<p>ಹರಿಹರ: ಲೋಕೋಪಯೋಗಿ ಇಲಾಖೆಯ ಅಂಗಸಂಸ್ಥೆಯಾದ ಕೆಶಿಪ್ನಿಂದ (ಕರ್ನಾಟಕ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಯೋಜನೆ) ನಗರದಲ್ಲಿ ಕೈಗೊಂಡ ಕಳಪೆ ಕಾಮಗಾರಿಯ ಪರಿಣಾಮವಾಗಿ ಕಾರೊಂದು ಕಂದಕಕ್ಕೆ ಸರಿದು ಇಬ್ಬರು ಗಾಯಗೊಂಡಿದ್ದಾರೆ.</p>.<p>ನಗರ ವ್ಯಾಪ್ತಿಯ ಹಳೆ ಪಿ.ಬಿ.ರಸ್ತೆ (ಬೀರೂರು-ಸಮ್ಮಸಗಿ ಹೆದ್ದಾರಿ) ಇಕ್ಕೆಲಗಳ ಫುಟ್ಪಾತ್ ಅಭಿವೃದ್ಧಿ ಕಾಮಗಾರಿಯನ್ನು 4 ತಿಂಗಳಿಂದ ನಡೆಸಲಾಗುತ್ತಿದ್ದು, ಅರ್ಧಂಬರ್ಧ ಕಾಮಗಾರಿ ನಡೆದಿದೆ.</p>.<p>ಗುರುವಾರ ಸಂಜೆ ಗಾಂಧಿ ಸರ್ಕಲ್ನಲ್ಲಿ ಕಾರೊಂದು ತಿರುವು ಪಡೆಯುವಾಗ ರಸ್ತೆ ಪಕ್ಕದ ಕಂದಕಕ್ಕೆ ಉರುಳಿದೆ. ಕಾರಿನ ಮುಂಭಾಗದ ಚಕ್ರಗಳು ಕಂದಕದಲ್ಲಿ ಇಳಿದಿವೆ. ಕಾರಿನ ಮುಂಭಾಗಕ್ಕೆ ಜಖಂ ಆಗಿದೆ. ಸ್ಥಳೀಯರ ಸಹಕಾರದಿಂದ ಕಾರನ್ನು ಹೊರಕ್ಕೆ ತೆಗೆಯಲಾಯಿತು.</p>.<p>‘ಕೆಶಿಪ್ ಎಂಜಿನಿಯರ್ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರ ವಾಹನಗಳಿಗೆ ಹಾನಿಯಾಗುತ್ತಿದೆ. ಈ ಕುರಿತು ಕೆಶಿಪ್ ಅಧಿಕಾರಿ ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಹಾಗೂ ಸಿವಿಲ್ ದಾವೆ ಹೂಡುತ್ತೇನೆ’ ಎಂದು ಕಾರಿನ ಮಾಲೀಕರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-43-1012955285</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಿಹರ: ಲೋಕೋಪಯೋಗಿ ಇಲಾಖೆಯ ಅಂಗಸಂಸ್ಥೆಯಾದ ಕೆಶಿಪ್ನಿಂದ (ಕರ್ನಾಟಕ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಯೋಜನೆ) ನಗರದಲ್ಲಿ ಕೈಗೊಂಡ ಕಳಪೆ ಕಾಮಗಾರಿಯ ಪರಿಣಾಮವಾಗಿ ಕಾರೊಂದು ಕಂದಕಕ್ಕೆ ಸರಿದು ಇಬ್ಬರು ಗಾಯಗೊಂಡಿದ್ದಾರೆ.</p>.<p>ನಗರ ವ್ಯಾಪ್ತಿಯ ಹಳೆ ಪಿ.ಬಿ.ರಸ್ತೆ (ಬೀರೂರು-ಸಮ್ಮಸಗಿ ಹೆದ್ದಾರಿ) ಇಕ್ಕೆಲಗಳ ಫುಟ್ಪಾತ್ ಅಭಿವೃದ್ಧಿ ಕಾಮಗಾರಿಯನ್ನು 4 ತಿಂಗಳಿಂದ ನಡೆಸಲಾಗುತ್ತಿದ್ದು, ಅರ್ಧಂಬರ್ಧ ಕಾಮಗಾರಿ ನಡೆದಿದೆ.</p>.<p>ಗುರುವಾರ ಸಂಜೆ ಗಾಂಧಿ ಸರ್ಕಲ್ನಲ್ಲಿ ಕಾರೊಂದು ತಿರುವು ಪಡೆಯುವಾಗ ರಸ್ತೆ ಪಕ್ಕದ ಕಂದಕಕ್ಕೆ ಉರುಳಿದೆ. ಕಾರಿನ ಮುಂಭಾಗದ ಚಕ್ರಗಳು ಕಂದಕದಲ್ಲಿ ಇಳಿದಿವೆ. ಕಾರಿನ ಮುಂಭಾಗಕ್ಕೆ ಜಖಂ ಆಗಿದೆ. ಸ್ಥಳೀಯರ ಸಹಕಾರದಿಂದ ಕಾರನ್ನು ಹೊರಕ್ಕೆ ತೆಗೆಯಲಾಯಿತು.</p>.<p>‘ಕೆಶಿಪ್ ಎಂಜಿನಿಯರ್ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರ ವಾಹನಗಳಿಗೆ ಹಾನಿಯಾಗುತ್ತಿದೆ. ಈ ಕುರಿತು ಕೆಶಿಪ್ ಅಧಿಕಾರಿ ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಹಾಗೂ ಸಿವಿಲ್ ದಾವೆ ಹೂಡುತ್ತೇನೆ’ ಎಂದು ಕಾರಿನ ಮಾಲೀಕರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-43-1012955285</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>