<p><strong>ದಾವಣಗೆರೆ: </strong>ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದಲ್ಲಿ ಎಲ್ಲಾ ವಯೋಮಾನದವರಿಗೂ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.</p>.<p>ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ‘ರಾಜ್ಯದಲ್ಲಿ ಎಲ್ಲಿಯೂ ಆಕ್ಸಿಜನ್ ಕೊರತೆ ಇಲ್ಲ. ರೆಮ್ಡಿಸಿವಿರ್ ಪ್ರತಿ ಜಿಲ್ಲೆಯಲ್ಲೂ ಹೆಚ್ಚಿನ ಪ್ರಮಾಣದಲ್ಲಿವೆ. ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ನನ್ನೊಂದಿಗೆ ಮಾತನಾಡಿದ್ದು, ಇದುವರೆಗೆ ಅವರು ರೆಮ್ಡಿಸಿವಿರ್ನ 10 ಲಕ್ಷ ವಯಲ್ಗಳನ್ನು ರಾಜ್ಯಕ್ಕೆ ಕಳುಹಿಸಿಕೊಟ್ಟಿದ್ದಾರೆ’ ಎಂದರು.</p>.<p>ಪ್ರಾರಂಭದ ದಿನಗಳಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ಕಂಡುಬಂದಿದ್ದ ಬೆಂಗಳೂರು ಮಹಾನಗರ ಹಾಗೂ ಜಿಲ್ಲೆಗಳಲ್ಲಿ ಈಗ ಸೋಂಕು ಇಳಿಮುಖವಾಗಿದೆ. ಶೇ 47ರಷ್ಟಿದ್ದ ಅದರ ಪ್ರಮಾಣ ಶೇ 23ರಿಂದ 24ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದರು.</p>.<p>ಲಾಕ್ಡೌನ್ ಜಾರಿಯಲ್ಲಿರುವುದರಿಂದ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆಯೇ, ಜನರು ಜಾಗೃತರಾಗಿ ನಿಯಮಗಳ ಪಾಲನೆ ಮಾಡುತ್ತಿದ್ದಾರೆಯೇ ಎಂಬುದನ್ನು ಇನ್ನೂ ಕೆಲವು ದಿನ ಕಾದು ನೋಡಬೇಕಿದೆ ಎಂದು ಅಭಿಪ್ರಾಯಪಟ್ಟರು.</p>.<p>ರಾಜ್ಯದಲ್ಲಿ ಲಾಕ್ಡೌನ್ ಮುಂದುವರಿಸಬೇಕು ಎಂಬುದು ಅನೇಕ ಸಚಿವರ ಅಭಿಪ್ರಾಯ. ಮುಖ್ಯಮಂತ್ರಿಯೂ ಅದೇ ಮನಃಸ್ಥಿತಿಯಲ್ಲಿದ್ದಾರೆ ಎಂದರು.</p>.<p><strong>ಔಷಧಗಳ ಕೊರತೆ: </strong>‘ಕಪ್ಪು ಶಿಲೀಂಧ್ರ ಸೋಂಕು ಅಥವಾ ಮ್ಯೂಕರ್ ಮೈಕೊಸಿಸ್ ಚಿಕಿತ್ಸೆಗೆ ಔಷಧಗಳ ಕೊರತೆ ಇದ್ದು, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು ಇದಕ್ಕಾಗಿ ಶತಪ್ರಯತ್ನ ಮಾಡುತ್ತಿದ್ದಾರೆ. ಕೆಲವು ಕಂಪನಿಗಳ ಜತೆಗೆ ಮಾತನಾಡಿ ಔಷಧಗಳನ್ನು ಸರಬರಾಜು ಮಾಡುವ ಭರವಸೆ ನೀಡಿದ್ದಾರೆ’ ಎಂದು ತಿಳಿಸಿದರು.</p>.<p><strong>2150 ವೈದ್ಯರ ನೇಮಕ: </strong>ರಾಜ್ಯದಲ್ಲಿ 2150 ವೈದ್ಯರು, 780 ತಜ್ಞ ವೈದ್ಯರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನೆರಡು ದಿನಗಳಲ್ಲಿ ಅವರಿಗೆ ಸ್ಥಳ ನಿಯುಕ್ತಿ ಆದೇಶ ಆಗಲಿದೆ ಎಂದು ಹೇಳಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/covid19-lockdown-extends-for-next-14-days-in-karnataka-till-june-7th-2021-cm-bs-yediyurappa-832225.html" target="_blank">ರಾಜ್ಯದಲ್ಲಿ ಜೂನ್ 7ರ ವರೆಗೂ ಲಾಕ್ಡೌನ್ ವಿಸ್ತರಣೆ– ಸಿಎಂ ಬಿಎಸ್ವೈ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದಲ್ಲಿ ಎಲ್ಲಾ ವಯೋಮಾನದವರಿಗೂ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.</p>.<p>ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ‘ರಾಜ್ಯದಲ್ಲಿ ಎಲ್ಲಿಯೂ ಆಕ್ಸಿಜನ್ ಕೊರತೆ ಇಲ್ಲ. ರೆಮ್ಡಿಸಿವಿರ್ ಪ್ರತಿ ಜಿಲ್ಲೆಯಲ್ಲೂ ಹೆಚ್ಚಿನ ಪ್ರಮಾಣದಲ್ಲಿವೆ. ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ನನ್ನೊಂದಿಗೆ ಮಾತನಾಡಿದ್ದು, ಇದುವರೆಗೆ ಅವರು ರೆಮ್ಡಿಸಿವಿರ್ನ 10 ಲಕ್ಷ ವಯಲ್ಗಳನ್ನು ರಾಜ್ಯಕ್ಕೆ ಕಳುಹಿಸಿಕೊಟ್ಟಿದ್ದಾರೆ’ ಎಂದರು.</p>.<p>ಪ್ರಾರಂಭದ ದಿನಗಳಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ಕಂಡುಬಂದಿದ್ದ ಬೆಂಗಳೂರು ಮಹಾನಗರ ಹಾಗೂ ಜಿಲ್ಲೆಗಳಲ್ಲಿ ಈಗ ಸೋಂಕು ಇಳಿಮುಖವಾಗಿದೆ. ಶೇ 47ರಷ್ಟಿದ್ದ ಅದರ ಪ್ರಮಾಣ ಶೇ 23ರಿಂದ 24ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದರು.</p>.<p>ಲಾಕ್ಡೌನ್ ಜಾರಿಯಲ್ಲಿರುವುದರಿಂದ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆಯೇ, ಜನರು ಜಾಗೃತರಾಗಿ ನಿಯಮಗಳ ಪಾಲನೆ ಮಾಡುತ್ತಿದ್ದಾರೆಯೇ ಎಂಬುದನ್ನು ಇನ್ನೂ ಕೆಲವು ದಿನ ಕಾದು ನೋಡಬೇಕಿದೆ ಎಂದು ಅಭಿಪ್ರಾಯಪಟ್ಟರು.</p>.<p>ರಾಜ್ಯದಲ್ಲಿ ಲಾಕ್ಡೌನ್ ಮುಂದುವರಿಸಬೇಕು ಎಂಬುದು ಅನೇಕ ಸಚಿವರ ಅಭಿಪ್ರಾಯ. ಮುಖ್ಯಮಂತ್ರಿಯೂ ಅದೇ ಮನಃಸ್ಥಿತಿಯಲ್ಲಿದ್ದಾರೆ ಎಂದರು.</p>.<p><strong>ಔಷಧಗಳ ಕೊರತೆ: </strong>‘ಕಪ್ಪು ಶಿಲೀಂಧ್ರ ಸೋಂಕು ಅಥವಾ ಮ್ಯೂಕರ್ ಮೈಕೊಸಿಸ್ ಚಿಕಿತ್ಸೆಗೆ ಔಷಧಗಳ ಕೊರತೆ ಇದ್ದು, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು ಇದಕ್ಕಾಗಿ ಶತಪ್ರಯತ್ನ ಮಾಡುತ್ತಿದ್ದಾರೆ. ಕೆಲವು ಕಂಪನಿಗಳ ಜತೆಗೆ ಮಾತನಾಡಿ ಔಷಧಗಳನ್ನು ಸರಬರಾಜು ಮಾಡುವ ಭರವಸೆ ನೀಡಿದ್ದಾರೆ’ ಎಂದು ತಿಳಿಸಿದರು.</p>.<p><strong>2150 ವೈದ್ಯರ ನೇಮಕ: </strong>ರಾಜ್ಯದಲ್ಲಿ 2150 ವೈದ್ಯರು, 780 ತಜ್ಞ ವೈದ್ಯರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನೆರಡು ದಿನಗಳಲ್ಲಿ ಅವರಿಗೆ ಸ್ಥಳ ನಿಯುಕ್ತಿ ಆದೇಶ ಆಗಲಿದೆ ಎಂದು ಹೇಳಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/covid19-lockdown-extends-for-next-14-days-in-karnataka-till-june-7th-2021-cm-bs-yediyurappa-832225.html" target="_blank">ರಾಜ್ಯದಲ್ಲಿ ಜೂನ್ 7ರ ವರೆಗೂ ಲಾಕ್ಡೌನ್ ವಿಸ್ತರಣೆ– ಸಿಎಂ ಬಿಎಸ್ವೈ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>