ಏ.19ರ ನಂತರ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಇದೆ. ನಗರಸಭೆ, ಗ್ರಾಮ ಪಂಚಾಯಿತಿ, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ, ಕಂದಾಯ, ಪಂಚಾಯತ್ ರಾಜ್ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಲೋಕಸಭಾ ಚುನಾವಣಾ ಕಾರ್ಯದಲ್ಲಿ ತಲ್ಲೀನರಾಗಿದ್ದಾರೆ. ನೀರಿನ ಸಮಸ್ಯೆಗೆ ಸ್ಪಂದಿಸುವವರು ಯಾರು ಎಂಬ ಪ್ರಶ್ನೆ ಸಾರ್ವಜನಿಕರದ್ದು.