ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ‘ರಾಜ್ಯದಲ್ಲಿ ಎಲ್ಲಿಯೂ ಆಕ್ಸಿಜನ್ ಕೊರತೆ ಇಲ್ಲ. ರೆಮ್ಡಿಸಿವಿರ್ ಪ್ರತಿ ಜಿಲ್ಲೆಯಲ್ಲೂ ಹೆಚ್ಚಿನ ಪ್ರಮಾಣದಲ್ಲಿವೆ. ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ನನ್ನೊಂದಿಗೆ ಮಾತನಾಡಿದ್ದು, ಇದುವರೆಗೆ ಅವರು ರೆಮ್ಡಿಸಿವಿರ್ನ 10 ಲಕ್ಷ ವಯಲ್ಗಳನ್ನು ರಾಜ್ಯಕ್ಕೆ ಕಳುಹಿಸಿಕೊಟ್ಟಿದ್ದಾರೆ’ ಎಂದರು.