<p><strong>ಹರಿಹರ:</strong> ಭೂ ಮಾಪನಾ ಕಾರ್ಯ ನಡೆಯುವವರೆಗೆ ನಗರದ ಎಸ್.ಜೆ.ವಿ.ಪಿ. ಕಾಲೇಜಿನ ಹಿಂಭಾಗದಲ್ಲಿ ನಡೆಯುತ್ತಿರುವ ರಾಜಕಾಲುವೆಗೆ ಸಿಸಿ ಚರಂಡಿ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಲು ನಿರ್ಣಯಿಸಲಾಯಿತು.</p>.<p>ಸೋಮವಾರ ಇಲ್ಲಿನ ತಾಲ್ಲೂಕು ಕಚೇರಿಯಲ್ಲಿ ತಹಶೀಲ್ದಾರ್ ಸಂತೋಷ್ ಕುಮಾರ್ ಜಿ. ಅವರ ಸಮ್ಮುಖದಲ್ಲಿ ರಾಜ ಕಾಲುವೆ ಸಂರಕ್ಷಣಾ ಸಮಿತಿ ಪದಾಧಿಕಾರಿಗಳು ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳನ್ನೊಳಗೊಂಡ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.</p>.<p>‘ಈ ಕಾಲುವೆಯ ಒತ್ತುವರಿಯಿಂದಾಗಿಯೇ ಬೆಂಕಿನಗರ, ಕಾಳಿದಾಸನಗರ, ನೀಲಕಂಠನಗರ ಹಾಗೂ ಇತರೆ ಬಡಾವಣೆಗಳಲ್ಲಿ ಮಳೆಗಾಲದ ಪ್ರವಾಹದ ನೀರು ನುಗ್ಗಿ ನಿವಾಸಿಗಳು ಮೂರ್ನಾಲ್ಕು ವರ್ಷಗಳಿಂದ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುವ ದುಃಸ್ಥಿತಿ ನಿರ್ಮಾಣವಾಗಿದೆ’ ಎಂದು ರಾಜ ಕಾಲುವೆ ಸಂರಕ್ಷಣಾ ಸಮಿತಿ ಪದಾಧಿಕಾರಿಗಳು ಅಳಲು ತೋಡಿಕೊಂಡರು.</p>.<p>‘ಈಗ ಸಿಸಿ ಚರಂಡಿ ನಿರ್ಮಿಸುವ ಮೂಲಕ ಕಾಲುವೆಯನ್ನೇ ಅಧಿಕೃತವಾಗಿ ಕಿರಿದಾಗಿಸುವ ಪ್ರಯತ್ನ ನಡೆಯುತ್ತಿದೆ. ಇದಕ್ಕಾಗಿ ಸಣ್ಣ ನೀರಾವರಿ ಇಲಾಖೆಯ ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ. ಈ ಕಾಮಗಾರಿಯಿಂದಾಗಿ ನಗರದ ಇನ್ನಷ್ಟು ಬಡಾವಣೆಗಳಿಗೆ ಮಳೆಗಾಲದಲ್ಲಿ ನೀರು ನುಗ್ಗಿ ನಿವಾಸಿಗಳನ್ನು ಸಂತ್ರಸ್ಥರನ್ನಾಗಿಸುತ್ತದೆ’ ಎಂದು ದೂರಿದರು.</p>.<p>‘ಯಾವುದೇ ಕಾರಣಕ್ಕೂ ಈಗ ನಡೆಯುತ್ತಿರುವ ಕಾಮಗಾರಿಯನ್ನು ಮುಂದುವರಿಸಬಾರದು. ಶತಮಾನಗಳಿಂದ ಪ್ರಕೃತಿದತ್ತವಾಗಿ ಮಳೆ ನೀರು ಹಾಗೂ ಜಮೀನುಗಳ ಬಸಿ ನೀರು ಹರಿದು ಹೋಗುವ ಮಾರ್ಗಕ್ಕೆ ಯಾವುದೇ ಅಡ್ಡಿ, ಆತಂಕ ಸೃಷ್ಟಿಸಬಾರದು’ ಎಂದರು.</p>.<p>‘ರಾಜ ಕಾಲುವೆ ಹರಿದು ಹೋಗುವ ಮಾರ್ಗವನ್ನು ಭೂ ಮಾಪಕರಿಂದ ಮಾರ್ಚ್ 18ರಂದು ಅಳತೆ ಮಾಡಿಸೋಣ. ಅಲ್ಲಿವರೆಗೆ ಕಾಮಗಾರಿ ಸ್ಥಗಿತಗೊಳಿಸಿ. ಅಳತೆ ಮಾಡುವಾಗ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು, ರಾಜ ಕಾಲುವೆ ಸಂರಕ್ಷಣಾ ಸಮಿತಿ ಪದಾಧಿಕಾರಿಗಳು ಹಾಜರಿರಬೇಕು’ ಎಂದು ತಹಶೀಲ್ದಾರ್ ಸೂಚಿಸಿದರು.</p>.<p>ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್, ಟಿ.ಜೆ.ಮುರುಗೇಶಪ್ಪ, ಎಂ.ಎಸ್.ಬಾಬುಲಾಲ್, ಐರಣಿ ಹನುಮಂತಪ್ಪ, ಬಿ.ಮಗ್ದುಮ್, ರಮೇಶ್ ಮಾನೆ, ಪ್ರೀತಮ್ ಬಾಬು, ಜಫ್ರುಲ್ಲಾ ಕನವಳ್ಳಿ, ಇಮ್ತಿಯಾಜ್ ಜಲಾಲ್, ನೂರುಲ್ಲಾ ಪಟೇಲ್, ಅಣ್ಣಪ್ಪ ಅಜ್ಜೇರ್, ನಜೀರ್ ಹುಸೇನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260317-43-380305942</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ:</strong> ಭೂ ಮಾಪನಾ ಕಾರ್ಯ ನಡೆಯುವವರೆಗೆ ನಗರದ ಎಸ್.ಜೆ.ವಿ.ಪಿ. ಕಾಲೇಜಿನ ಹಿಂಭಾಗದಲ್ಲಿ ನಡೆಯುತ್ತಿರುವ ರಾಜಕಾಲುವೆಗೆ ಸಿಸಿ ಚರಂಡಿ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಲು ನಿರ್ಣಯಿಸಲಾಯಿತು.</p>.<p>ಸೋಮವಾರ ಇಲ್ಲಿನ ತಾಲ್ಲೂಕು ಕಚೇರಿಯಲ್ಲಿ ತಹಶೀಲ್ದಾರ್ ಸಂತೋಷ್ ಕುಮಾರ್ ಜಿ. ಅವರ ಸಮ್ಮುಖದಲ್ಲಿ ರಾಜ ಕಾಲುವೆ ಸಂರಕ್ಷಣಾ ಸಮಿತಿ ಪದಾಧಿಕಾರಿಗಳು ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳನ್ನೊಳಗೊಂಡ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.</p>.<p>‘ಈ ಕಾಲುವೆಯ ಒತ್ತುವರಿಯಿಂದಾಗಿಯೇ ಬೆಂಕಿನಗರ, ಕಾಳಿದಾಸನಗರ, ನೀಲಕಂಠನಗರ ಹಾಗೂ ಇತರೆ ಬಡಾವಣೆಗಳಲ್ಲಿ ಮಳೆಗಾಲದ ಪ್ರವಾಹದ ನೀರು ನುಗ್ಗಿ ನಿವಾಸಿಗಳು ಮೂರ್ನಾಲ್ಕು ವರ್ಷಗಳಿಂದ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುವ ದುಃಸ್ಥಿತಿ ನಿರ್ಮಾಣವಾಗಿದೆ’ ಎಂದು ರಾಜ ಕಾಲುವೆ ಸಂರಕ್ಷಣಾ ಸಮಿತಿ ಪದಾಧಿಕಾರಿಗಳು ಅಳಲು ತೋಡಿಕೊಂಡರು.</p>.<p>‘ಈಗ ಸಿಸಿ ಚರಂಡಿ ನಿರ್ಮಿಸುವ ಮೂಲಕ ಕಾಲುವೆಯನ್ನೇ ಅಧಿಕೃತವಾಗಿ ಕಿರಿದಾಗಿಸುವ ಪ್ರಯತ್ನ ನಡೆಯುತ್ತಿದೆ. ಇದಕ್ಕಾಗಿ ಸಣ್ಣ ನೀರಾವರಿ ಇಲಾಖೆಯ ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ. ಈ ಕಾಮಗಾರಿಯಿಂದಾಗಿ ನಗರದ ಇನ್ನಷ್ಟು ಬಡಾವಣೆಗಳಿಗೆ ಮಳೆಗಾಲದಲ್ಲಿ ನೀರು ನುಗ್ಗಿ ನಿವಾಸಿಗಳನ್ನು ಸಂತ್ರಸ್ಥರನ್ನಾಗಿಸುತ್ತದೆ’ ಎಂದು ದೂರಿದರು.</p>.<p>‘ಯಾವುದೇ ಕಾರಣಕ್ಕೂ ಈಗ ನಡೆಯುತ್ತಿರುವ ಕಾಮಗಾರಿಯನ್ನು ಮುಂದುವರಿಸಬಾರದು. ಶತಮಾನಗಳಿಂದ ಪ್ರಕೃತಿದತ್ತವಾಗಿ ಮಳೆ ನೀರು ಹಾಗೂ ಜಮೀನುಗಳ ಬಸಿ ನೀರು ಹರಿದು ಹೋಗುವ ಮಾರ್ಗಕ್ಕೆ ಯಾವುದೇ ಅಡ್ಡಿ, ಆತಂಕ ಸೃಷ್ಟಿಸಬಾರದು’ ಎಂದರು.</p>.<p>‘ರಾಜ ಕಾಲುವೆ ಹರಿದು ಹೋಗುವ ಮಾರ್ಗವನ್ನು ಭೂ ಮಾಪಕರಿಂದ ಮಾರ್ಚ್ 18ರಂದು ಅಳತೆ ಮಾಡಿಸೋಣ. ಅಲ್ಲಿವರೆಗೆ ಕಾಮಗಾರಿ ಸ್ಥಗಿತಗೊಳಿಸಿ. ಅಳತೆ ಮಾಡುವಾಗ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು, ರಾಜ ಕಾಲುವೆ ಸಂರಕ್ಷಣಾ ಸಮಿತಿ ಪದಾಧಿಕಾರಿಗಳು ಹಾಜರಿರಬೇಕು’ ಎಂದು ತಹಶೀಲ್ದಾರ್ ಸೂಚಿಸಿದರು.</p>.<p>ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್, ಟಿ.ಜೆ.ಮುರುಗೇಶಪ್ಪ, ಎಂ.ಎಸ್.ಬಾಬುಲಾಲ್, ಐರಣಿ ಹನುಮಂತಪ್ಪ, ಬಿ.ಮಗ್ದುಮ್, ರಮೇಶ್ ಮಾನೆ, ಪ್ರೀತಮ್ ಬಾಬು, ಜಫ್ರುಲ್ಲಾ ಕನವಳ್ಳಿ, ಇಮ್ತಿಯಾಜ್ ಜಲಾಲ್, ನೂರುಲ್ಲಾ ಪಟೇಲ್, ಅಣ್ಣಪ್ಪ ಅಜ್ಜೇರ್, ನಜೀರ್ ಹುಸೇನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260317-43-380305942</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>