<p><strong>ದಾವಣಗೆರೆ:</strong> ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ (ಪ್ರತಿಬಂಧಕ) ಮಸೂದೆ– 2025’ ರಚನೆ ಕುರಿತು ಸರ್ಕಾರದ ವಿರುದ್ಧ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. </p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಸೂದೆಯ ಪ್ರತಿಯನ್ನು ಹರಿದುಹಾಕಿದ ಪ್ರಮೋದ್ ಮುತಾಲಿಕ್, ‘ಮಸೂದೆ ಜಾರಿಗೊಳಿಸಿದರೆ ನೀಡಿದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು. </p>.<p>‘ಗೋಹತ್ಯೆ ವಿರುದ್ಧ ಧ್ವನಿ ಎತ್ತಬಾರದೇ?, ಲವ್ ಜಿಹಾದ್, ಮತಾಂತರದ ಬಗ್ಗೆ ಮಾತನಾಡಬಾರದೇ? ಇವುಗಳ ಬಗ್ಗೆ ಹಿಂದೂಗಳಲ್ಲಿ ಜಾಗೃತಿ ಮೂಡಿಸುವುದು ದ್ವೇಷ ಭಾಷಣವೇ?’ ಎಂದು ಪ್ರಶ್ನಿಸಿದರು. ಮಸೂದೆ ರಚಿಸಿದ್ದರ ಹಿಂದೆ ಹಿಂದೂ ಸಂಘಟನೆಗಳು, ಹಿಂದೂ ಮುಖಂಡರನ್ನು ಹತ್ತಿಕ್ಕುವ ಷಡ್ಯಂತ್ರವಿದೆ’ ಎಂದು ದೂರಿದರು.</p>.<p>ಬೆಳಗಾವಿ ಅಧಿವೇಶನದಲ್ಲಿ ಈ ಮಸೂದೆಗೆ ಅನುಮೋದನೆ ದೊರೆಯದಂತೆ ನೋಡಿಕೊಳ್ಳುವಂತೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನು ಭೇಟಿ ಮಾಡಿ ಮನವಿ ಮಾಡುತ್ತೇವೆ’ ಎಂದರು. </p>.<p>‘ಕರ್ನಾಟಕ ಸಾಮಾಜಿಕ ಬಹಿಷ್ಕಾರ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಅನ್ನು ಸ್ವಾಗತಿಸುತ್ತೇವೆ. ಜಾತಿ ದ್ವೇಷ, ಅಸ್ಪೃಶ್ಯತೆ, ಬಹಿಷ್ಕಾರಗಳಿಗೆ ಕಡಿವಾಣ ಹಾಕುವ ಇಂತಹ ಮಸೂದೆಗೆ ನಮ್ಮ ಸಹಮತವಿದೆ’ ಎಂದು ಮುತಾಲಿಕ್ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ (ಪ್ರತಿಬಂಧಕ) ಮಸೂದೆ– 2025’ ರಚನೆ ಕುರಿತು ಸರ್ಕಾರದ ವಿರುದ್ಧ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. </p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಸೂದೆಯ ಪ್ರತಿಯನ್ನು ಹರಿದುಹಾಕಿದ ಪ್ರಮೋದ್ ಮುತಾಲಿಕ್, ‘ಮಸೂದೆ ಜಾರಿಗೊಳಿಸಿದರೆ ನೀಡಿದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದರು. </p>.<p>‘ಗೋಹತ್ಯೆ ವಿರುದ್ಧ ಧ್ವನಿ ಎತ್ತಬಾರದೇ?, ಲವ್ ಜಿಹಾದ್, ಮತಾಂತರದ ಬಗ್ಗೆ ಮಾತನಾಡಬಾರದೇ? ಇವುಗಳ ಬಗ್ಗೆ ಹಿಂದೂಗಳಲ್ಲಿ ಜಾಗೃತಿ ಮೂಡಿಸುವುದು ದ್ವೇಷ ಭಾಷಣವೇ?’ ಎಂದು ಪ್ರಶ್ನಿಸಿದರು. ಮಸೂದೆ ರಚಿಸಿದ್ದರ ಹಿಂದೆ ಹಿಂದೂ ಸಂಘಟನೆಗಳು, ಹಿಂದೂ ಮುಖಂಡರನ್ನು ಹತ್ತಿಕ್ಕುವ ಷಡ್ಯಂತ್ರವಿದೆ’ ಎಂದು ದೂರಿದರು.</p>.<p>ಬೆಳಗಾವಿ ಅಧಿವೇಶನದಲ್ಲಿ ಈ ಮಸೂದೆಗೆ ಅನುಮೋದನೆ ದೊರೆಯದಂತೆ ನೋಡಿಕೊಳ್ಳುವಂತೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನು ಭೇಟಿ ಮಾಡಿ ಮನವಿ ಮಾಡುತ್ತೇವೆ’ ಎಂದರು. </p>.<p>‘ಕರ್ನಾಟಕ ಸಾಮಾಜಿಕ ಬಹಿಷ್ಕಾರ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಅನ್ನು ಸ್ವಾಗತಿಸುತ್ತೇವೆ. ಜಾತಿ ದ್ವೇಷ, ಅಸ್ಪೃಶ್ಯತೆ, ಬಹಿಷ್ಕಾರಗಳಿಗೆ ಕಡಿವಾಣ ಹಾಕುವ ಇಂತಹ ಮಸೂದೆಗೆ ನಮ್ಮ ಸಹಮತವಿದೆ’ ಎಂದು ಮುತಾಲಿಕ್ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>