<p>ಹರಿಹರ: ನಗರದ ಹರಪನಹಳ್ಳಿ ಹೆದ್ದಾರಿಯ ರೈಲ್ವೆ ಕೆಳ ಸೇತುವೆಯ ರಸ್ತೆ ದುರಸ್ತಿಗೆ ಆಗ್ರಹಿಸಿ ಆಲ್ ಇಂಡಿಯಾ ಬಹುಜನ ಸಮಾಜವಾದಿ ಪಾರ್ಟಿ ಹಾಗೂ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಸೋಮವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.</p>.<p>‘ನಗರದ ಜನತೆ ಪ್ರತಿ ಮಳೆಗಾಲದಲ್ಲಿ ಸಂಕಷ್ಟ ಅನುಭವಿಸುವಂತಾಗಿದೆ. 10 ನಿಮಿಷ ಮಳೆ ಬಂದರೂ 2 ಗಂಟೆ ವಾಹನ ಸಂಚಾರ ಸ್ಥಗಿತವಾಗುತ್ತದೆ’ ಎಂದು ಬಿಎಸ್ಪಿ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಹನುಮಂತಪ್ಪ ದೂರಿದರು.</p>.<p>ನಗರಸಭೆ ಎಇಇ ವಿನಯ್ ಕುಮಾರ್, ಲೋಕೋಪಯೋಗಿ ಇಲಾಖೆ ಎಇಇ ಮರಿಸ್ವಾಮಿ ಸ್ಥಳಕ್ಕೆ ಆಗಮಿಸಿದ್ದರು. ಪ್ರತಿಭಟನಕಾರರು ಮೇ 25ರ ಗಡುವು ನೀಡಿದರು.</p>.<p>ಐರಣಿ ಹನುಮಂತಪ್ಪ, ಆರ್. ಶ್ರೀನಿವಾಸ್, ಜಬಿಉಲ್ಲಾ, ಆನಂದ್ ಕುಮಾರ್ ಎಂ.ಆರ್., ಅನಿಲ್, ರವಿ, ಸಂತೋಷ್, ಅವಿನಾಶ್, ಬೆನಕೇಶ, ಮಂಜುನಾಥ್ ನಡುವಲಕೇರಿ, ಸಂತೋಷ್ ನೋಟದವರ್, ಸೈಯದ್ ಸಲೀಂ ನಾಲಬಂದ್, ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-43-1331172931</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಿಹರ: ನಗರದ ಹರಪನಹಳ್ಳಿ ಹೆದ್ದಾರಿಯ ರೈಲ್ವೆ ಕೆಳ ಸೇತುವೆಯ ರಸ್ತೆ ದುರಸ್ತಿಗೆ ಆಗ್ರಹಿಸಿ ಆಲ್ ಇಂಡಿಯಾ ಬಹುಜನ ಸಮಾಜವಾದಿ ಪಾರ್ಟಿ ಹಾಗೂ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಸೋಮವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.</p>.<p>‘ನಗರದ ಜನತೆ ಪ್ರತಿ ಮಳೆಗಾಲದಲ್ಲಿ ಸಂಕಷ್ಟ ಅನುಭವಿಸುವಂತಾಗಿದೆ. 10 ನಿಮಿಷ ಮಳೆ ಬಂದರೂ 2 ಗಂಟೆ ವಾಹನ ಸಂಚಾರ ಸ್ಥಗಿತವಾಗುತ್ತದೆ’ ಎಂದು ಬಿಎಸ್ಪಿ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಹನುಮಂತಪ್ಪ ದೂರಿದರು.</p>.<p>ನಗರಸಭೆ ಎಇಇ ವಿನಯ್ ಕುಮಾರ್, ಲೋಕೋಪಯೋಗಿ ಇಲಾಖೆ ಎಇಇ ಮರಿಸ್ವಾಮಿ ಸ್ಥಳಕ್ಕೆ ಆಗಮಿಸಿದ್ದರು. ಪ್ರತಿಭಟನಕಾರರು ಮೇ 25ರ ಗಡುವು ನೀಡಿದರು.</p>.<p>ಐರಣಿ ಹನುಮಂತಪ್ಪ, ಆರ್. ಶ್ರೀನಿವಾಸ್, ಜಬಿಉಲ್ಲಾ, ಆನಂದ್ ಕುಮಾರ್ ಎಂ.ಆರ್., ಅನಿಲ್, ರವಿ, ಸಂತೋಷ್, ಅವಿನಾಶ್, ಬೆನಕೇಶ, ಮಂಜುನಾಥ್ ನಡುವಲಕೇರಿ, ಸಂತೋಷ್ ನೋಟದವರ್, ಸೈಯದ್ ಸಲೀಂ ನಾಲಬಂದ್, ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-43-1331172931</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>