<p><strong>ಕಡರನಾಯ್ಕನಹಳ್ಳಿ: </strong>ಎಂಟು ದಿನಗಳಿಂದ ಮುಸಿಯಾ ಹಾವಳಿಯಿದ್ದು, ಶಾಲೆಗಳಿಗೆ ಮಕ್ಕಳನ್ನು ಕೇಳುಹಿಸುವುದೇ ಕಷ್ಟವಾಗಿದೆ ಎಂದು ಕಡರನಾಯ್ಕನಹಳ್ಳಿ ಗ್ರಾಮದ ನಾಗಪ್ಪ ಬಡಾವಣೆಯ ನಿವಾಸಿಗಳು ದೂರಿದ್ದಾರೆ.</p>.<p>ಡಾ.ವೈ.ನಾಗಪ್ಪ ಬಡಾವಣೆಯಲ್ಲಿ ಪ್ರೌಢಶಾಲೆ, ಕಿರಿಯ ಪ್ರಾಥಮಿಕ ಶಾಲೆ, ಅಂಗನವಾಡಿ ಕೇಂದ್ರ ಇವೆ. ಬಡಾವಣೆಯಲ್ಲಿ ಮುಷಿಯಾ ಉಪಟಳ ಹೆಚ್ಚಾಗಿದೆ. ಮಕ್ಕಳನ್ನು ಬೆನ್ನತ್ತಿ ಹೋಗುತ್ತಿದ್ದು, ಭೀತಿ ಮೂಡಿಸಿದೆ. </p>.<p>ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬರಿಗೆ ಮುಸಿಯಾ ಕಚ್ಚಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅಂಗನವಾಡಿ ಮಕ್ಕಳು ಶನಿವಾರ ಮನೆಗೆ ತೆರಳುವಾಗಲೂ ದಾಳಿ ಮಾಡಿದೆ. ಸ್ಥಳಿಯರು ಅದನ್ನು ಓಡಿಸಿದ್ದಾರೆ. ಮಕ್ಕಳು ಶಾಲೆಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ.</p>.<p>ನಿವಾಸಿಗಳು ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಿದ್ದರೂ ಪ್ರಯೋಜನವಾಗಿಲ್ಲ. ಗ್ರಾಮ ಪಂಚಾಯಿತಿ ಮತ್ತು ಅರಣ್ಯ ಇಲಾಖೆ ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕು ಎಂದು ಗ್ರಾಮಸ್ಥರಾದ ಶರಣಪ್ಪ, ತಿಪ್ಪೇಶ್ ಹಾಗೂ ನಿವಾಸಿಗಳು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡರನಾಯ್ಕನಹಳ್ಳಿ: </strong>ಎಂಟು ದಿನಗಳಿಂದ ಮುಸಿಯಾ ಹಾವಳಿಯಿದ್ದು, ಶಾಲೆಗಳಿಗೆ ಮಕ್ಕಳನ್ನು ಕೇಳುಹಿಸುವುದೇ ಕಷ್ಟವಾಗಿದೆ ಎಂದು ಕಡರನಾಯ್ಕನಹಳ್ಳಿ ಗ್ರಾಮದ ನಾಗಪ್ಪ ಬಡಾವಣೆಯ ನಿವಾಸಿಗಳು ದೂರಿದ್ದಾರೆ.</p>.<p>ಡಾ.ವೈ.ನಾಗಪ್ಪ ಬಡಾವಣೆಯಲ್ಲಿ ಪ್ರೌಢಶಾಲೆ, ಕಿರಿಯ ಪ್ರಾಥಮಿಕ ಶಾಲೆ, ಅಂಗನವಾಡಿ ಕೇಂದ್ರ ಇವೆ. ಬಡಾವಣೆಯಲ್ಲಿ ಮುಷಿಯಾ ಉಪಟಳ ಹೆಚ್ಚಾಗಿದೆ. ಮಕ್ಕಳನ್ನು ಬೆನ್ನತ್ತಿ ಹೋಗುತ್ತಿದ್ದು, ಭೀತಿ ಮೂಡಿಸಿದೆ. </p>.<p>ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬರಿಗೆ ಮುಸಿಯಾ ಕಚ್ಚಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅಂಗನವಾಡಿ ಮಕ್ಕಳು ಶನಿವಾರ ಮನೆಗೆ ತೆರಳುವಾಗಲೂ ದಾಳಿ ಮಾಡಿದೆ. ಸ್ಥಳಿಯರು ಅದನ್ನು ಓಡಿಸಿದ್ದಾರೆ. ಮಕ್ಕಳು ಶಾಲೆಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ.</p>.<p>ನಿವಾಸಿಗಳು ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಿದ್ದರೂ ಪ್ರಯೋಜನವಾಗಿಲ್ಲ. ಗ್ರಾಮ ಪಂಚಾಯಿತಿ ಮತ್ತು ಅರಣ್ಯ ಇಲಾಖೆ ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕು ಎಂದು ಗ್ರಾಮಸ್ಥರಾದ ಶರಣಪ್ಪ, ತಿಪ್ಪೇಶ್ ಹಾಗೂ ನಿವಾಸಿಗಳು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>