<p>ಹರಿಹರ: ನಗರದಿಂದ ದಾವಣಗೆರೆಗೆ ಹೋಗುವ ಮಾರ್ಗದಲ್ಲಿ ಮೇಲ್ಸೇತುವೆ ಬಳಿಯ ಜೋಡಿ ರಸ್ತೆ (ಹಳೆ ಪಿ.ಬಿ.ರಸ್ತೆ) ಬಲಭಾಗದ ಸಾಲು ಮರಗಳು ಬೆಂಕಿಗೆ ಆಹುತಿಯಾದ ಸ್ಥಳಕ್ಕೆ ಮಂಗಳವಾರ ಸಾಮಾಜಿಕ ಅರಣ್ಯ ಇಲಾಖೆ ಆರ್ಎಫ್ಓ ಅಮೃತಾ ಟಿ.ಆರ್. ಭೇಟಿ ನೀಡಿ ಪರಿಶೀಲಿಸಿದರು.</p>.<p>ಈ ರಸ್ತೆಯಲ್ಲಿ ಹಗಲು–ರಾತ್ರಿ ಜನ ಸಂಚಾರ ಇರುತ್ತದೆ. ಮರಗಳಿಗೆ ಬೆಂಕಿ ಹತ್ತಿರುವುದರ ಬಗ್ಗೆ ತಕ್ಷಣವೇ ಯಾರಾದರೂ ಅಗ್ನಿಶಾಮಕ ದಳದವರಿಗಾಗಲಿ, ಅರಣ್ಯ ಇಲಾಖೆಗಾಗಲಿ ಮಾಹಿತಿ ನೀಡಿದ್ದರೆ ಮರಗಳನ್ನು ಉಳಿಸಿಕೊಳ್ಳಬಹುದಾಗಿತ್ತು ಎಂದರು.</p>.<p>ಸ್ಥಳ ಪರಿಶೀಲನೆ ಮಾಡಿದಾಗ ಯಾರೋ ದುಷ್ಕರ್ಮಿಗಳು ಉದ್ದೇಶ ಪೂರ್ವಕವಾಗಿ ಬೆಂಕಿ ಹಚ್ಚಿದಂತೆ ಕಾಣುತ್ತಿದೆ. ಪ್ರಾದೇಶಿಕ ಅರಣ್ಯ ಇಲಾಖೆಯವರಿಗೆ ಒಂದು ವರದಿಯನ್ನು ಕಳಿಸಿ ದೂರು ದಾಖಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲು ಕೋರಲಾಗುವುದು ಎಂದು ಮಾಹಿತಿ ನೀಡಿದರು.</p>.<p>ಈ ಜೋಡಿ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿರುವ ಜಾಲಿ ಗಿಡಗಳನ್ನು ತೆರವು ಮಾಡಲು ಲೋಕೋಪಯೋಗಿ ಇಲಾಖೆಯವ ರಿಗೂ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-43-2053539010</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಿಹರ: ನಗರದಿಂದ ದಾವಣಗೆರೆಗೆ ಹೋಗುವ ಮಾರ್ಗದಲ್ಲಿ ಮೇಲ್ಸೇತುವೆ ಬಳಿಯ ಜೋಡಿ ರಸ್ತೆ (ಹಳೆ ಪಿ.ಬಿ.ರಸ್ತೆ) ಬಲಭಾಗದ ಸಾಲು ಮರಗಳು ಬೆಂಕಿಗೆ ಆಹುತಿಯಾದ ಸ್ಥಳಕ್ಕೆ ಮಂಗಳವಾರ ಸಾಮಾಜಿಕ ಅರಣ್ಯ ಇಲಾಖೆ ಆರ್ಎಫ್ಓ ಅಮೃತಾ ಟಿ.ಆರ್. ಭೇಟಿ ನೀಡಿ ಪರಿಶೀಲಿಸಿದರು.</p>.<p>ಈ ರಸ್ತೆಯಲ್ಲಿ ಹಗಲು–ರಾತ್ರಿ ಜನ ಸಂಚಾರ ಇರುತ್ತದೆ. ಮರಗಳಿಗೆ ಬೆಂಕಿ ಹತ್ತಿರುವುದರ ಬಗ್ಗೆ ತಕ್ಷಣವೇ ಯಾರಾದರೂ ಅಗ್ನಿಶಾಮಕ ದಳದವರಿಗಾಗಲಿ, ಅರಣ್ಯ ಇಲಾಖೆಗಾಗಲಿ ಮಾಹಿತಿ ನೀಡಿದ್ದರೆ ಮರಗಳನ್ನು ಉಳಿಸಿಕೊಳ್ಳಬಹುದಾಗಿತ್ತು ಎಂದರು.</p>.<p>ಸ್ಥಳ ಪರಿಶೀಲನೆ ಮಾಡಿದಾಗ ಯಾರೋ ದುಷ್ಕರ್ಮಿಗಳು ಉದ್ದೇಶ ಪೂರ್ವಕವಾಗಿ ಬೆಂಕಿ ಹಚ್ಚಿದಂತೆ ಕಾಣುತ್ತಿದೆ. ಪ್ರಾದೇಶಿಕ ಅರಣ್ಯ ಇಲಾಖೆಯವರಿಗೆ ಒಂದು ವರದಿಯನ್ನು ಕಳಿಸಿ ದೂರು ದಾಖಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲು ಕೋರಲಾಗುವುದು ಎಂದು ಮಾಹಿತಿ ನೀಡಿದರು.</p>.<p>ಈ ಜೋಡಿ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿರುವ ಜಾಲಿ ಗಿಡಗಳನ್ನು ತೆರವು ಮಾಡಲು ಲೋಕೋಪಯೋಗಿ ಇಲಾಖೆಯವ ರಿಗೂ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-43-2053539010</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>