ಪ್ರಭಾರ ಸಹಾಯಕ ನಿರ್ದೇಶಕ ಸುನೀಲ್ ಕುಮಾರ್, ಪಿಡಿಒ ರುಬಿಯಾ ನಾಜ್ ಎಚ್.ಆರ್., ನರೇಗಾ ಎಂಜಿನಿಯರ್ ರಂಗನಾಥ್, ಶ್ರೀನಿವಾಸ್ ಬಾಬು, ಗ್ರಾಮದ ಮುಖಂಡರಾದ ಗೌಡರ ಪ್ರಸನ್ನ, ದೇವರಾಜ್ ತೋಟಿಗರ, ಮುದೇಗೌಡರ ಪರಮೇಶ್ವರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>