<p><strong>ಕಡರನಾಯ್ಕನಹಳ್ಳಿ</strong>: ಹೋಬಳಿ ಕೇಂದ್ರ ಮಲೇಬೆನ್ನೂರಿಗೆ ನಿತ್ಯ ತೆರಳುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಸರ್ಕಾರಿ ಬಸ್ ಸೌಲಭ್ಯ ಆರಂಭಿಸಲಾಗಿದ್ದು, ಈ ಭಾಗದ ಜನರ ಬಹು ದಿನಗಳ ಬೇಡಿಕೆ ಸಾಕಾರಗೊಂಡಿದೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು. </p>.<p>ಉಕ್ಕಡಗಾತ್ರಿ–ಮಲೇಬೆನ್ನೂರು ಮಾರ್ಗದಲ್ಲಿ ಕೆಎಸ್ಆರ್ಟಿಸಿ ನೂತನ ಬಸ್ ಮಾರ್ಗಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಬಸ್ ಉಕ್ಕಡಗಾತ್ರಿಯಿಂದ ಹೊರಟು, ನಂದಿಗುಡಿ, ಕೊಕ್ಕನೂರು ಮಾರ್ಗವಾಗಿ ಮಲೇಬೆನ್ನೂರು ತಲುಪುತ್ತದೆ. ಇದೇ ಮಾರ್ಗದಲ್ಲಿ ವಾಪಸಾಗುತ್ತದೆ. ದಿನವೂ ನಾಲ್ಕು ಬಾರಿ ಓಡಾಡಲಿದೆ. </p>.<p>ಎಕ್ಕೆಗೊಂದಿ ಬಳಿ ಶಿವಮೊಗ್ಗ ಕಡೆಗೆ ಸಂಚರಿಸುವ ಬಸ್ಗಳ ನಿಲುಗಡೆಗೆ ವ್ಯವಸ್ಥೆ ಮಾಡುವಂತೆ ಸ್ಥಳೀಯರು ಬೇಡಿಕೆ ಇಟ್ಟಿದ್ದು, ಆದಷ್ಟು ಬೇಗ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಶಾಸಕರು ಭರವಸೆ ನೀಡಿದರು.</p>.<p>ನೂತನ ಬಸ್ ಓಡಾಟದಿಂದ ಜನಸಾಮಾನ್ಯರಿಗೆ ಅನುಕೂಲವಾಗಲಿದೆ ಎಂದು ಬಿಜೆಪಿ ಗ್ರಾಮಾಂತರ ಘಟಕದ ಅಧ್ಯಕ್ಷ ಎಂ.ಪಿ. ಲಿಂಗರಾಜ್ ತಿಳಿಸಿದರು.</p>.<p>ಗ್ರಾಮಸ್ಥರು ಬಸ್ಗೆ ಹೂವಿನ ಅಲಂಕಾರ ಮಾಡಿದ್ದರು. ಬಸ್ ಚಾಲಕ ಮತ್ತು ಕಂಡಕ್ಟರ್ಗೆ ಮಾಲಾರ್ಪಣೆ ಮಾಡಿ, ಸಿಹಿ ಹಂಚಿ ಸಂಭ್ರಮಿಸಿದರು.</p>.<p>ಗ್ರಾಮಾಂತರ ಘಟಕದ ಕಾರ್ಯದರ್ಶಿ ಹುಗ್ಗಿ ಮಹಾಂತೇಶ್, ಉಕ್ಕಡಗಾತ್ರಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚಂದ್ರಗೌಡ, ಸದಸ್ಯ ಕೆಂಚವೀರಯ್ಯ, ಕಡರನಾಯ್ಕನಹಳ್ಳಿ ಮಂಜಣ್ಣ, ಅರುಣ್, ಸಿದ್ದಯ್ಯ, ಹಾಲಸ್ವಾಮಿ ಮತ್ತು ಗ್ರಾಮಸ್ಥರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡರನಾಯ್ಕನಹಳ್ಳಿ</strong>: ಹೋಬಳಿ ಕೇಂದ್ರ ಮಲೇಬೆನ್ನೂರಿಗೆ ನಿತ್ಯ ತೆರಳುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಸರ್ಕಾರಿ ಬಸ್ ಸೌಲಭ್ಯ ಆರಂಭಿಸಲಾಗಿದ್ದು, ಈ ಭಾಗದ ಜನರ ಬಹು ದಿನಗಳ ಬೇಡಿಕೆ ಸಾಕಾರಗೊಂಡಿದೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು. </p>.<p>ಉಕ್ಕಡಗಾತ್ರಿ–ಮಲೇಬೆನ್ನೂರು ಮಾರ್ಗದಲ್ಲಿ ಕೆಎಸ್ಆರ್ಟಿಸಿ ನೂತನ ಬಸ್ ಮಾರ್ಗಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಬಸ್ ಉಕ್ಕಡಗಾತ್ರಿಯಿಂದ ಹೊರಟು, ನಂದಿಗುಡಿ, ಕೊಕ್ಕನೂರು ಮಾರ್ಗವಾಗಿ ಮಲೇಬೆನ್ನೂರು ತಲುಪುತ್ತದೆ. ಇದೇ ಮಾರ್ಗದಲ್ಲಿ ವಾಪಸಾಗುತ್ತದೆ. ದಿನವೂ ನಾಲ್ಕು ಬಾರಿ ಓಡಾಡಲಿದೆ. </p>.<p>ಎಕ್ಕೆಗೊಂದಿ ಬಳಿ ಶಿವಮೊಗ್ಗ ಕಡೆಗೆ ಸಂಚರಿಸುವ ಬಸ್ಗಳ ನಿಲುಗಡೆಗೆ ವ್ಯವಸ್ಥೆ ಮಾಡುವಂತೆ ಸ್ಥಳೀಯರು ಬೇಡಿಕೆ ಇಟ್ಟಿದ್ದು, ಆದಷ್ಟು ಬೇಗ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಶಾಸಕರು ಭರವಸೆ ನೀಡಿದರು.</p>.<p>ನೂತನ ಬಸ್ ಓಡಾಟದಿಂದ ಜನಸಾಮಾನ್ಯರಿಗೆ ಅನುಕೂಲವಾಗಲಿದೆ ಎಂದು ಬಿಜೆಪಿ ಗ್ರಾಮಾಂತರ ಘಟಕದ ಅಧ್ಯಕ್ಷ ಎಂ.ಪಿ. ಲಿಂಗರಾಜ್ ತಿಳಿಸಿದರು.</p>.<p>ಗ್ರಾಮಸ್ಥರು ಬಸ್ಗೆ ಹೂವಿನ ಅಲಂಕಾರ ಮಾಡಿದ್ದರು. ಬಸ್ ಚಾಲಕ ಮತ್ತು ಕಂಡಕ್ಟರ್ಗೆ ಮಾಲಾರ್ಪಣೆ ಮಾಡಿ, ಸಿಹಿ ಹಂಚಿ ಸಂಭ್ರಮಿಸಿದರು.</p>.<p>ಗ್ರಾಮಾಂತರ ಘಟಕದ ಕಾರ್ಯದರ್ಶಿ ಹುಗ್ಗಿ ಮಹಾಂತೇಶ್, ಉಕ್ಕಡಗಾತ್ರಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚಂದ್ರಗೌಡ, ಸದಸ್ಯ ಕೆಂಚವೀರಯ್ಯ, ಕಡರನಾಯ್ಕನಹಳ್ಳಿ ಮಂಜಣ್ಣ, ಅರುಣ್, ಸಿದ್ದಯ್ಯ, ಹಾಲಸ್ವಾಮಿ ಮತ್ತು ಗ್ರಾಮಸ್ಥರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>