<p>ಹರಿಹರ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೇನರ್ ಲಾರಿಯೊಂದು ಪಲ್ಟಿಯಾಗಿ ಹಲವು ಗಂಟೆ ವಾಹನ ಸಂಚಾರಕ್ಕೆ ಅಡ್ಡಿಯಾಯಿತು.</p>.<p>ಬೆಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಲಾರಿ ಶುಕ್ರವಾರ ಮಧ್ಯಾಹ್ನ ಹೆದ್ದಾರಿಯ ಸೇತುವೆ ಮೇಲೆ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಉರುಳಿಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಸಣ್ಣ, ಪುಟ್ಟ ಗಾಯಗಳಾಗಿದ್ದು, ರಸ್ತೆ ವಿಭಜಕಕ್ಕೆ ಅಳವಡಿಸಿದ್ದ ದಪ್ಪ ತಗಡಿನ ಪಟ್ಟಿ ಕಿತ್ತು ಬಂದಿದೆ.</p>.<p>ಲಾರಿ ಡಿಕ್ಕಿಯಾದ ರಭಸಕ್ಕೆ ರಸ್ತೆ ವಿಭಜಕದ 100 ಅಡಿಗಳವರೆಗಿನ ತಗಡು ಕಿತ್ತುಬಂದಿದೆ. ಪಲ್ಟಿಯಾದ ನಂತರ ಲಾರಿಯ ಡೀಸೆಲ್ ಟ್ಯಾಂಕ್ಗೂ ಹಾನಿಯಾಗಿ ಡೀಸೆಲ್ ರಸ್ತೆ ತುಂಬ ಹರಡಿತ್ತು.</p>.<p>ಅಗ್ನಿ ಅನಾಹುತ ತಡೆಯಲು ಸ್ಥಳಕ್ಕೆ ಆಗಮಿಸಿದ್ದ ಗ್ರಾಮಾಂತರ ಪೊಲೀಸರು ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಯಿಸಿ ಲಾರಿ ಹಾಗೂ ಅಕ್ಕಪಕ್ಕದ ಪ್ರದೇಶಕ್ಕೆ ನೀರು ಸಿಂಪರಣೆ ಮಾಡಿಸಿದರು. ಸ್ಥಳಕ್ಕೆ ಗ್ರಾಮಾಂತರ ಠಾಣೆ ಸಿಬ್ಬಂದಿ ಶೇಖರಪ್ಪ, ನಾಗರಾಜ್ ಆಗಮಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-43-1080515804</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಿಹರ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೇನರ್ ಲಾರಿಯೊಂದು ಪಲ್ಟಿಯಾಗಿ ಹಲವು ಗಂಟೆ ವಾಹನ ಸಂಚಾರಕ್ಕೆ ಅಡ್ಡಿಯಾಯಿತು.</p>.<p>ಬೆಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಲಾರಿ ಶುಕ್ರವಾರ ಮಧ್ಯಾಹ್ನ ಹೆದ್ದಾರಿಯ ಸೇತುವೆ ಮೇಲೆ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಉರುಳಿಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಸಣ್ಣ, ಪುಟ್ಟ ಗಾಯಗಳಾಗಿದ್ದು, ರಸ್ತೆ ವಿಭಜಕಕ್ಕೆ ಅಳವಡಿಸಿದ್ದ ದಪ್ಪ ತಗಡಿನ ಪಟ್ಟಿ ಕಿತ್ತು ಬಂದಿದೆ.</p>.<p>ಲಾರಿ ಡಿಕ್ಕಿಯಾದ ರಭಸಕ್ಕೆ ರಸ್ತೆ ವಿಭಜಕದ 100 ಅಡಿಗಳವರೆಗಿನ ತಗಡು ಕಿತ್ತುಬಂದಿದೆ. ಪಲ್ಟಿಯಾದ ನಂತರ ಲಾರಿಯ ಡೀಸೆಲ್ ಟ್ಯಾಂಕ್ಗೂ ಹಾನಿಯಾಗಿ ಡೀಸೆಲ್ ರಸ್ತೆ ತುಂಬ ಹರಡಿತ್ತು.</p>.<p>ಅಗ್ನಿ ಅನಾಹುತ ತಡೆಯಲು ಸ್ಥಳಕ್ಕೆ ಆಗಮಿಸಿದ್ದ ಗ್ರಾಮಾಂತರ ಪೊಲೀಸರು ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಯಿಸಿ ಲಾರಿ ಹಾಗೂ ಅಕ್ಕಪಕ್ಕದ ಪ್ರದೇಶಕ್ಕೆ ನೀರು ಸಿಂಪರಣೆ ಮಾಡಿಸಿದರು. ಸ್ಥಳಕ್ಕೆ ಗ್ರಾಮಾಂತರ ಠಾಣೆ ಸಿಬ್ಬಂದಿ ಶೇಖರಪ್ಪ, ನಾಗರಾಜ್ ಆಗಮಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-43-1080515804</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>