<p><strong>ಹರಿಹರ:</strong> ತಾಲ್ಲೂಕಿನ ಮಿಟ್ಲಕಟ್ಟೆ ಗ್ರಾಮದ ಸಮೀಪ ಶುಕ್ರವಾರ ಸಂಭವಿಸಿದ ಬ್ಯಾಟರಿ ಚಾಲಿತ ಸ್ಕೂಟರ್ (ಇವಿ) ಅಪಘಾತದಲ್ಲಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.</p>.<p>ಮಲೇಬೆನ್ನೂರು ನಿವಾಸಿ ವಿಶ್ವನಾಥ ಬಿ.ಪಿ. ಅವರ ಪುತ್ರಿ, ದಾವಣಗೆರೆಯ ಯುಬಿಡಿಟಿ ಕಾಲೇಜಿನ ಎಂ.ಬಿ.ಎ. ವಿದ್ಯಾರ್ಥಿನಿ ಬಿ.ವಿ.ರಂಜಿತಾ (22) ಮೃತರು.</p>.<p>ವಿವರ: ಬೆಳಿಗ್ಗೆ 8ಕ್ಕೆ ಕಾಲೇಜಿಗೆ ತೆರಳುವಾಗ ಅವರ ಸ್ಕೂಟರ್ ಮಿಟ್ಲಕಟ್ಟೆ ಸಮೀಪದ ಶಂಕರ ಲೀಲಾ ಗ್ಯಾಸ್ ಏಜೆನ್ಸಿ ಮುಂಭಾಗ ಸ್ಕಿಡ್ ಆಗಿದೆ. ಕೆಳಕ್ಕೆ ಬಿದ್ದ ರಂಜಿತಾ ಅವರ ತಲೆ, ಗದ್ದ, ಮೂಗು ಹಾಗೂ ಇತರೆ ಕಡೆಗಳಲ್ಲಿ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾಗಿದೆ.</p>.<p>ಸ್ಥಳದಲ್ಲಿದ್ದವರು ಕೂಡಲೇ ಅವರನ್ನು ಆಟೊದಲ್ಲಿ ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಪರೀಕ್ಷಿಸಿದ ವೈದ್ಯರು, ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ತಿಳಿಸಿದರು.</p>.<p>ಮಲೇಬೆನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-43-1944213968</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ:</strong> ತಾಲ್ಲೂಕಿನ ಮಿಟ್ಲಕಟ್ಟೆ ಗ್ರಾಮದ ಸಮೀಪ ಶುಕ್ರವಾರ ಸಂಭವಿಸಿದ ಬ್ಯಾಟರಿ ಚಾಲಿತ ಸ್ಕೂಟರ್ (ಇವಿ) ಅಪಘಾತದಲ್ಲಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.</p>.<p>ಮಲೇಬೆನ್ನೂರು ನಿವಾಸಿ ವಿಶ್ವನಾಥ ಬಿ.ಪಿ. ಅವರ ಪುತ್ರಿ, ದಾವಣಗೆರೆಯ ಯುಬಿಡಿಟಿ ಕಾಲೇಜಿನ ಎಂ.ಬಿ.ಎ. ವಿದ್ಯಾರ್ಥಿನಿ ಬಿ.ವಿ.ರಂಜಿತಾ (22) ಮೃತರು.</p>.<p>ವಿವರ: ಬೆಳಿಗ್ಗೆ 8ಕ್ಕೆ ಕಾಲೇಜಿಗೆ ತೆರಳುವಾಗ ಅವರ ಸ್ಕೂಟರ್ ಮಿಟ್ಲಕಟ್ಟೆ ಸಮೀಪದ ಶಂಕರ ಲೀಲಾ ಗ್ಯಾಸ್ ಏಜೆನ್ಸಿ ಮುಂಭಾಗ ಸ್ಕಿಡ್ ಆಗಿದೆ. ಕೆಳಕ್ಕೆ ಬಿದ್ದ ರಂಜಿತಾ ಅವರ ತಲೆ, ಗದ್ದ, ಮೂಗು ಹಾಗೂ ಇತರೆ ಕಡೆಗಳಲ್ಲಿ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾಗಿದೆ.</p>.<p>ಸ್ಥಳದಲ್ಲಿದ್ದವರು ಕೂಡಲೇ ಅವರನ್ನು ಆಟೊದಲ್ಲಿ ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಪರೀಕ್ಷಿಸಿದ ವೈದ್ಯರು, ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ತಿಳಿಸಿದರು.</p>.<p>ಮಲೇಬೆನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-43-1944213968</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>