‘ರಾಜ್ಯದಲ್ಲಿ 42 ಸಾವಿರ ಮತ್ತು ಜಿಲ್ಲೆಯಲ್ಲಿ 1300 ಆಶಾ ಕಾರ್ಯಕರ್ತೆಯರಿದ್ದು, ಅವರು ಕೊರೊನಾ ತಡೆಗಟ್ಟುವ ಹೋರಾಟದಲ್ಲಿ ಆಧಾರ ಸ್ಥಂಭಗಳಾಗಿದ್ದಾರೆ. ಮನೆಮನೆಗೆ ತೆರಳಿ ಸಮಿಕ್ಷೆ ನಡೆಸುವುದು, ರಾಜ್ಯ ಪ್ರಯಾಣಿಕರು, ವಲಸೆ ಕಾರ್ಮಿಕರು ಮತ್ತು ಇತರರನ್ನು ಸ್ಕ್ರೀನಿಂಗ್ ಮಾಡುವುದು, ಅಪಾಯವನ್ನು ಮೈಮೇಲೆ ಎಳೆದುಕೊಂಡು ತಮ್ಮ ಪ್ರಾಣವನ್ನು ಲೆಕ್ಕಿಸದೇ ಕೆಲಸ ನಿರ್ವಹಿಸುತ್ತಿದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇವರ ಕಾರ್ಯಕ್ಕೆ ಸರಿಯಾದ ಗೌರವಧನ ಮತ್ತು ರಕ್ಷಣಾ ಸಾಮಗ್ರಿಗಳನ್ನು ವಿತರಿಸದೇ ಇವರನ್ನು ನಿರ್ಲಕ್ಷ್ಯ ಮಾಡುತ್ತಿದೆ’ ಎಂದು ಆರೋಪಿಸಿದರು.