<p><strong>ದಾವಣಗೆರೆ</strong>: ಮಧುಮೇಹ, ರಕ್ತದೊತ್ತಡದಂತಹ ಕಾಯಿಲೆಗಳು ಚಿಕ್ಕ ಮಕ್ಕಳಲ್ಲಿಯೂ ಕಾಣಿಸಿಕೊಳ್ಳುತ್ತಿವೆ. ದೈಹಿಕ ಚಟುವಟಿಕೆ ಕಡಿಮೆಯಾಗಿರುವುದೇ ಇದಕ್ಕೆ ಕಾರಣ. ಅಂಕದಷ್ಟೇ ಆರೋಗ್ಯವೂ ಮುಖ್ಯ ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದರು.</p>.<p>ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ 14 ಮತ್ತು 17 ವರ್ಷದ ಒಳಗಿನ ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಮಾನಸಿಕ ಮತ್ತು ದೈಹಿಕ ಸಮತೋಲನ ಕಾಪಾಡಿಕೊಳ್ಳಲು ಕ್ರೀಡೆ ಅಗತ್ಯ. ಪಠ್ಯದ ಜೊತೆಗೆ ಕ್ರೀಡೆಗೂ ಒತ್ತು ನೀಡಬೇಕಿದೆ’ ಎಂದು ಹೇಳಿದರು.</p>.<p>‘ಕ್ರೀಡೆಯ ಬಗ್ಗೆ ಆಸಕ್ತಿ ಹೊಂದಿರುವವರ ಸಂಖ್ಯೆ ಹೆಚ್ಚಾಗಿದೆ. ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣವಾದರೆ ಕ್ರೀಡೆಗೆ ಇನ್ನಷ್ಟು ಪ್ರೋತ್ಸಾಹ ಸಿಗಲಿದೆ. ಜಿಲ್ಲೆಯ ಕ್ರೀಡಾಪಟುಗಳು ಅಂತರರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲು ಸಹಕಾರಿಯಾಗಲಿದೆ’ ಎಂದರು.</p>.<p>ಬಿಇಒ ಪುಷ್ಪಲತಾ, ತಾಲ್ಲೂಕು ದೈಹಿಕ ಪರಿವೀಕ್ಷಕ ವಿಜಯಕುಮಾರ್, ಬಿಆರ್ಸಿ ಚೌಡಪ್ಪ, ಡಿ.ಎನ್. ಗಣೇಶ್, ಶ್ರೀನಿವಾಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಮಧುಮೇಹ, ರಕ್ತದೊತ್ತಡದಂತಹ ಕಾಯಿಲೆಗಳು ಚಿಕ್ಕ ಮಕ್ಕಳಲ್ಲಿಯೂ ಕಾಣಿಸಿಕೊಳ್ಳುತ್ತಿವೆ. ದೈಹಿಕ ಚಟುವಟಿಕೆ ಕಡಿಮೆಯಾಗಿರುವುದೇ ಇದಕ್ಕೆ ಕಾರಣ. ಅಂಕದಷ್ಟೇ ಆರೋಗ್ಯವೂ ಮುಖ್ಯ ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದರು.</p>.<p>ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ 14 ಮತ್ತು 17 ವರ್ಷದ ಒಳಗಿನ ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಮಾನಸಿಕ ಮತ್ತು ದೈಹಿಕ ಸಮತೋಲನ ಕಾಪಾಡಿಕೊಳ್ಳಲು ಕ್ರೀಡೆ ಅಗತ್ಯ. ಪಠ್ಯದ ಜೊತೆಗೆ ಕ್ರೀಡೆಗೂ ಒತ್ತು ನೀಡಬೇಕಿದೆ’ ಎಂದು ಹೇಳಿದರು.</p>.<p>‘ಕ್ರೀಡೆಯ ಬಗ್ಗೆ ಆಸಕ್ತಿ ಹೊಂದಿರುವವರ ಸಂಖ್ಯೆ ಹೆಚ್ಚಾಗಿದೆ. ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣವಾದರೆ ಕ್ರೀಡೆಗೆ ಇನ್ನಷ್ಟು ಪ್ರೋತ್ಸಾಹ ಸಿಗಲಿದೆ. ಜಿಲ್ಲೆಯ ಕ್ರೀಡಾಪಟುಗಳು ಅಂತರರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲು ಸಹಕಾರಿಯಾಗಲಿದೆ’ ಎಂದರು.</p>.<p>ಬಿಇಒ ಪುಷ್ಪಲತಾ, ತಾಲ್ಲೂಕು ದೈಹಿಕ ಪರಿವೀಕ್ಷಕ ವಿಜಯಕುಮಾರ್, ಬಿಆರ್ಸಿ ಚೌಡಪ್ಪ, ಡಿ.ಎನ್. ಗಣೇಶ್, ಶ್ರೀನಿವಾಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>