<p><strong>ಹರಿಹರ</strong>: ‘ಒದಗಿಸಬೇಕಾದ ಸೌಲಭ್ಯಗಳು ಸಾಗರದಷ್ಟಿವೆ. ಆದರೆ, ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ಹೀಗಾಗಿ ಇರುವುದರಲ್ಲೇ ನೆಮ್ಮದಿ ಕಾಣಬೇಕಿದೆ’ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಾರ್ವಜನಿಕರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ವಿವಿಧ ವಾರ್ಡ್ಗಳಲ್ಲಿ ಮೂಲಸೌಕರ್ಯ, ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಸಾರ್ವಜನಿಕರು ಒತ್ತಾಯಿಸಿದಾಗ ಮೇಲಿನಂತೆ ಪ್ರತಿಕ್ರಿಯಿಸಿದರು.</p>.<p>‘ನಗರದ ಪಟೇಲ್ ಬಡಾವಣೆಯಲ್ಲಿ ಕನಿಷ್ಠ ಮೂಲಸೌಕರ್ಯವಿಲ್ಲದೆ ಹಾವು, ಚೇಳುಗಳ ಹಾವಳಿ ಹೆಚ್ಚಿದೆ ಹಾಗೂ ಡೆಂಗಿ ಹರಡುತ್ತಿದೆ. ಕಂದಾಯ ಕಟ್ಟಿಸಿಕೊಂಡರೂ ಅಧಿಕಾರಿಗಳು ಇದೊಂದು ಅನಧಿಕೃತ ಬಡಾವಣೆ ಎನ್ನುತ್ತಾರೆ’ ಎಂದು ನಿವಾಸಿ ಪದ್ಮಾವತಿ ಮತ್ತಿತರರು ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಮಂಗಳವಾರವೇ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ವರದಿ ನೀಡಿ ಎಂದು ಪೌರಾಯುಕ್ತೆ ಹಾಗೂ ಎಇಇಗೆ ಸೂಚಿಸಿದರು, ತಾವೂ ಸ್ಥಳಕ್ಕೆ ಭೇಟಿ ಪರಿಶೀಲಿಸುವುದಾಗಿ’ ಶಾಸಕರು ತಿಳಿಸಿದರು.</p>.<p>ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ಉದ್ಯಾನವೇ ಇಲ್ಲದಿದ್ದರೂ ಅದರ ಅಭಿವೃದ್ಧಿಗೆಂದು ಧೂಡಾದಿಂದ ₹ 25 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ. ಹಾಗೂ ಅದೇ ಸಂಸ್ಥೆ ರಾಜಕಾಲುವೆ ಒತ್ತುವರಿ ಮಾಡಿದೆ ಎಂದು ಡಿಎಸ್ಎಸ್ ಸಂಚಾಲಕ ಪಿ.ಜೆ.ಮಹಾಂತೇಶ್ ಆರೋಪಿಸಿದರು. ಈ ಬಗ್ಗೆ ಪರಿಶೀಲಿಸಲು ಪೌರಾಯುಕ್ತರಿಗೆ ಹಾಗೂ ಒತ್ತುವರಿ ಸರ್ವೆ ಮಾಡಿಸಲು ತಹಶೀಲ್ದಾರ್ಗೆ ಸೂಚಿಸಿದರು.</p>.<p>ಕೋಟ್ಯಂತರ ರೂಪಾಯಿ ವೆಚ್ಚದ ಈಜುಕೊಳ ಬಂದ್ ಆಗಿರುವ ಬಗ್ಗೆ ಕೇಳಿದಾಗ, ಅಗತ್ಯ ಕ್ರಮ ಕೈಗೊಳ್ಳಲು ಯುವಜನ ಸೇವಾ ಇಲಾಖೆ ಅಧಿಕಾರಿಗಳಿಗೆ ತಿಳಿಸುವುದಾಗಿ ಹೇಳಿದರು.</p>.<p>ಸಾರ್ವಜನಿಕರ ಮನವಿಯ ಮೇರೆಗೆ ನಗರದ ಮಧ್ಯಭಾಗದಲ್ಲಿ ನಡೆಯುವ ವಾರದ ಸಂತೆಯನ್ನು ಮುಂದಿನ ಮಂಗಳವಾರದಿಂದ ಕಡ್ಡಾಯವಾಗಿ ಎಪಿಎಂಸಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಫುಟ್ಪಾತ್ಗಳನ್ನು ಆಕ್ರಮಿಸಿರುವ ಬೀದಿಬದಿ ವ್ಯಾಪಾರಿಗಳಿಗೆ ತೊಂದರೆಯಾಗದಂತೆ ಪರ್ಯಾಯ ಜಾಗ ಗುರುತಿಸಿ ಫುಡ್ ಕೋರ್ಟ್ ಮಾದರಿಯಲ್ಲಿ ನಿರ್ಮಾಣ ಮಾಡಿ ಅಲ್ಲಿಗೆ ಸ್ಥಳಾಂತರಿಸಲು ಸೂಚಿಸಿದರು.</p>.<p>ಹರಪನಹಳ್ಳಿ ರಸ್ತೆಯ ರೈಲ್ವೆ ಕೆಳಸೇತುವೆಯಲ್ಲಿ ಮಳೆನೀರು ನಿಲ್ಲುವ ಕುರಿತು ಸಭೆಯಲ್ಲೇ ರೈಲ್ವೆ ಎಇಇಗೆ ಕರೆ ಮಾಡಿ ಶಾಸಕರು ತರಾಟೆಗೆ ತೆಗೆದುಕೊಂಡರು. ಕಾಮಗಾರಿ ಅನುಮೋದನೆಯಾಗಿದ್ದು, ರಸ್ತೆ ಬಂದ್ ಮಾಡಬೇಕಿದೆ ಎಂದು ಎಇಇ ತಿಳಿಸಿದಾಗ,</p>.<p>‘ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಇಲಾಖೆ ನೆರವು ಪಡೆದುಕೊಂಡು ಶೀಘ್ರವೇ ಕಾಮಗಾರಿ ಆರಂಭಿಸುವಂತೆ’ ತಾಕೀತು ಮಾಡಿದರು.</p>.<p>ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ನಗರದ ವಿವಿಧ ಸಮಸ್ಯೆಗಳ ಬಗ್ಗೆ ಮಾತನಾಡಿ ಶಾಸಕರ ಗಮನ ಸೆಳೆದರು.</p>.<p>ಸಭೆಯಲ್ಲಿ ತಹಶೀಲ್ದಾರ್ ಜಿ. ಸಂತೋಷ್ ಕುಮಾರ್, ಪೌರಾಯುಕ್ತೆ ವಿ.ಈರಮ್ಮ, ತಾ.ಪಂ. ಇಒ ಬಸವರಾಜ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-43-470788174</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ</strong>: ‘ಒದಗಿಸಬೇಕಾದ ಸೌಲಭ್ಯಗಳು ಸಾಗರದಷ್ಟಿವೆ. ಆದರೆ, ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ಹೀಗಾಗಿ ಇರುವುದರಲ್ಲೇ ನೆಮ್ಮದಿ ಕಾಣಬೇಕಿದೆ’ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಾರ್ವಜನಿಕರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ವಿವಿಧ ವಾರ್ಡ್ಗಳಲ್ಲಿ ಮೂಲಸೌಕರ್ಯ, ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಸಾರ್ವಜನಿಕರು ಒತ್ತಾಯಿಸಿದಾಗ ಮೇಲಿನಂತೆ ಪ್ರತಿಕ್ರಿಯಿಸಿದರು.</p>.<p>‘ನಗರದ ಪಟೇಲ್ ಬಡಾವಣೆಯಲ್ಲಿ ಕನಿಷ್ಠ ಮೂಲಸೌಕರ್ಯವಿಲ್ಲದೆ ಹಾವು, ಚೇಳುಗಳ ಹಾವಳಿ ಹೆಚ್ಚಿದೆ ಹಾಗೂ ಡೆಂಗಿ ಹರಡುತ್ತಿದೆ. ಕಂದಾಯ ಕಟ್ಟಿಸಿಕೊಂಡರೂ ಅಧಿಕಾರಿಗಳು ಇದೊಂದು ಅನಧಿಕೃತ ಬಡಾವಣೆ ಎನ್ನುತ್ತಾರೆ’ ಎಂದು ನಿವಾಸಿ ಪದ್ಮಾವತಿ ಮತ್ತಿತರರು ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಮಂಗಳವಾರವೇ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ವರದಿ ನೀಡಿ ಎಂದು ಪೌರಾಯುಕ್ತೆ ಹಾಗೂ ಎಇಇಗೆ ಸೂಚಿಸಿದರು, ತಾವೂ ಸ್ಥಳಕ್ಕೆ ಭೇಟಿ ಪರಿಶೀಲಿಸುವುದಾಗಿ’ ಶಾಸಕರು ತಿಳಿಸಿದರು.</p>.<p>ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ಉದ್ಯಾನವೇ ಇಲ್ಲದಿದ್ದರೂ ಅದರ ಅಭಿವೃದ್ಧಿಗೆಂದು ಧೂಡಾದಿಂದ ₹ 25 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ. ಹಾಗೂ ಅದೇ ಸಂಸ್ಥೆ ರಾಜಕಾಲುವೆ ಒತ್ತುವರಿ ಮಾಡಿದೆ ಎಂದು ಡಿಎಸ್ಎಸ್ ಸಂಚಾಲಕ ಪಿ.ಜೆ.ಮಹಾಂತೇಶ್ ಆರೋಪಿಸಿದರು. ಈ ಬಗ್ಗೆ ಪರಿಶೀಲಿಸಲು ಪೌರಾಯುಕ್ತರಿಗೆ ಹಾಗೂ ಒತ್ತುವರಿ ಸರ್ವೆ ಮಾಡಿಸಲು ತಹಶೀಲ್ದಾರ್ಗೆ ಸೂಚಿಸಿದರು.</p>.<p>ಕೋಟ್ಯಂತರ ರೂಪಾಯಿ ವೆಚ್ಚದ ಈಜುಕೊಳ ಬಂದ್ ಆಗಿರುವ ಬಗ್ಗೆ ಕೇಳಿದಾಗ, ಅಗತ್ಯ ಕ್ರಮ ಕೈಗೊಳ್ಳಲು ಯುವಜನ ಸೇವಾ ಇಲಾಖೆ ಅಧಿಕಾರಿಗಳಿಗೆ ತಿಳಿಸುವುದಾಗಿ ಹೇಳಿದರು.</p>.<p>ಸಾರ್ವಜನಿಕರ ಮನವಿಯ ಮೇರೆಗೆ ನಗರದ ಮಧ್ಯಭಾಗದಲ್ಲಿ ನಡೆಯುವ ವಾರದ ಸಂತೆಯನ್ನು ಮುಂದಿನ ಮಂಗಳವಾರದಿಂದ ಕಡ್ಡಾಯವಾಗಿ ಎಪಿಎಂಸಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಫುಟ್ಪಾತ್ಗಳನ್ನು ಆಕ್ರಮಿಸಿರುವ ಬೀದಿಬದಿ ವ್ಯಾಪಾರಿಗಳಿಗೆ ತೊಂದರೆಯಾಗದಂತೆ ಪರ್ಯಾಯ ಜಾಗ ಗುರುತಿಸಿ ಫುಡ್ ಕೋರ್ಟ್ ಮಾದರಿಯಲ್ಲಿ ನಿರ್ಮಾಣ ಮಾಡಿ ಅಲ್ಲಿಗೆ ಸ್ಥಳಾಂತರಿಸಲು ಸೂಚಿಸಿದರು.</p>.<p>ಹರಪನಹಳ್ಳಿ ರಸ್ತೆಯ ರೈಲ್ವೆ ಕೆಳಸೇತುವೆಯಲ್ಲಿ ಮಳೆನೀರು ನಿಲ್ಲುವ ಕುರಿತು ಸಭೆಯಲ್ಲೇ ರೈಲ್ವೆ ಎಇಇಗೆ ಕರೆ ಮಾಡಿ ಶಾಸಕರು ತರಾಟೆಗೆ ತೆಗೆದುಕೊಂಡರು. ಕಾಮಗಾರಿ ಅನುಮೋದನೆಯಾಗಿದ್ದು, ರಸ್ತೆ ಬಂದ್ ಮಾಡಬೇಕಿದೆ ಎಂದು ಎಇಇ ತಿಳಿಸಿದಾಗ,</p>.<p>‘ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಇಲಾಖೆ ನೆರವು ಪಡೆದುಕೊಂಡು ಶೀಘ್ರವೇ ಕಾಮಗಾರಿ ಆರಂಭಿಸುವಂತೆ’ ತಾಕೀತು ಮಾಡಿದರು.</p>.<p>ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ನಗರದ ವಿವಿಧ ಸಮಸ್ಯೆಗಳ ಬಗ್ಗೆ ಮಾತನಾಡಿ ಶಾಸಕರ ಗಮನ ಸೆಳೆದರು.</p>.<p>ಸಭೆಯಲ್ಲಿ ತಹಶೀಲ್ದಾರ್ ಜಿ. ಸಂತೋಷ್ ಕುಮಾರ್, ಪೌರಾಯುಕ್ತೆ ವಿ.ಈರಮ್ಮ, ತಾ.ಪಂ. ಇಒ ಬಸವರಾಜ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-43-470788174</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>